Homeಕರ್ನಾಟಕಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

ಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

- Advertisement -
- Advertisement -

“ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೂ (ಆರ್‌ಡಿಪಿಆರ್‌) ವೇದಗಣಿತದ ಕಲಿಕೆಗೂ ಸಂಬಂಧವೇನು?” ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜ್ಯದ ಹಲವಾರು ಶಾಲೆಗಳಲ್ಲಿನ 5ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯಿತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP, TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಡಿಪಿಆರ್‌ ಏಕೆ ವೇದಗಣಿತವನ್ನು ಕಲಿಸಲು ಹೊರಟಿದೆ? ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳು, ಅಂಗನವಾಡಿಗಳೆಲ್ಲ ಚೆನ್ನಾಗಿ ಅಭಿವೃದ್ಧಿಯಾಗಿವೆಯೇ? ಇವುಗಳನ್ನು ಆರ್‌ಡಿಪಿಆರ್‌‌ ದುರಸ್ತಿ ಮಾಡಬೇಕಾಲ್ಲವೇ? ಅಂಗನವಾಡಿ, ಶಾಲೆಗಳು ಸೋರುತ್ತಿವೆ ಎಂಬ ವಿಷಯ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಇದರ ಬಗ್ಗೆ ಆರ್‌ಡಿಪಿಆರ್‌ ಗಮನ ಹರಿಸುವುದನ್ನು ಬಿಟ್ಟು ವೇದಗಣಿತದ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಏತಕ್ಕೆ?” ಎಂದು ಕೇಳಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆರ್‌ಡಿಪಿಆರ್‌ ಹಣವನ್ನು ಯಾವ ಕಾನೂನಿನ ಅಡಿಯಲ್ಲಿ ವೇದಗಣಿತ ಕಲಿಸಲು ಬಳಸಲು ಮುಂದಾಗಿದ್ದಾರೆ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಏನನ್ನು ಹೇಳುತ್ತದೆ? ಆರ್‌ಡಿಪಿಆರ್‌ನವರು ಶಿಕ್ಷಣವನ್ನು ನೀಡಬಹುದಾ? ಹಾಗಾದರೆ ನಾಳೆ ಶಿಕ್ಷಣ ಇಲಾಖೆಯವರು ರಸ್ತೆ ನಿರ್ಮಾಣ ಕೆಲಸ ಮಾಡುತ್ತಾರೆಯೇ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ 29,000 ಕೋಟಿ ರೂ. ಮೀಸಲಾಗಿದೆ. ಇಷ್ಟು ದೊಡ್ಡ ಬಜೆಟ್‌ನಲ್ಲಿ ದಲಿತ ಮಕ್ಕಳ ಭವಿಷ್ಯವನ್ನು ಬದಲಿಸುವುದನ್ನು ಬಿಟ್ಟು ಇಂಥವನ್ನೆಲ್ಲ ಮಾಡುವುದರಿಂದ ಏನು ಪ್ರಯೋಜನ? ಒಂದು ವೇಳೆ ಶಿಕ್ಷಣ ಇಲಾಖೆಯೇ ವೇದಗಣಿತ ಕಲಿಸುತ್ತೇನೆಂದರೂ ಇದರ ಹಿಂದಿನ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ವೈಜ್ಞಾನಿಕ ಮನೋಭಾವನೆ ಇಲ್ಲದೆ ಐದು ಟ್ರಿಲಿಯನ್‌ ಆರ್ಥಿಕತೆ ಸೃಷ್ಟಿಸಲು ಸಾಧ್ಯವೇ? ಶ್ರೇಷ್ಠ ಭಾರತ ಕಟ್ಟಲು ಸಾಧ್ಯವೇ? ಪುರಾಣ ಗ್ರಂಥಗಳನ್ನು ಅಧ್ಯಯನ ಮಾಡಿ. ಆದರೆ ಪುರಾಣಗಳನ್ನೇ ಇತಿಹಾಸ ಎನ್ನುವುದು ಸರಿಯೇ? ರಾಮಾಯಣದಲ್ಲಿ ಹನುಮಾನ್‌ ಸಂಜೀವಿನಿ ಬೆಟ್ಟವನ್ನು ಹೊತ್ತು ತಂದ ಎಂದು ಹೇಳಲಾಗುತ್ತದೆ. ವೈಜ್ಞಾನಿಕವಾಗಿ ಇದು ಸಾಧ್ಯವಿಲ್ಲ. ಆದರೆ ವಿಜ್ಞಾನಕ್ಕೂ ಪುರಾಣಕ್ಕೂ ಹೋಲಿಕೆ ಮಾಡುವುದು ಸರಿಯೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

“ವೈಜ್ಞಾನಿಕ ಮನೋಭಾವನೆಯನ್ನು ಇಟ್ಟುಕೊಂಡು ವೇದಗಣಿತವನ್ನು ಕಲಿಸುವುದಾದರೆ ಪಠ್ಯಕ್ರಮದಲ್ಲೇ ಅಳವಡಿಸಬಹುದಿತ್ತಲ್ಲ? ಹೀಗಾಗಲೇ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಹಿಂದುಳಿದ ವರ್ಗ ಹಾಗೂ ಸಮುದಾಯದ ವಿದ್ಯಾರ್ಥಿಗಳು ವಿಜ್ಞಾನ, ಗಣಿತದಂತಹ ವಿಷಯಗಳಲ್ಲಿ ವೀಕ್‌ ಇರುತ್ತಾರೆ. ಶಿಕ್ಷಣ ಇಲಾಖೆಯು ನಿಗದಿಪಡಿಸಿದ ಪಠ್ಯಕ್ರಮವನ್ನು ಶಾಲೆಗಳಲ್ಲಿ ಬೋಧಿಸಲಾಗುತ್ತಿದೆ. ಹೀಗಿರುವಾಗ ಪರ್ಯಾಯವಾಗಿ ಬೇರೊಂದು ಗಣಿತವನ್ನು ಕಲಿಸುವುದರಿಂದ ಏನು ಪ್ರಯೋಜನ?” ಎಂದು ಟೀಕಿಸಿದರು.

“ಬಡ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನವನ್ನೇ ಸರ್ಕಾರ ಸರಿಯಾಗಿ ನೀಡುತ್ತಿಲ್ಲ. ಶಾಲಾ ಮಕ್ಕಳಿಗೆ ಸರಿಯಾಗಿ ಶೂ ಸಾಕ್ಸ್‌ ಕೊಡಲೂ ಆಗದವರು ವೇದಗಣಿತ ಹೇಳಿಕೊಡುತ್ತಾರಂತೆ” ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಮಕ್ಕಳಿಗೆ ಬೇಕಾಗಿರುವುದು ಗಣಿತವೇ ಹೊರತು ವೇದಗಣಿತ ಅಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೀಸಲಿಟ್ಟ ಹಣವನ್ನು ವೇದಗಣಿತ ಕಲಿಸಲು ಬಳಸುವುದು ಅಕ್ಷಮ್ಯ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...