Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...