Homeಮುಖಪುಟಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಮತ್ತು ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ನಡುವಿನ ಸಂಬಂಧ ಏನು?

ಕ್ಯಾಪ್ಟನ್ ಗೋಪಿನಾಥ್ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದ್ದರು ಮತ್ತು ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

- Advertisement -
- Advertisement -

ಕನ್ನಡಿಗ ಕ್ಯಾಪ್ಟನ್.ಜಿ.ಆರ್‌. ಗೋಪಿನಾಥ್‌‌‌ ಜೀವನಾಧಾರಿತ ತಮಿಳು ಚಿತ್ರ ’ಸೂರರೈ ಪೋಟ್ರು’ ಸಿನಿಮಾ ಪ್ರಿಯರ ಮನಗೆದ್ದಿದ್ದು, ಅದರಲ್ಲೂ ಸಿನಿಮಾವು ಕನ್ನಡಕ್ಕೆ ಡಬ್ಬಿಂಗ್‌‌ ಆಗಿ, ಕುವೆಂಪು, ಮಂತ್ರ ಮಾಂಗಲ್ಯ ಸೇರಿದಂತೆ ಕನ್ನಡಿಗ ಸಂಸ್ಕೃತಿಯ ಬಗ್ಗೆ ಚಿತ್ರಿಸಿದ್ದು ಕೂಡಾ ಕನ್ನಡಿಗರ ಮನಗೆದ್ದಿತ್ತು.

ಸಿನಿಮಾವು ಕ್ಯಾಪ್ಟನ್ ಗೋಪಿನಾಥ್ ಜೀವನಾಧಾರಿತ ಕತೆಯಾಗಿದ್ದರೂ, ಕಾಲ್ಪನಿಕ ಘಟನೆಗಳನ್ನು ಸೇರಿಸಲಾಗಿದೆ ಎಂದು ಸಿನಮಾ ನಿರ್ದೇಶಕಿ ಸುಧಾ ಕೆ. ಪ್ರಸಾದ್ ಹೇಳಿದ್ದರು. ಸ್ವತಃ ಕ್ಯಾಪ್ಟನ್ ಗೋಪಿನಾಥ್‌ ಕೂಡಾ “ಕಾಲ್ಪನಿಕ ಘಟನೆಗಳನ್ನು ಸೇರಿಸಿ ಮಾಡಿರುವ ಚಿತ್ರವಾಗಿದ್ದರೂ ನನ್ನ ಪುಸ್ತಕದ ಕತೆಯ ಎಳೆಯನ್ನು ಹಿಡಿದು ಮಾಡಿರುವ ಚಿತ್ರವು ತುಂಬಾ ಚೆನ್ನಾಗಿದೆ” ಎಂದು ಹೇಳಿದ್ದರು. ಜೊತೆಗೆ ಚಿತ್ರ ತಂಡಕ್ಕೆ ಶುಭಹಾರೈಸಿದ್ದರು.

ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು

ಈ ಕಮರ್ಷಿಯಲ್ ಸಿನಿಮಾ ಬಿಡುಗಡೆಯಾದ ಹಿನ್ನಲೆಯಲ್ಲಿ ಕ್ಯಾಪ್ಟನ್ ಜಿ. ಆರ್‌. ಗೋಪಿನಾಥ್ ಅವರ ಜೀವನ ಮತ್ತು ಸಾಧನೆಗಳ ಬಗ್ಗೆ ವ್ಯಾಪಕ ಹುಡುಕಾಟಗಳು, ಚರ್ಚೆಗಳು ನಡೆದು ಕನ್ನಡಿಗನೊಬ್ಬನ ಸಾಧನೆಯ ಬಗ್ಗೆ ಕನ್ನಡಿಗರು ಹೆಮ್ಮೆ ವ್ಯಕ್ತಪಡಿಸಿದ್ದರು. ಗೋಪಿನಾಥ್ ಅವರ ತಂದೆಯವರ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ಆಗಿದ್ದು, ಅವರನ್ನು ಕನ್ನಡದ ಖ್ಯಾತ ಸಾಹಿತಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರಿಗೆ ಗೊಂದಲಿಸಿಕೊಂಡು ಸಾಮಾಜಿಕ ಜಾಲಣಗಳಲ್ಲಿ ತಪ್ಪು ಮಾಹಿತಿ ಹರಡಿತ್ತು.

ಈ ಬಗ್ಗೆ ವಿಕಿಪೀಡಿಯಾದಲ್ಲಿ ಕೂಡಾ ತಪ್ಪು ಮಾಹಿತಿಯಿದ್ದು, ಅವರ ತಂದೆಯನ್ನು ”ಕನ್ನಡ ಕಾದಂಬರಿಗಾರ” ಎಂದು ತಪ್ಪಾಗಿ ಉಲ್ಲೇಖಿಸಿದೆ. (ಲಿಂಕ್ ಇಲ್ಲಿದೆ)

ಆಕೈವ್ ಲಿಂಕ್ ಇಲ್ಲಿದೆ

ಕೆಲವರು ಸ್ವಾತಂತ್ಯ್ರ ಹೋರಾಟಗಾರ, ಮಹಾತ್ಮಾ ಗಾಂಧಿಯ ಆತ್ಮಕತೆಯನ್ನು ಕನ್ನಡಕ್ಕೆ ತಂದಿದ್ದ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಅವರೇ ಕ್ಯಾಪ್ಟನ್‌ ಜಿ. ಆರ್‌. ಗೋಪಿನಾಥ್ ಅವರ ತಂದೆ ಎಂದು ತಪ್ಪು ಮಾಹಿತಿಗಳನ್ನು ಹರಡಿದ್ದರು.

ಇದನ್ನೂ ಓದಿ: ಉತ್ತರ ಕನ್ನಡ : ಕನ್ನಡ ಕಟ್ಟಿದ ಕೊಂಕಣಿಗರು

ಇದೀಗ ಸ್ವತಃ ಗೋಪಿನಾಥ್ ಅವರೇ ಗೊಂದಲಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ನಾನುಗೌರಿ.ಕಾಮ್ ಜೊತೆ ಮಾತನಾಡಿದ ಕ್ಯಾಪ್ಟನ್ ಗೋಪಿನಾಥ್, “ನನ್ನ ತಂದೆಯ ಹೆಸರು ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌’ ಎಂದಾಗಿದ್ದು ಅವರು ಗೊರೂರಿನಲ್ಲಿ ಹೈಸ್ಕೂಲ್ ಮೇಷ್ಟ್ರಾಗಿದ್ದರು. ಆದರೆ ಸಾಹಿತಿ ‘ಗೊರೂರು ರಾಮಸ್ವಾಮಿ ಅಯ್ಯಂಗಾರ್‌‌’ ನನ್ನ ದೊಡ್ಡ ಅಜ್ಜ, ಅಂದರೆ ನನ್ನ ತಾಯಿಯ ಸೋದರ ಮಾವ. ಅವರೂ ನಮ್ಮ ಊರಿನವರೇ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದೆ” ಎಂದು ಹೇಳಿದ್ದಾರೆ.

ಭಾರತೀಯ ವಾಯು ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಕ್ಯಾಪ್ಟನ್ ಜಿ.ಆರ್‌. ಗೋಪಿನಾಥ್ ಹಾಸನ ಜಿಲ್ಲೆಯ ಗೊರೂರಿನಲ್ಲಿ ಜನಿಸಿದವರು. ಎಂಟು ವರ್ಷಗಳ ಕಾಲ ಸೈನ್ಯದಲ್ಲಿ ಸೇವೆ ಸಲ್ಲಿಸಿದ್ದ ಅವರು ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಭಾಗವಹಿಸಿದ್ದರು. ನಂತರ ಸೇನೆ ತೊರೆದ ಅವರು ಸುಸ್ಥಿರ ಕೃಷಿಯಲ್ಲಿ ಅನೇಕ ಪ್ರಯೋಗವನ್ನು ಮಾಡಿ ಯಶಸ್ಸು ಗಳಿಸಿದ್ದರು.

1997 ರಲ್ಲಿ ಅವರು ಚಾರ್ಟರ್ ಹೆಲಿಕಾಪ್ಟರ್ ಸೇವೆಯಾದ ಡೆಕ್ಕನ್ ಏವಿಯೇಷನ್ ​​ಅನ್ನು ಸ್ಥಾಪಿಸಿದ ಅವರು, 2003 ರಲ್ಲಿ ಅತೀ ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆಯಾದ “ಏರ್ ಡೆಕ್ಕನ್” ಅನ್ನು ಸ್ಥಾಪಿಸಿದರು. ಇದು ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಸೇವೆ ಒದಗಿಸುತ್ತಿದ್ದ ವಿಮಾನಯಾನ ಸೇವೆ ಎಂದೇ ಹೆಸರಾಗಿತ್ತು.

ರಾಜಕಾರಣಿಯಾಗಿ ಕೂಡಾ ಕ್ಯಾಪ್ಟನ್ ತಮ್ಮದೆ ಛಾಪು ಮೂಡಿಸಿದ್ದು, 2009 ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮತ್ತು 2014 ರಲ್ಲಿ ಆಮ್ ಆದ್ಮಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು. ಗೋಪಿನಾಥ್ ಪ್ರಜಾವಾಣಿ ಪತ್ರಿಕೆಗೆ ಅಂಕಣಗಳನ್ನು ಬರೆಯುತ್ತಿದ್ದು, ‘ಯು ಕ್ಯನಾಟ್ ಮಿಸ್ ದಿಸ್ ಫ್ಲೈಟ್; ಎಸ್ಸೇ ಆನ್ ಎಮರ್ಜಿಂಗ್ ಇಂಡಿಯಾ’, ‘ಸಿಂಪ್ಲಿ ಫ್ಲೈ’, ‘ಸಿಂಪ್ಲಿ ಫ್ಲೈ: ಎ ಡೆಕ್ಕನ್ ಒಡಿಸ್ಸಿ’ ಎಂಬ ಕೃತಿಯನ್ನೂ ರಚಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಸತಿಗೆ, ಮರಾಠಾ ಪತಿ! – ಡಿ.ಎಸ್ ಚೌಗಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...