Homeಕರ್ನಾಟಕಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

ಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

- Advertisement -
- Advertisement -

“ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೂ (ಆರ್‌ಡಿಪಿಆರ್‌) ವೇದಗಣಿತದ ಕಲಿಕೆಗೂ ಸಂಬಂಧವೇನು?” ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜ್ಯದ ಹಲವಾರು ಶಾಲೆಗಳಲ್ಲಿನ 5ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯಿತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP, TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಡಿಪಿಆರ್‌ ಏಕೆ ವೇದಗಣಿತವನ್ನು ಕಲಿಸಲು ಹೊರಟಿದೆ? ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳು, ಅಂಗನವಾಡಿಗಳೆಲ್ಲ ಚೆನ್ನಾಗಿ ಅಭಿವೃದ್ಧಿಯಾಗಿವೆಯೇ? ಇವುಗಳನ್ನು ಆರ್‌ಡಿಪಿಆರ್‌‌ ದುರಸ್ತಿ ಮಾಡಬೇಕಾಲ್ಲವೇ? ಅಂಗನವಾಡಿ, ಶಾಲೆಗಳು ಸೋರುತ್ತಿವೆ ಎಂಬ ವಿಷಯ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಇದರ ಬಗ್ಗೆ ಆರ್‌ಡಿಪಿಆರ್‌ ಗಮನ ಹರಿಸುವುದನ್ನು ಬಿಟ್ಟು ವೇದಗಣಿತದ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಏತಕ್ಕೆ?” ಎಂದು ಕೇಳಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆರ್‌ಡಿಪಿಆರ್‌ ಹಣವನ್ನು ಯಾವ ಕಾನೂನಿನ ಅಡಿಯಲ್ಲಿ ವೇದಗಣಿತ ಕಲಿಸಲು ಬಳಸಲು ಮುಂದಾಗಿದ್ದಾರೆ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಏನನ್ನು ಹೇಳುತ್ತದೆ? ಆರ್‌ಡಿಪಿಆರ್‌ನವರು ಶಿಕ್ಷಣವನ್ನು ನೀಡಬಹುದಾ? ಹಾಗಾದರೆ ನಾಳೆ ಶಿಕ್ಷಣ ಇಲಾಖೆಯವರು ರಸ್ತೆ ನಿರ್ಮಾಣ ಕೆಲಸ ಮಾಡುತ್ತಾರೆಯೇ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ 29,000 ಕೋಟಿ ರೂ. ಮೀಸಲಾಗಿದೆ. ಇಷ್ಟು ದೊಡ್ಡ ಬಜೆಟ್‌ನಲ್ಲಿ ದಲಿತ ಮಕ್ಕಳ ಭವಿಷ್ಯವನ್ನು ಬದಲಿಸುವುದನ್ನು ಬಿಟ್ಟು ಇಂಥವನ್ನೆಲ್ಲ ಮಾಡುವುದರಿಂದ ಏನು ಪ್ರಯೋಜನ? ಒಂದು ವೇಳೆ ಶಿಕ್ಷಣ ಇಲಾಖೆಯೇ ವೇದಗಣಿತ ಕಲಿಸುತ್ತೇನೆಂದರೂ ಇದರ ಹಿಂದಿನ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ವೈಜ್ಞಾನಿಕ ಮನೋಭಾವನೆ ಇಲ್ಲದೆ ಐದು ಟ್ರಿಲಿಯನ್‌ ಆರ್ಥಿಕತೆ ಸೃಷ್ಟಿಸಲು ಸಾಧ್ಯವೇ? ಶ್ರೇಷ್ಠ ಭಾರತ ಕಟ್ಟಲು ಸಾಧ್ಯವೇ? ಪುರಾಣ ಗ್ರಂಥಗಳನ್ನು ಅಧ್ಯಯನ ಮಾಡಿ. ಆದರೆ ಪುರಾಣಗಳನ್ನೇ ಇತಿಹಾಸ ಎನ್ನುವುದು ಸರಿಯೇ? ರಾಮಾಯಣದಲ್ಲಿ ಹನುಮಾನ್‌ ಸಂಜೀವಿನಿ ಬೆಟ್ಟವನ್ನು ಹೊತ್ತು ತಂದ ಎಂದು ಹೇಳಲಾಗುತ್ತದೆ. ವೈಜ್ಞಾನಿಕವಾಗಿ ಇದು ಸಾಧ್ಯವಿಲ್ಲ. ಆದರೆ ವಿಜ್ಞಾನಕ್ಕೂ ಪುರಾಣಕ್ಕೂ ಹೋಲಿಕೆ ಮಾಡುವುದು ಸರಿಯೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

“ವೈಜ್ಞಾನಿಕ ಮನೋಭಾವನೆಯನ್ನು ಇಟ್ಟುಕೊಂಡು ವೇದಗಣಿತವನ್ನು ಕಲಿಸುವುದಾದರೆ ಪಠ್ಯಕ್ರಮದಲ್ಲೇ ಅಳವಡಿಸಬಹುದಿತ್ತಲ್ಲ? ಹೀಗಾಗಲೇ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಹಿಂದುಳಿದ ವರ್ಗ ಹಾಗೂ ಸಮುದಾಯದ ವಿದ್ಯಾರ್ಥಿಗಳು ವಿಜ್ಞಾನ, ಗಣಿತದಂತಹ ವಿಷಯಗಳಲ್ಲಿ ವೀಕ್‌ ಇರುತ್ತಾರೆ. ಶಿಕ್ಷಣ ಇಲಾಖೆಯು ನಿಗದಿಪಡಿಸಿದ ಪಠ್ಯಕ್ರಮವನ್ನು ಶಾಲೆಗಳಲ್ಲಿ ಬೋಧಿಸಲಾಗುತ್ತಿದೆ. ಹೀಗಿರುವಾಗ ಪರ್ಯಾಯವಾಗಿ ಬೇರೊಂದು ಗಣಿತವನ್ನು ಕಲಿಸುವುದರಿಂದ ಏನು ಪ್ರಯೋಜನ?” ಎಂದು ಟೀಕಿಸಿದರು.

“ಬಡ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನವನ್ನೇ ಸರ್ಕಾರ ಸರಿಯಾಗಿ ನೀಡುತ್ತಿಲ್ಲ. ಶಾಲಾ ಮಕ್ಕಳಿಗೆ ಸರಿಯಾಗಿ ಶೂ ಸಾಕ್ಸ್‌ ಕೊಡಲೂ ಆಗದವರು ವೇದಗಣಿತ ಹೇಳಿಕೊಡುತ್ತಾರಂತೆ” ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಮಕ್ಕಳಿಗೆ ಬೇಕಾಗಿರುವುದು ಗಣಿತವೇ ಹೊರತು ವೇದಗಣಿತ ಅಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೀಸಲಿಟ್ಟ ಹಣವನ್ನು ವೇದಗಣಿತ ಕಲಿಸಲು ಬಳಸುವುದು ಅಕ್ಷಮ್ಯ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...