Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...