Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...