Homeಬಹುಜನ ಭಾರತಜನಕೋಟಿಯ ಮಿದುಳು ಹೊಕ್ಕಿರುವ ವೈರಸ್ ಕತೆಯೇನು? - ಡಿ.ಉಮಾಪತಿ

ಜನಕೋಟಿಯ ಮಿದುಳು ಹೊಕ್ಕಿರುವ ವೈರಸ್ ಕತೆಯೇನು? – ಡಿ.ಉಮಾಪತಿ

ಮನುಷ್ಯನ ಭಾವ ಮತ್ತು ಬುದ್ಧಿಯ ಮೇಲೆ ದಾಳಿ ನಡೆಸುವ ದ್ವೇಷ- ಹಿಂಸೆ-ಶ್ರೇಷ್ಠತೆಯ ವ್ಯಸನದ ವೈರಾಣುಗಳು ಕೂಡ ಥೇಟ್ ಕೊರೋನಾ ರೀತಿಯೇ ಕೆಲಸ ಮಾಡುತ್ತವೆ.

- Advertisement -
- Advertisement -

ಪುನರುತ್ಪಾದನೆಯಾಗಿ ಹರಡಲು ವೈರಸ್‌ಗಳಿಗೆ ಜೀವಿ ದೇಹವೊಂದು ಬೇಕೇ ಬೇಕಂತೆ. COVID-19 ಕೂಡ ಈ ಮಾತಿಗೆ ಹೊರತಲ್ಲ. ಮೂಲಭೂತವಾಗಿ ವೈರಸ್ ಒಂದು ಆನುವಂಶಿಕ ವಸ್ತು. ತಂತಾನೇ ಏನನ್ನೂ ಮಾಡಲು ಸಾಧ್ಯವಿಲ್ಲ. ಪುನರುತ್ಪಾದನೆ ಮಾಡಲು ಅದು ಜೀವಿಯೊಂದರ ದೇಹಕ್ಕೆ ಲಗ್ಗೆ ಹಾಕಲೇಬೇಕು. ಜೀವಿಯ ದೇಹ ಸಿಗದಿದ್ದರೆ ಇಂತಿಷ್ಟು ದಿನಗಳೊಳಗಾಗಿ ಸತ್ತು ಹೋಗುತ್ತದೆ. ವೈರಸ್ ಬ್ಯಾಕ್ಟೀರಿಯಾದಂತಲ್ಲ. ಅದಕ್ಕೆ ತಿನ್ನಲು, ಕುಡಿಯಲು ಏನೂ ಬೇಕಿಲ್ಲ. ಏನನ್ನೂ ವಿಸರ್ಜಿಸಬೇಕಿಲ್ಲ, ಬಿಡುವು ಇಲ್ಲವೇ ವಿಶ್ರಾಂತಿಯ ಅಗತ್ಯ ಮೊದಲೇ ಇಲ್ಲ. ಒಂದು ಎರಡಾಗಿ, ಎರಡು ನಾಲ್ಕಾಗಿ, ನಾಲ್ಕು ಎಂಟಾಗಿ, ಎಂಟು ಹದಿನಾರಾಗಿ ತನ್ನ ಸಂಖ್ಯೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಳ್ಳುತ್ತ ಹೋಗುವುದೊಂದೇ ಅದರ ಏಕೈಕ ಕೆಲಸ. ಹೀಗಾಗಿ ಅದಕ್ಕೆ ಬೇಕಾದದ್ದೆಲ್ಲ ಜೀವಿಯೊಂದರ ದೇಹ.

ಕೊರೋನ ವೈರಸ್ ಲಗ್ಗೆ ಹಾಕಿದ್ದು ಮನುಷ್ಯ ದೇಹಕ್ಕೆ. ಮನುಷ್ಯ ದೇಹ ಪ್ರವೇಶಿಸಿ ಜೀವಕೋಶವೊಂದಕ್ಕೆ ಅಂಟಿಕೊಂಡು ಪುನರುತ್ಪಾದನೆಯಾಗುತ್ತವೆ ಈ ವೈರಸ್. ವೈರಸ್‌ಗಳ ಸಂಖ್ಯೆಯು ನಿರ್ದಿಷ್ಟ ಜೀವಕೋಶವು ಸಲಹಲಾರದಷ್ಟು ಹೆಚ್ಚಿದ ನಂತರ ಪಕ್ಕದ ಮತ್ತೊಂದು ಜೀವಕೋಶದ ಮೇಲೆ ದಾಳಿ ಮಾಡುತ್ತವೆ ಎನ್ನುತ್ತಾರೆ ಜೀವಿ ವಿಜ್ಞಾನಿಗಳು.

ಮನುಷ್ಯನ ಭಾವ ಮತ್ತು ಬುದ್ಧಿಯ ಮೇಲೆ ದಾಳಿ ನಡೆಸುವ ದ್ವೇಷ- ಹಿಂಸೆ-ಶ್ರೇಷ್ಠತೆಯ ವ್ಯಸನದ ವೈರಾಣುಗಳು ಕೂಡ ಥೇಟ್ ಹೀಗೆಯೇ ಕೆಲಸ ಮಾಡುತ್ತವೆ. ಬುದ್ಧಿ ಮತ್ತು ಭಾವವನ್ನು ಭ್ರಷ್ಟಗೊಳಿಸುವ ಈ ವೈರಾಣುಗಳು ಮನುಷ್ಯನಲ್ಲಿನ ಮನುಷ್ಯತ್ವವನ್ನು ತಿಂದು ಹಾಕುತ್ತವೆ. ಮನುಷ್ಯತ್ವವನ್ನು ಕಳೆದುಕೊಂಡ ಮೆದುಳುಗಳ ದೂರನಿಯಂತ್ರಣ ಮಾಡುವುದು ಸಲೀಸು.

ಕಳೆದ ಐದಾರು ವರ್ಷಗಳಿಂದ ನಮ್ಮ ಪ್ರಚಂಡ ಜನನಾಯಕರಾದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಸಂಗತಿಯನ್ನು ಒಂದಲ್ಲ ಹಲವು ಸಲ ಆಗು ಮಾಡಿ ತೋರಿದ್ದಾರೆ. ಮೊನ್ನೆ ಭಾನುವಾರ ಸಂಜೆ ನಡೆದ ವಿದ್ಯಮಾನ ಈ ಮಾತಿಗೆ ಮತ್ತೊಂದು ಉದಾಹರಣೆ. ಭಯಾನಕ ಸಾಂಕ್ರಾಮಿಕ ಕೊರೋನಾ ಮಹಾಮಾರಿಯನ್ನು ಮೆದುಳುರಹಿತ ಜನಕೋಟಿ ಹಬ್ಬದಂತೆ ಆಚರಿಸಿತು. ಶಾರೀರಿಕ ದೂರದ ನಿಯಮವನ್ನು ಬಿಗಿಯಾಗಿ ಪಾಲಿಸಬೇಕಿರುವ ಈ ಹೊತ್ತಿನಲ್ಲಿ ಜನ ಗುಂಪು ಗುಂಪಾಗಿ ಬೀದಿಗಿಳಿದು ಸಂಭ್ರಮಿಸಿದರು. ತಟ್ಟೆ, ಜಾಗಟೆ ಬಾರಿಸಿ, ಶಂಖ ಊದಿ, ಚಪ್ಪಾಳೆ ತಟ್ಟಿ ಕೊರೋನ ಪರಾರಿಯಾಯಿತೆಂದು ಗೆಲುವಿನಿಂದ ಬೀಗಿದರು.

ನೋಟುರದ್ದಿನಂತ ಮೂರ್ಖ ಮತ್ತು ಅಮಾನವೀಯ ಕ್ರಮವನ್ನು ಕೂಡ ಜನ ಹೀಗೆಯೇ ಸಾಮೂಹಿಕ ಸನ್ನಿಗೊಳಗಾಗಿ ಸ್ವಾಗತಿಸಿದ್ದರು. ತಮ್ಮ ಬದುಕುಗಳ ಮೇಲೆ ಬಿದ್ದ ಈ ಮಾರಣಾಂತಿಕ ಹೊಡೆತದಿಂದ ಕೋಟ್ಯಂತರ ಜನ ಈಗಲೂ ಚೇತರಿಸಿಕೊಂಡಿಲ್ಲ.

ಸಾಂಕ್ರಾಮಿಕ ರೋಗಗಳ ತಜ್ಞರು ಹೇಳುವಂತೆ ಕೊರೋನಾ ಮಹಾಮಾರಿಯನ್ನು ಭಾರತ ಎಷ್ಟು ಗಂಭೀರವಾಗಿ ಪರಿಗಣಿಸಬೇಕೋ ಅಷ್ಟು ಗಂಭೀರವಾಗಿ ಪರಿಗಣಿಸಿಲ್ಲ. ಕೋಟಿಗಟ್ಟಲೆ ಸಾವು ನೋವು ಸಂಭವಿಸಿದರೆ ಆಶ್ಚರ್ಯವಿಲ್ಲ. ಭಾರೀ ಬಾಂಬೊಂದು ಸ್ಫೋಟಿಸಲಿದೆ ಎಂಬ ಅವರ ಎಚ್ಚರಿಕೆಯ ನಂತರವೂ ಜನಸಮೂಹ ಮೊನ್ನೆ ಭಾನುವಾರ ಬೀದಿಗಿಳಿದು ಮೂಢನಂಬಿಕೆಯನ್ನು ಮೆರೆಯಿತು.

ಭಾನುವಾರ ಸಂಜೆ ತಟ್ಟೆ ಜಾಗಟೆ ಚಪ್ಪಾಳೆ ಬಾರಿಸುವಂತೆ ಕರೆ ನೀಡಿದ ಮಹಾನ್ ನಾಯಕರಿಗೆ ಜನಸಮೂಹಗಳ ವರ್ತನೆಯ ವೈಖರಿ ತಿಳಿಯದ್ದೇನಲ್ಲ. ಆದರೆ ಅವರಿಗೆ ಬೊಮ್ಮನಹಳ್ಳಿಯ ಕಿಂದರಿ ಜೋಗಿಯಾಗುವ ವಿಕೃತ ಸಂಭ್ರಮ. ಅವರ ಮಡಿಲ ಮುದ್ದಿನ ನಾಯಿಯಾಗಿ ಬದಲಾಗಿದೆ ಸಮೂಹಮಾಧ್ಯಮ ಎಂಬ ಜನತಂತ್ರದ ಕಾವಲು ನಾಯಿ. ಅದು ಮಹಾನ್ ನಾಯಕರ ಸಂದೇಶದ ಡಂಗುರವನ್ನು ಹಗಲಿರುಳು ಬಾರಿಸಿ ನಿಷ್ಠೆ ಮೆರೆಯಿತು. ಮೆದುಳನ್ನು ಒತ್ತೆ ಇರಿಸಿರುವ ಜನಸಮೂಹ ಕೀಲುಬೊಂಬೆಯಂತೆ ಕುಣಿಯಿತು.

ವುಹಾನ್‌ನಲ್ಲಿ ಈ ಮಹಾಮಾರಿ ಅಬ್ಬರಿಸಿದಾಗ ಚೀನಾ ಸರ್ಕಾರ ತಟ್ಟೆ ಜಾಗಟೆ ಬಾರಿಸುವ ಸರ್ಕಸ್ ಮಾಡಲಿಲ್ಲ. ಬದಲಾಗಿ ದಾಖಲೆಯ ಸಮಯದಲ್ಲಿ ದೈತ್ಯ ಆಸ್ಪತ್ರೆಯ ನಿರ್ಮಿಸಿತು. ಸಾಂಕ್ರಾಮಿಕದ ಬೇರುಗಳ ಸುಟ್ಟು ಹಾಕಲು ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಂಡಿತು. ಸಾರ್ವಜನಿಕ ಆರೋಗ್ಯದ ಮೇಲೆ ಭಾರತ ಸರ್ಕಾರದ ವೆಚ್ಚದ ಪ್ರಮಾಣ ಶೋಚನೀಯ ಪ್ರಮಾಣದ್ದು. ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತಲೂ ಕಡಿಮೆ. ಜಿ.ಡಿ.ಪಿ.ಯ ಶೇ.1.28ರಷ್ಟು ಮಾತ್ರ. ಈ ಮೊತ್ತವನ್ನು ಕನಿಷ್ಠ ಶೇ.ಮೂರಕ್ಕೆ ಹೆಚ್ಚಿಸಬೇಕೆಂದು ದಶಕಗಳಿಂದ ಮುಂದಿಡುತ್ತ ಬಂದಿರುವ ಬೇಡಿಕೆಯನ್ನು ಯಾವ ಸರ್ಕಾರಗಳೂ ಕಿವಿಗೆ ಹಾಕಿಕೊಳ್ಳಲಿಲ್ಲ. ನರೇಂದ್ರ ಮೋದಿಯವರ ಸರ್ಕಾರವೂ ಈ ಮಾತಿಗೆ ಹೊರತಾಗಲಿಲ್ಲ. ಹಣವುಳ್ಳ ವರ್ಗಗಳ ಅಗತ್ಯಗಳನ್ನು ಪೂರೈಸುವ ಮಲ್ಟಿ ಸ್ಪೆಶಾಲಿಟಿ, ಸೂಪರ್ ಸ್ಪೆಶಾಲಿಟಿ ಖಾಸಗಿ ಆಸ್ಪತ್ರೆ ವ್ಯವಸ್ಥೆ ತಲೆಯೆತ್ತಿ ಬೆಳೆಯಿತೇ ವಿನಾ ಸಾರ್ವಜನಿಕ ಆರೋಗ್ಯ ಹಾಸಿಗೆ ಹಿಡಿಯುತ್ತಲೇ ಹೋಯಿತು. ಈಗ ಅದು ಕೃತಕ ಉಸಿರಾಟದಲ್ಲಿದೆ. ಸಾವು ಬದುಕಿನ ನಡುವೆ ತೂಗುಯ್ಯಾಲೆ ಆಡಿದೆ. ಅರ್ಥಾತ್ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನೇ ಆಧರಿಸಿರುವ ಶೇ.80ರಷ್ಟು ಜನಸಂಖ್ಯೆ ಹಾಸಿಗೆ ಹಿಡಿದಿರುವ ಆರೋಗ್ಯ ವ್ಯವಸ್ಥೆಯನ್ನು ಅವಲಂಬಿಸಿದೆ. ಪ್ರತಿ ಹನ್ನೊಂದು ಸಾವಿರ ಮಂದಿಗೆ ಒಬ್ಬ ಸರ್ಕಾರಿ ವೈದ್ಯರಿದ್ದಾರೆ. ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ದೇಶದಲ್ಲಿರುವ ವೆಂಟಿಲೇಟರುಗಳ (ಕೃತಕ ಉಸಿರಾಟ ವ್ಯವಸ್ಥೆ) ಸಂಖ್ಯೆ ಒಂದು ಲಕ್ಷ ಮೀರುವುದಿಲ್ಲ. ಇನ್ನು ಮಹಾಮಾರಿಯು ಅಬ್ಬರಿಸಿರುವ ಈ ದಿನಗಳಲ್ಲಂತೂ ಈ ಜನವರ್ಗಗಳನ್ನು ಕೇಳುವವರು ಯಾರು? ಅವರ ಪ್ರಾಣಗಳು ಬಲು ಅಗ್ಗ.

ಅಷ್ಟಿಷ್ಟು ಪ್ರಮಾಣಕ್ಕೆ ಬೆಳೆದಿದ್ದ ವೈಜ್ಞಾನಿಕ ಮನೋಧರ್ಮವನ್ನು ನಾಶ ಮಾಡುವ ಎಲ್ಲ ಪ್ರಯತ್ನಗಳು ಕಳೆದ ಆರೇಳು ವರ್ಷಗಳಿಂದ ನಡೆಯುತ್ತ ಬಂದಿವೆ. ತರ್ಕ, ಸಂಶೋಧನೆ, ವಿಜ್ಞಾನ, ವಿದ್ವತ್ತಿನ ಮಾನಹರಣ ಮಾಡಲಾಗಿದೆ. ಅಂಧ ವಿಶ್ವಾಸ ಮತ್ತು ನಕಲಿ ಸುದ್ದಿಗಳು ಮತ್ತು ಹಸೀ ಸುಳ್ಳುಗಳನ್ನು ಉತ್ಪಾದಿಸಿ ಹಬ್ಬಿಸುವ ‘ಕಾರ್ಖಾನೆ’ಗಳನ್ನು ಲಕ್ಷಗಳ ಸಂಖ್ಯೆಯಲ್ಲಿ ದೇಶದುದ್ದಗಲಕ್ಕೂ ಕಟ್ಟಿ ನಿಲ್ಲಿಸಲಾಗಿದೆ. ಭಾವ ಬುದ್ಧಿಗಳನ್ನು ಭ್ರಷ್ಟಗೊಳಿಸಿ ಮಿದುಳುಗಳನ್ನು ತಿಂದು ಹಾಕುವ ದ್ವೇಷ-ಹಿಂಸೆ-ಶ್ರೇಷ್ಠತೆಯ ವ್ಯಸನದ ವೈರಾಣುಗಳನ್ನು ತಿನ್ನುವ ವೈರಾಣುಗಳನ್ನು ಬಿಟ್ಟು ಬಹಳ ಕಾಲವೇ ಆಗಿದೆ. ಭಾನುವಾರ ಸಂಜೆ ಕಂಡು ಬಂದ ಭೀಭತ್ಸದ ತಳಪಾಯವಿದು.

ರೋಗಗ್ರಸ್ತ ಸಮಾಜವನ್ನು ಕಟ್ಟಿ ನಿಲ್ಲಿಸಿದರೆ ಮಹಾಮಾರಿಯನ್ನು ಎದುರಿಸುವ ಚೈತನ್ಯವಾದರೂ ಅದಕ್ಕೆ ಎಲ್ಲಿಂದ ಬರಬೇಕು? ಸಮಾಜದಲ್ಲಿ ಹಂಚಿಕೆಯಾಗಬೇಕಿರುವ ಸಂಪತ್ತನ್ನು ಬಾಚಿಕೊಂಡಿರುವ ರೆಡ್ಡಿಗಳು, ಅಂಬಾನಿಗಳು, ಅದಾನಿಗಳು ಮುಂತಾದ ಉದ್ಯಮಿಗಳು, ಮಹಾನ್ ನಟರು ಕೆರೆಯ ನೀರನ್ನು ಕೆರೆಗೆ ಚೆಲ್ಲಿ ವರವ ಪಡೆಯವ ಕನಿಷ್ಠ ಮಾನವೀಯತೆಯನ್ನೂ ಮರೆತಿದ್ದಾರೆ.

ದೇಶಾದ್ಯಂತ ಜನಜೀವನ ಅನಿರ್ದಿಷ್ಟ ಕಾಲ ಸ್ತಬ್ದಗೊಳ್ಳಲಿದೆ. ನಿತ್ಯದ ದುಡಿಮೆಯನ್ನು ಆಧರಿಸಿ ಹೊಟ್ಟೆ ಹೊರೆಯುವ ಕೋಟ್ಯಂತರ ಜನರ ಬದುಕು ನೋಟು ರದ್ದಿನ ನಂತರ ಮತ್ತೊಮ್ಮೆ ಅತಂತ್ರ ಆಗಲಿದೆ. ಈ ಜನರಿಗೆ ಪ್ರಧಾನಿಯವರು ಯಾವ ಪರಿಹಾರವನ್ನೂ ನೀಡಿಲ್ಲ. ಕೇವಲ ಚಪ್ಪಾಳೆ ತಟ್ಟಲು ಹೇಳಿರುವುದು ಕ್ರೌರ್ಯದ ಪರಮಾವಧಿ.

ಜನತಾಂತ್ರಿಕವಾಗಿ ಆರಿಸಿ ಬಂದಿರುವವರು ಸರ್ವಾಧಿಕಾರಿಗಳಾಗುವ ದಿನ ದೂರವಿಲ್ಲ. ಚಿಂತಕ ಶಿವಸುಂದರ್ ಅವರು ಹೇಳುವಂತೆ ದೇಹಕ್ಕೆ ಬಿದ್ದ ಪೆಟ್ಟು ಮೆದುಳಿಗೆ ತಿಳಿಯುತ್ತಿಲ್ಲ. ಯಾಕೆಂದರೆ ಮಿದುಳನ್ನು ನಾಶ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...