Homeಕರ್ನಾಟಕಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

ಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

- Advertisement -
- Advertisement -

“ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೂ (ಆರ್‌ಡಿಪಿಆರ್‌) ವೇದಗಣಿತದ ಕಲಿಕೆಗೂ ಸಂಬಂಧವೇನು?” ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜ್ಯದ ಹಲವಾರು ಶಾಲೆಗಳಲ್ಲಿನ 5ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯಿತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP, TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಡಿಪಿಆರ್‌ ಏಕೆ ವೇದಗಣಿತವನ್ನು ಕಲಿಸಲು ಹೊರಟಿದೆ? ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳು, ಅಂಗನವಾಡಿಗಳೆಲ್ಲ ಚೆನ್ನಾಗಿ ಅಭಿವೃದ್ಧಿಯಾಗಿವೆಯೇ? ಇವುಗಳನ್ನು ಆರ್‌ಡಿಪಿಆರ್‌‌ ದುರಸ್ತಿ ಮಾಡಬೇಕಾಲ್ಲವೇ? ಅಂಗನವಾಡಿ, ಶಾಲೆಗಳು ಸೋರುತ್ತಿವೆ ಎಂಬ ವಿಷಯ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಇದರ ಬಗ್ಗೆ ಆರ್‌ಡಿಪಿಆರ್‌ ಗಮನ ಹರಿಸುವುದನ್ನು ಬಿಟ್ಟು ವೇದಗಣಿತದ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಏತಕ್ಕೆ?” ಎಂದು ಕೇಳಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆರ್‌ಡಿಪಿಆರ್‌ ಹಣವನ್ನು ಯಾವ ಕಾನೂನಿನ ಅಡಿಯಲ್ಲಿ ವೇದಗಣಿತ ಕಲಿಸಲು ಬಳಸಲು ಮುಂದಾಗಿದ್ದಾರೆ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಏನನ್ನು ಹೇಳುತ್ತದೆ? ಆರ್‌ಡಿಪಿಆರ್‌ನವರು ಶಿಕ್ಷಣವನ್ನು ನೀಡಬಹುದಾ? ಹಾಗಾದರೆ ನಾಳೆ ಶಿಕ್ಷಣ ಇಲಾಖೆಯವರು ರಸ್ತೆ ನಿರ್ಮಾಣ ಕೆಲಸ ಮಾಡುತ್ತಾರೆಯೇ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ 29,000 ಕೋಟಿ ರೂ. ಮೀಸಲಾಗಿದೆ. ಇಷ್ಟು ದೊಡ್ಡ ಬಜೆಟ್‌ನಲ್ಲಿ ದಲಿತ ಮಕ್ಕಳ ಭವಿಷ್ಯವನ್ನು ಬದಲಿಸುವುದನ್ನು ಬಿಟ್ಟು ಇಂಥವನ್ನೆಲ್ಲ ಮಾಡುವುದರಿಂದ ಏನು ಪ್ರಯೋಜನ? ಒಂದು ವೇಳೆ ಶಿಕ್ಷಣ ಇಲಾಖೆಯೇ ವೇದಗಣಿತ ಕಲಿಸುತ್ತೇನೆಂದರೂ ಇದರ ಹಿಂದಿನ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ವೈಜ್ಞಾನಿಕ ಮನೋಭಾವನೆ ಇಲ್ಲದೆ ಐದು ಟ್ರಿಲಿಯನ್‌ ಆರ್ಥಿಕತೆ ಸೃಷ್ಟಿಸಲು ಸಾಧ್ಯವೇ? ಶ್ರೇಷ್ಠ ಭಾರತ ಕಟ್ಟಲು ಸಾಧ್ಯವೇ? ಪುರಾಣ ಗ್ರಂಥಗಳನ್ನು ಅಧ್ಯಯನ ಮಾಡಿ. ಆದರೆ ಪುರಾಣಗಳನ್ನೇ ಇತಿಹಾಸ ಎನ್ನುವುದು ಸರಿಯೇ? ರಾಮಾಯಣದಲ್ಲಿ ಹನುಮಾನ್‌ ಸಂಜೀವಿನಿ ಬೆಟ್ಟವನ್ನು ಹೊತ್ತು ತಂದ ಎಂದು ಹೇಳಲಾಗುತ್ತದೆ. ವೈಜ್ಞಾನಿಕವಾಗಿ ಇದು ಸಾಧ್ಯವಿಲ್ಲ. ಆದರೆ ವಿಜ್ಞಾನಕ್ಕೂ ಪುರಾಣಕ್ಕೂ ಹೋಲಿಕೆ ಮಾಡುವುದು ಸರಿಯೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

“ವೈಜ್ಞಾನಿಕ ಮನೋಭಾವನೆಯನ್ನು ಇಟ್ಟುಕೊಂಡು ವೇದಗಣಿತವನ್ನು ಕಲಿಸುವುದಾದರೆ ಪಠ್ಯಕ್ರಮದಲ್ಲೇ ಅಳವಡಿಸಬಹುದಿತ್ತಲ್ಲ? ಹೀಗಾಗಲೇ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಹಿಂದುಳಿದ ವರ್ಗ ಹಾಗೂ ಸಮುದಾಯದ ವಿದ್ಯಾರ್ಥಿಗಳು ವಿಜ್ಞಾನ, ಗಣಿತದಂತಹ ವಿಷಯಗಳಲ್ಲಿ ವೀಕ್‌ ಇರುತ್ತಾರೆ. ಶಿಕ್ಷಣ ಇಲಾಖೆಯು ನಿಗದಿಪಡಿಸಿದ ಪಠ್ಯಕ್ರಮವನ್ನು ಶಾಲೆಗಳಲ್ಲಿ ಬೋಧಿಸಲಾಗುತ್ತಿದೆ. ಹೀಗಿರುವಾಗ ಪರ್ಯಾಯವಾಗಿ ಬೇರೊಂದು ಗಣಿತವನ್ನು ಕಲಿಸುವುದರಿಂದ ಏನು ಪ್ರಯೋಜನ?” ಎಂದು ಟೀಕಿಸಿದರು.

“ಬಡ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನವನ್ನೇ ಸರ್ಕಾರ ಸರಿಯಾಗಿ ನೀಡುತ್ತಿಲ್ಲ. ಶಾಲಾ ಮಕ್ಕಳಿಗೆ ಸರಿಯಾಗಿ ಶೂ ಸಾಕ್ಸ್‌ ಕೊಡಲೂ ಆಗದವರು ವೇದಗಣಿತ ಹೇಳಿಕೊಡುತ್ತಾರಂತೆ” ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಮಕ್ಕಳಿಗೆ ಬೇಕಾಗಿರುವುದು ಗಣಿತವೇ ಹೊರತು ವೇದಗಣಿತ ಅಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೀಸಲಿಟ್ಟ ಹಣವನ್ನು ವೇದಗಣಿತ ಕಲಿಸಲು ಬಳಸುವುದು ಅಕ್ಷಮ್ಯ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...