Homeಕರ್ನಾಟಕಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

ಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

- Advertisement -
- Advertisement -

“ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೂ (ಆರ್‌ಡಿಪಿಆರ್‌) ವೇದಗಣಿತದ ಕಲಿಕೆಗೂ ಸಂಬಂಧವೇನು?” ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜ್ಯದ ಹಲವಾರು ಶಾಲೆಗಳಲ್ಲಿನ 5ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯಿತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP, TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಡಿಪಿಆರ್‌ ಏಕೆ ವೇದಗಣಿತವನ್ನು ಕಲಿಸಲು ಹೊರಟಿದೆ? ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳು, ಅಂಗನವಾಡಿಗಳೆಲ್ಲ ಚೆನ್ನಾಗಿ ಅಭಿವೃದ್ಧಿಯಾಗಿವೆಯೇ? ಇವುಗಳನ್ನು ಆರ್‌ಡಿಪಿಆರ್‌‌ ದುರಸ್ತಿ ಮಾಡಬೇಕಾಲ್ಲವೇ? ಅಂಗನವಾಡಿ, ಶಾಲೆಗಳು ಸೋರುತ್ತಿವೆ ಎಂಬ ವಿಷಯ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಇದರ ಬಗ್ಗೆ ಆರ್‌ಡಿಪಿಆರ್‌ ಗಮನ ಹರಿಸುವುದನ್ನು ಬಿಟ್ಟು ವೇದಗಣಿತದ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಏತಕ್ಕೆ?” ಎಂದು ಕೇಳಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆರ್‌ಡಿಪಿಆರ್‌ ಹಣವನ್ನು ಯಾವ ಕಾನೂನಿನ ಅಡಿಯಲ್ಲಿ ವೇದಗಣಿತ ಕಲಿಸಲು ಬಳಸಲು ಮುಂದಾಗಿದ್ದಾರೆ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಏನನ್ನು ಹೇಳುತ್ತದೆ? ಆರ್‌ಡಿಪಿಆರ್‌ನವರು ಶಿಕ್ಷಣವನ್ನು ನೀಡಬಹುದಾ? ಹಾಗಾದರೆ ನಾಳೆ ಶಿಕ್ಷಣ ಇಲಾಖೆಯವರು ರಸ್ತೆ ನಿರ್ಮಾಣ ಕೆಲಸ ಮಾಡುತ್ತಾರೆಯೇ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ 29,000 ಕೋಟಿ ರೂ. ಮೀಸಲಾಗಿದೆ. ಇಷ್ಟು ದೊಡ್ಡ ಬಜೆಟ್‌ನಲ್ಲಿ ದಲಿತ ಮಕ್ಕಳ ಭವಿಷ್ಯವನ್ನು ಬದಲಿಸುವುದನ್ನು ಬಿಟ್ಟು ಇಂಥವನ್ನೆಲ್ಲ ಮಾಡುವುದರಿಂದ ಏನು ಪ್ರಯೋಜನ? ಒಂದು ವೇಳೆ ಶಿಕ್ಷಣ ಇಲಾಖೆಯೇ ವೇದಗಣಿತ ಕಲಿಸುತ್ತೇನೆಂದರೂ ಇದರ ಹಿಂದಿನ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ವೈಜ್ಞಾನಿಕ ಮನೋಭಾವನೆ ಇಲ್ಲದೆ ಐದು ಟ್ರಿಲಿಯನ್‌ ಆರ್ಥಿಕತೆ ಸೃಷ್ಟಿಸಲು ಸಾಧ್ಯವೇ? ಶ್ರೇಷ್ಠ ಭಾರತ ಕಟ್ಟಲು ಸಾಧ್ಯವೇ? ಪುರಾಣ ಗ್ರಂಥಗಳನ್ನು ಅಧ್ಯಯನ ಮಾಡಿ. ಆದರೆ ಪುರಾಣಗಳನ್ನೇ ಇತಿಹಾಸ ಎನ್ನುವುದು ಸರಿಯೇ? ರಾಮಾಯಣದಲ್ಲಿ ಹನುಮಾನ್‌ ಸಂಜೀವಿನಿ ಬೆಟ್ಟವನ್ನು ಹೊತ್ತು ತಂದ ಎಂದು ಹೇಳಲಾಗುತ್ತದೆ. ವೈಜ್ಞಾನಿಕವಾಗಿ ಇದು ಸಾಧ್ಯವಿಲ್ಲ. ಆದರೆ ವಿಜ್ಞಾನಕ್ಕೂ ಪುರಾಣಕ್ಕೂ ಹೋಲಿಕೆ ಮಾಡುವುದು ಸರಿಯೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

“ವೈಜ್ಞಾನಿಕ ಮನೋಭಾವನೆಯನ್ನು ಇಟ್ಟುಕೊಂಡು ವೇದಗಣಿತವನ್ನು ಕಲಿಸುವುದಾದರೆ ಪಠ್ಯಕ್ರಮದಲ್ಲೇ ಅಳವಡಿಸಬಹುದಿತ್ತಲ್ಲ? ಹೀಗಾಗಲೇ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಹಿಂದುಳಿದ ವರ್ಗ ಹಾಗೂ ಸಮುದಾಯದ ವಿದ್ಯಾರ್ಥಿಗಳು ವಿಜ್ಞಾನ, ಗಣಿತದಂತಹ ವಿಷಯಗಳಲ್ಲಿ ವೀಕ್‌ ಇರುತ್ತಾರೆ. ಶಿಕ್ಷಣ ಇಲಾಖೆಯು ನಿಗದಿಪಡಿಸಿದ ಪಠ್ಯಕ್ರಮವನ್ನು ಶಾಲೆಗಳಲ್ಲಿ ಬೋಧಿಸಲಾಗುತ್ತಿದೆ. ಹೀಗಿರುವಾಗ ಪರ್ಯಾಯವಾಗಿ ಬೇರೊಂದು ಗಣಿತವನ್ನು ಕಲಿಸುವುದರಿಂದ ಏನು ಪ್ರಯೋಜನ?” ಎಂದು ಟೀಕಿಸಿದರು.

“ಬಡ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನವನ್ನೇ ಸರ್ಕಾರ ಸರಿಯಾಗಿ ನೀಡುತ್ತಿಲ್ಲ. ಶಾಲಾ ಮಕ್ಕಳಿಗೆ ಸರಿಯಾಗಿ ಶೂ ಸಾಕ್ಸ್‌ ಕೊಡಲೂ ಆಗದವರು ವೇದಗಣಿತ ಹೇಳಿಕೊಡುತ್ತಾರಂತೆ” ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಮಕ್ಕಳಿಗೆ ಬೇಕಾಗಿರುವುದು ಗಣಿತವೇ ಹೊರತು ವೇದಗಣಿತ ಅಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೀಸಲಿಟ್ಟ ಹಣವನ್ನು ವೇದಗಣಿತ ಕಲಿಸಲು ಬಳಸುವುದು ಅಕ್ಷಮ್ಯ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...