Homeಕರ್ನಾಟಕಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

ಗ್ರಾಮಾಭಿವೃದ್ಧಿ ಇಲಾಖೆಗೂ ವೇದಗಣಿತ ಕಲಿಕೆಗೂ ಏನು ಸಂಬಂಧ?: ಪ್ರಿಯಾಂಕ್‌ ಪಶ್ನೆ

- Advertisement -
- Advertisement -

“ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಗೂ (ಆರ್‌ಡಿಪಿಆರ್‌) ವೇದಗಣಿತದ ಕಲಿಕೆಗೂ ಸಂಬಂಧವೇನು?” ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದರು.

ರಾಜ್ಯದ ಹಲವಾರು ಶಾಲೆಗಳಲ್ಲಿನ 5ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಸರ್ಕಾರೇತರ ಸಂಸ್ಥೆಗಳಿಗೆ ಪ್ರತಿ ಗ್ರಾಮ ಪಂಚಾಯಿತಿಗಳಿಂದ ತಲಾ ಒಂದು ಲಕ್ಷ ಹಣ ನೀಡಲಾಗುತ್ತಿದೆ. ಅದಕ್ಕಾಗಿ ಗ್ರಾಮ ಪಂಚಾಯಿತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು ಬಳಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಅಲ್ಲದೇ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಗಳಲ್ಲಿನ SCSP, TSP ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರ್‌ಡಿಪಿಆರ್‌ ಏಕೆ ವೇದಗಣಿತವನ್ನು ಕಲಿಸಲು ಹೊರಟಿದೆ? ಗ್ರಾಮೀಣ ಪ್ರದೇಶದಲ್ಲಿ ಶಾಲಾ ಕಟ್ಟಡಗಳು, ಅಂಗನವಾಡಿಗಳೆಲ್ಲ ಚೆನ್ನಾಗಿ ಅಭಿವೃದ್ಧಿಯಾಗಿವೆಯೇ? ಇವುಗಳನ್ನು ಆರ್‌ಡಿಪಿಆರ್‌‌ ದುರಸ್ತಿ ಮಾಡಬೇಕಾಲ್ಲವೇ? ಅಂಗನವಾಡಿ, ಶಾಲೆಗಳು ಸೋರುತ್ತಿವೆ ಎಂಬ ವಿಷಯ ಸದನದಲ್ಲಿ ಚರ್ಚೆಯಾಗುತ್ತಲೇ ಇದೆ. ಇದರ ಬಗ್ಗೆ ಆರ್‌ಡಿಪಿಆರ್‌ ಗಮನ ಹರಿಸುವುದನ್ನು ಬಿಟ್ಟು ವೇದಗಣಿತದ ಬಗ್ಗೆ ಆಸಕ್ತಿ ತೋರಿಸುತ್ತಿರುವುದು ಏತಕ್ಕೆ?” ಎಂದು ಕೇಳಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ಆರ್‌ಡಿಪಿಆರ್‌ ಹಣವನ್ನು ಯಾವ ಕಾನೂನಿನ ಅಡಿಯಲ್ಲಿ ವೇದಗಣಿತ ಕಲಿಸಲು ಬಳಸಲು ಮುಂದಾಗಿದ್ದಾರೆ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಏನನ್ನು ಹೇಳುತ್ತದೆ? ಆರ್‌ಡಿಪಿಆರ್‌ನವರು ಶಿಕ್ಷಣವನ್ನು ನೀಡಬಹುದಾ? ಹಾಗಾದರೆ ನಾಳೆ ಶಿಕ್ಷಣ ಇಲಾಖೆಯವರು ರಸ್ತೆ ನಿರ್ಮಾಣ ಕೆಲಸ ಮಾಡುತ್ತಾರೆಯೇ? ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ 29,000 ಕೋಟಿ ರೂ. ಮೀಸಲಾಗಿದೆ. ಇಷ್ಟು ದೊಡ್ಡ ಬಜೆಟ್‌ನಲ್ಲಿ ದಲಿತ ಮಕ್ಕಳ ಭವಿಷ್ಯವನ್ನು ಬದಲಿಸುವುದನ್ನು ಬಿಟ್ಟು ಇಂಥವನ್ನೆಲ್ಲ ಮಾಡುವುದರಿಂದ ಏನು ಪ್ರಯೋಜನ? ಒಂದು ವೇಳೆ ಶಿಕ್ಷಣ ಇಲಾಖೆಯೇ ವೇದಗಣಿತ ಕಲಿಸುತ್ತೇನೆಂದರೂ ಇದರ ಹಿಂದಿನ ಉದ್ದೇಶವೇನು?” ಎಂದು ಪ್ರಶ್ನಿಸಿದರು.

“ವೈಜ್ಞಾನಿಕ ಮನೋಭಾವನೆ ಇಲ್ಲದೆ ಐದು ಟ್ರಿಲಿಯನ್‌ ಆರ್ಥಿಕತೆ ಸೃಷ್ಟಿಸಲು ಸಾಧ್ಯವೇ? ಶ್ರೇಷ್ಠ ಭಾರತ ಕಟ್ಟಲು ಸಾಧ್ಯವೇ? ಪುರಾಣ ಗ್ರಂಥಗಳನ್ನು ಅಧ್ಯಯನ ಮಾಡಿ. ಆದರೆ ಪುರಾಣಗಳನ್ನೇ ಇತಿಹಾಸ ಎನ್ನುವುದು ಸರಿಯೇ? ರಾಮಾಯಣದಲ್ಲಿ ಹನುಮಾನ್‌ ಸಂಜೀವಿನಿ ಬೆಟ್ಟವನ್ನು ಹೊತ್ತು ತಂದ ಎಂದು ಹೇಳಲಾಗುತ್ತದೆ. ವೈಜ್ಞಾನಿಕವಾಗಿ ಇದು ಸಾಧ್ಯವಿಲ್ಲ. ಆದರೆ ವಿಜ್ಞಾನಕ್ಕೂ ಪುರಾಣಕ್ಕೂ ಹೋಲಿಕೆ ಮಾಡುವುದು ಸರಿಯೇ?” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿರಿ: ವೇದಗಣಿತ ತರಬೇತಿಯ ಉಪಯೋಗಕ್ಕಿಂತ ಅಪಾಯವೇ ಹೆಚ್ಚು: ದಲಿತರ ಮೀಸಲು ಹಣ ದುರ್ಬಳಕೆಗೆ ಆಕ್ರೋಶ

“ವೈಜ್ಞಾನಿಕ ಮನೋಭಾವನೆಯನ್ನು ಇಟ್ಟುಕೊಂಡು ವೇದಗಣಿತವನ್ನು ಕಲಿಸುವುದಾದರೆ ಪಠ್ಯಕ್ರಮದಲ್ಲೇ ಅಳವಡಿಸಬಹುದಿತ್ತಲ್ಲ? ಹೀಗಾಗಲೇ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಹಿಂದುಳಿದ ವರ್ಗ ಹಾಗೂ ಸಮುದಾಯದ ವಿದ್ಯಾರ್ಥಿಗಳು ವಿಜ್ಞಾನ, ಗಣಿತದಂತಹ ವಿಷಯಗಳಲ್ಲಿ ವೀಕ್‌ ಇರುತ್ತಾರೆ. ಶಿಕ್ಷಣ ಇಲಾಖೆಯು ನಿಗದಿಪಡಿಸಿದ ಪಠ್ಯಕ್ರಮವನ್ನು ಶಾಲೆಗಳಲ್ಲಿ ಬೋಧಿಸಲಾಗುತ್ತಿದೆ. ಹೀಗಿರುವಾಗ ಪರ್ಯಾಯವಾಗಿ ಬೇರೊಂದು ಗಣಿತವನ್ನು ಕಲಿಸುವುದರಿಂದ ಏನು ಪ್ರಯೋಜನ?” ಎಂದು ಟೀಕಿಸಿದರು.

“ಬಡ ವಿದ್ಯಾರ್ಥಿಗಳಿಗೆ ನೀಡಬೇಕಾದ ವಿದ್ಯಾರ್ಥಿವೇತನವನ್ನೇ ಸರ್ಕಾರ ಸರಿಯಾಗಿ ನೀಡುತ್ತಿಲ್ಲ. ಶಾಲಾ ಮಕ್ಕಳಿಗೆ ಸರಿಯಾಗಿ ಶೂ ಸಾಕ್ಸ್‌ ಕೊಡಲೂ ಆಗದವರು ವೇದಗಣಿತ ಹೇಳಿಕೊಡುತ್ತಾರಂತೆ” ಎಂದು ವ್ಯಂಗ್ಯವಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ಮಕ್ಕಳಿಗೆ ಬೇಕಾಗಿರುವುದು ಗಣಿತವೇ ಹೊರತು ವೇದಗಣಿತ ಅಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಮೀಸಲಿಟ್ಟ ಹಣವನ್ನು ವೇದಗಣಿತ ಕಲಿಸಲು ಬಳಸುವುದು ಅಕ್ಷಮ್ಯ.

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...