Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...