Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...