Homeಬಹುಜನ ಭಾರತಜನಕೋಟಿಯ ಮಿದುಳು ಹೊಕ್ಕಿರುವ ವೈರಸ್ ಕತೆಯೇನು? - ಡಿ.ಉಮಾಪತಿ

ಜನಕೋಟಿಯ ಮಿದುಳು ಹೊಕ್ಕಿರುವ ವೈರಸ್ ಕತೆಯೇನು? – ಡಿ.ಉಮಾಪತಿ

ಮನುಷ್ಯನ ಭಾವ ಮತ್ತು ಬುದ್ಧಿಯ ಮೇಲೆ ದಾಳಿ ನಡೆಸುವ ದ್ವೇಷ- ಹಿಂಸೆ-ಶ್ರೇಷ್ಠತೆಯ ವ್ಯಸನದ ವೈರಾಣುಗಳು ಕೂಡ ಥೇಟ್ ಕೊರೋನಾ ರೀತಿಯೇ ಕೆಲಸ ಮಾಡುತ್ತವೆ.

- Advertisement -
- Advertisement -

ಪುನರುತ್ಪಾದನೆಯಾಗಿ ಹರಡಲು ವೈರಸ್‌ಗಳಿಗೆ ಜೀವಿ ದೇಹವೊಂದು ಬೇಕೇ ಬೇಕಂತೆ. COVID-19 ಕೂಡ ಈ ಮಾತಿಗೆ ಹೊರತಲ್ಲ. ಮೂಲಭೂತವಾಗಿ ವೈರಸ್ ಒಂದು ಆನುವಂಶಿಕ ವಸ್ತು. ತಂತಾನೇ ಏನನ್ನೂ ಮಾಡಲು ಸಾಧ್ಯವಿಲ್ಲ. ಪುನರುತ್ಪಾದನೆ ಮಾಡಲು ಅದು ಜೀವಿಯೊಂದರ ದೇಹಕ್ಕೆ ಲಗ್ಗೆ ಹಾಕಲೇಬೇಕು. ಜೀವಿಯ ದೇಹ ಸಿಗದಿದ್ದರೆ ಇಂತಿಷ್ಟು ದಿನಗಳೊಳಗಾಗಿ ಸತ್ತು ಹೋಗುತ್ತದೆ. ವೈರಸ್ ಬ್ಯಾಕ್ಟೀರಿಯಾದಂತಲ್ಲ. ಅದಕ್ಕೆ ತಿನ್ನಲು, ಕುಡಿಯಲು ಏನೂ ಬೇಕಿಲ್ಲ. ಏನನ್ನೂ ವಿಸರ್ಜಿಸಬೇಕಿಲ್ಲ, ಬಿಡುವು ಇಲ್ಲವೇ ವಿಶ್ರಾಂತಿಯ ಅಗತ್ಯ ಮೊದಲೇ ಇಲ್ಲ. ಒಂದು ಎರಡಾಗಿ, ಎರಡು ನಾಲ್ಕಾಗಿ, ನಾಲ್ಕು ಎಂಟಾಗಿ, ಎಂಟು ಹದಿನಾರಾಗಿ ತನ್ನ ಸಂಖ್ಯೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಳ್ಳುತ್ತ ಹೋಗುವುದೊಂದೇ ಅದರ ಏಕೈಕ ಕೆಲಸ. ಹೀಗಾಗಿ ಅದಕ್ಕೆ ಬೇಕಾದದ್ದೆಲ್ಲ ಜೀವಿಯೊಂದರ ದೇಹ.

ಕೊರೋನ ವೈರಸ್ ಲಗ್ಗೆ ಹಾಕಿದ್ದು ಮನುಷ್ಯ ದೇಹಕ್ಕೆ. ಮನುಷ್ಯ ದೇಹ ಪ್ರವೇಶಿಸಿ ಜೀವಕೋಶವೊಂದಕ್ಕೆ ಅಂಟಿಕೊಂಡು ಪುನರುತ್ಪಾದನೆಯಾಗುತ್ತವೆ ಈ ವೈರಸ್. ವೈರಸ್‌ಗಳ ಸಂಖ್ಯೆಯು ನಿರ್ದಿಷ್ಟ ಜೀವಕೋಶವು ಸಲಹಲಾರದಷ್ಟು ಹೆಚ್ಚಿದ ನಂತರ ಪಕ್ಕದ ಮತ್ತೊಂದು ಜೀವಕೋಶದ ಮೇಲೆ ದಾಳಿ ಮಾಡುತ್ತವೆ ಎನ್ನುತ್ತಾರೆ ಜೀವಿ ವಿಜ್ಞಾನಿಗಳು.

ಮನುಷ್ಯನ ಭಾವ ಮತ್ತು ಬುದ್ಧಿಯ ಮೇಲೆ ದಾಳಿ ನಡೆಸುವ ದ್ವೇಷ- ಹಿಂಸೆ-ಶ್ರೇಷ್ಠತೆಯ ವ್ಯಸನದ ವೈರಾಣುಗಳು ಕೂಡ ಥೇಟ್ ಹೀಗೆಯೇ ಕೆಲಸ ಮಾಡುತ್ತವೆ. ಬುದ್ಧಿ ಮತ್ತು ಭಾವವನ್ನು ಭ್ರಷ್ಟಗೊಳಿಸುವ ಈ ವೈರಾಣುಗಳು ಮನುಷ್ಯನಲ್ಲಿನ ಮನುಷ್ಯತ್ವವನ್ನು ತಿಂದು ಹಾಕುತ್ತವೆ. ಮನುಷ್ಯತ್ವವನ್ನು ಕಳೆದುಕೊಂಡ ಮೆದುಳುಗಳ ದೂರನಿಯಂತ್ರಣ ಮಾಡುವುದು ಸಲೀಸು.

ಕಳೆದ ಐದಾರು ವರ್ಷಗಳಿಂದ ನಮ್ಮ ಪ್ರಚಂಡ ಜನನಾಯಕರಾದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಈ ಸಂಗತಿಯನ್ನು ಒಂದಲ್ಲ ಹಲವು ಸಲ ಆಗು ಮಾಡಿ ತೋರಿದ್ದಾರೆ. ಮೊನ್ನೆ ಭಾನುವಾರ ಸಂಜೆ ನಡೆದ ವಿದ್ಯಮಾನ ಈ ಮಾತಿಗೆ ಮತ್ತೊಂದು ಉದಾಹರಣೆ. ಭಯಾನಕ ಸಾಂಕ್ರಾಮಿಕ ಕೊರೋನಾ ಮಹಾಮಾರಿಯನ್ನು ಮೆದುಳುರಹಿತ ಜನಕೋಟಿ ಹಬ್ಬದಂತೆ ಆಚರಿಸಿತು. ಶಾರೀರಿಕ ದೂರದ ನಿಯಮವನ್ನು ಬಿಗಿಯಾಗಿ ಪಾಲಿಸಬೇಕಿರುವ ಈ ಹೊತ್ತಿನಲ್ಲಿ ಜನ ಗುಂಪು ಗುಂಪಾಗಿ ಬೀದಿಗಿಳಿದು ಸಂಭ್ರಮಿಸಿದರು. ತಟ್ಟೆ, ಜಾಗಟೆ ಬಾರಿಸಿ, ಶಂಖ ಊದಿ, ಚಪ್ಪಾಳೆ ತಟ್ಟಿ ಕೊರೋನ ಪರಾರಿಯಾಯಿತೆಂದು ಗೆಲುವಿನಿಂದ ಬೀಗಿದರು.

ನೋಟುರದ್ದಿನಂತ ಮೂರ್ಖ ಮತ್ತು ಅಮಾನವೀಯ ಕ್ರಮವನ್ನು ಕೂಡ ಜನ ಹೀಗೆಯೇ ಸಾಮೂಹಿಕ ಸನ್ನಿಗೊಳಗಾಗಿ ಸ್ವಾಗತಿಸಿದ್ದರು. ತಮ್ಮ ಬದುಕುಗಳ ಮೇಲೆ ಬಿದ್ದ ಈ ಮಾರಣಾಂತಿಕ ಹೊಡೆತದಿಂದ ಕೋಟ್ಯಂತರ ಜನ ಈಗಲೂ ಚೇತರಿಸಿಕೊಂಡಿಲ್ಲ.

ಸಾಂಕ್ರಾಮಿಕ ರೋಗಗಳ ತಜ್ಞರು ಹೇಳುವಂತೆ ಕೊರೋನಾ ಮಹಾಮಾರಿಯನ್ನು ಭಾರತ ಎಷ್ಟು ಗಂಭೀರವಾಗಿ ಪರಿಗಣಿಸಬೇಕೋ ಅಷ್ಟು ಗಂಭೀರವಾಗಿ ಪರಿಗಣಿಸಿಲ್ಲ. ಕೋಟಿಗಟ್ಟಲೆ ಸಾವು ನೋವು ಸಂಭವಿಸಿದರೆ ಆಶ್ಚರ್ಯವಿಲ್ಲ. ಭಾರೀ ಬಾಂಬೊಂದು ಸ್ಫೋಟಿಸಲಿದೆ ಎಂಬ ಅವರ ಎಚ್ಚರಿಕೆಯ ನಂತರವೂ ಜನಸಮೂಹ ಮೊನ್ನೆ ಭಾನುವಾರ ಬೀದಿಗಿಳಿದು ಮೂಢನಂಬಿಕೆಯನ್ನು ಮೆರೆಯಿತು.

ಭಾನುವಾರ ಸಂಜೆ ತಟ್ಟೆ ಜಾಗಟೆ ಚಪ್ಪಾಳೆ ಬಾರಿಸುವಂತೆ ಕರೆ ನೀಡಿದ ಮಹಾನ್ ನಾಯಕರಿಗೆ ಜನಸಮೂಹಗಳ ವರ್ತನೆಯ ವೈಖರಿ ತಿಳಿಯದ್ದೇನಲ್ಲ. ಆದರೆ ಅವರಿಗೆ ಬೊಮ್ಮನಹಳ್ಳಿಯ ಕಿಂದರಿ ಜೋಗಿಯಾಗುವ ವಿಕೃತ ಸಂಭ್ರಮ. ಅವರ ಮಡಿಲ ಮುದ್ದಿನ ನಾಯಿಯಾಗಿ ಬದಲಾಗಿದೆ ಸಮೂಹಮಾಧ್ಯಮ ಎಂಬ ಜನತಂತ್ರದ ಕಾವಲು ನಾಯಿ. ಅದು ಮಹಾನ್ ನಾಯಕರ ಸಂದೇಶದ ಡಂಗುರವನ್ನು ಹಗಲಿರುಳು ಬಾರಿಸಿ ನಿಷ್ಠೆ ಮೆರೆಯಿತು. ಮೆದುಳನ್ನು ಒತ್ತೆ ಇರಿಸಿರುವ ಜನಸಮೂಹ ಕೀಲುಬೊಂಬೆಯಂತೆ ಕುಣಿಯಿತು.

ವುಹಾನ್‌ನಲ್ಲಿ ಈ ಮಹಾಮಾರಿ ಅಬ್ಬರಿಸಿದಾಗ ಚೀನಾ ಸರ್ಕಾರ ತಟ್ಟೆ ಜಾಗಟೆ ಬಾರಿಸುವ ಸರ್ಕಸ್ ಮಾಡಲಿಲ್ಲ. ಬದಲಾಗಿ ದಾಖಲೆಯ ಸಮಯದಲ್ಲಿ ದೈತ್ಯ ಆಸ್ಪತ್ರೆಯ ನಿರ್ಮಿಸಿತು. ಸಾಂಕ್ರಾಮಿಕದ ಬೇರುಗಳ ಸುಟ್ಟು ಹಾಕಲು ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಂಡಿತು. ಸಾರ್ವಜನಿಕ ಆರೋಗ್ಯದ ಮೇಲೆ ಭಾರತ ಸರ್ಕಾರದ ವೆಚ್ಚದ ಪ್ರಮಾಣ ಶೋಚನೀಯ ಪ್ರಮಾಣದ್ದು. ಶ್ರೀಲಂಕಾ ಮತ್ತು ಬಾಂಗ್ಲಾದೇಶಕ್ಕಿಂತಲೂ ಕಡಿಮೆ. ಜಿ.ಡಿ.ಪಿ.ಯ ಶೇ.1.28ರಷ್ಟು ಮಾತ್ರ. ಈ ಮೊತ್ತವನ್ನು ಕನಿಷ್ಠ ಶೇ.ಮೂರಕ್ಕೆ ಹೆಚ್ಚಿಸಬೇಕೆಂದು ದಶಕಗಳಿಂದ ಮುಂದಿಡುತ್ತ ಬಂದಿರುವ ಬೇಡಿಕೆಯನ್ನು ಯಾವ ಸರ್ಕಾರಗಳೂ ಕಿವಿಗೆ ಹಾಕಿಕೊಳ್ಳಲಿಲ್ಲ. ನರೇಂದ್ರ ಮೋದಿಯವರ ಸರ್ಕಾರವೂ ಈ ಮಾತಿಗೆ ಹೊರತಾಗಲಿಲ್ಲ. ಹಣವುಳ್ಳ ವರ್ಗಗಳ ಅಗತ್ಯಗಳನ್ನು ಪೂರೈಸುವ ಮಲ್ಟಿ ಸ್ಪೆಶಾಲಿಟಿ, ಸೂಪರ್ ಸ್ಪೆಶಾಲಿಟಿ ಖಾಸಗಿ ಆಸ್ಪತ್ರೆ ವ್ಯವಸ್ಥೆ ತಲೆಯೆತ್ತಿ ಬೆಳೆಯಿತೇ ವಿನಾ ಸಾರ್ವಜನಿಕ ಆರೋಗ್ಯ ಹಾಸಿಗೆ ಹಿಡಿಯುತ್ತಲೇ ಹೋಯಿತು. ಈಗ ಅದು ಕೃತಕ ಉಸಿರಾಟದಲ್ಲಿದೆ. ಸಾವು ಬದುಕಿನ ನಡುವೆ ತೂಗುಯ್ಯಾಲೆ ಆಡಿದೆ. ಅರ್ಥಾತ್ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನೇ ಆಧರಿಸಿರುವ ಶೇ.80ರಷ್ಟು ಜನಸಂಖ್ಯೆ ಹಾಸಿಗೆ ಹಿಡಿದಿರುವ ಆರೋಗ್ಯ ವ್ಯವಸ್ಥೆಯನ್ನು ಅವಲಂಬಿಸಿದೆ. ಪ್ರತಿ ಹನ್ನೊಂದು ಸಾವಿರ ಮಂದಿಗೆ ಒಬ್ಬ ಸರ್ಕಾರಿ ವೈದ್ಯರಿದ್ದಾರೆ. ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ದೇಶದಲ್ಲಿರುವ ವೆಂಟಿಲೇಟರುಗಳ (ಕೃತಕ ಉಸಿರಾಟ ವ್ಯವಸ್ಥೆ) ಸಂಖ್ಯೆ ಒಂದು ಲಕ್ಷ ಮೀರುವುದಿಲ್ಲ. ಇನ್ನು ಮಹಾಮಾರಿಯು ಅಬ್ಬರಿಸಿರುವ ಈ ದಿನಗಳಲ್ಲಂತೂ ಈ ಜನವರ್ಗಗಳನ್ನು ಕೇಳುವವರು ಯಾರು? ಅವರ ಪ್ರಾಣಗಳು ಬಲು ಅಗ್ಗ.

ಅಷ್ಟಿಷ್ಟು ಪ್ರಮಾಣಕ್ಕೆ ಬೆಳೆದಿದ್ದ ವೈಜ್ಞಾನಿಕ ಮನೋಧರ್ಮವನ್ನು ನಾಶ ಮಾಡುವ ಎಲ್ಲ ಪ್ರಯತ್ನಗಳು ಕಳೆದ ಆರೇಳು ವರ್ಷಗಳಿಂದ ನಡೆಯುತ್ತ ಬಂದಿವೆ. ತರ್ಕ, ಸಂಶೋಧನೆ, ವಿಜ್ಞಾನ, ವಿದ್ವತ್ತಿನ ಮಾನಹರಣ ಮಾಡಲಾಗಿದೆ. ಅಂಧ ವಿಶ್ವಾಸ ಮತ್ತು ನಕಲಿ ಸುದ್ದಿಗಳು ಮತ್ತು ಹಸೀ ಸುಳ್ಳುಗಳನ್ನು ಉತ್ಪಾದಿಸಿ ಹಬ್ಬಿಸುವ ‘ಕಾರ್ಖಾನೆ’ಗಳನ್ನು ಲಕ್ಷಗಳ ಸಂಖ್ಯೆಯಲ್ಲಿ ದೇಶದುದ್ದಗಲಕ್ಕೂ ಕಟ್ಟಿ ನಿಲ್ಲಿಸಲಾಗಿದೆ. ಭಾವ ಬುದ್ಧಿಗಳನ್ನು ಭ್ರಷ್ಟಗೊಳಿಸಿ ಮಿದುಳುಗಳನ್ನು ತಿಂದು ಹಾಕುವ ದ್ವೇಷ-ಹಿಂಸೆ-ಶ್ರೇಷ್ಠತೆಯ ವ್ಯಸನದ ವೈರಾಣುಗಳನ್ನು ತಿನ್ನುವ ವೈರಾಣುಗಳನ್ನು ಬಿಟ್ಟು ಬಹಳ ಕಾಲವೇ ಆಗಿದೆ. ಭಾನುವಾರ ಸಂಜೆ ಕಂಡು ಬಂದ ಭೀಭತ್ಸದ ತಳಪಾಯವಿದು.

ರೋಗಗ್ರಸ್ತ ಸಮಾಜವನ್ನು ಕಟ್ಟಿ ನಿಲ್ಲಿಸಿದರೆ ಮಹಾಮಾರಿಯನ್ನು ಎದುರಿಸುವ ಚೈತನ್ಯವಾದರೂ ಅದಕ್ಕೆ ಎಲ್ಲಿಂದ ಬರಬೇಕು? ಸಮಾಜದಲ್ಲಿ ಹಂಚಿಕೆಯಾಗಬೇಕಿರುವ ಸಂಪತ್ತನ್ನು ಬಾಚಿಕೊಂಡಿರುವ ರೆಡ್ಡಿಗಳು, ಅಂಬಾನಿಗಳು, ಅದಾನಿಗಳು ಮುಂತಾದ ಉದ್ಯಮಿಗಳು, ಮಹಾನ್ ನಟರು ಕೆರೆಯ ನೀರನ್ನು ಕೆರೆಗೆ ಚೆಲ್ಲಿ ವರವ ಪಡೆಯವ ಕನಿಷ್ಠ ಮಾನವೀಯತೆಯನ್ನೂ ಮರೆತಿದ್ದಾರೆ.

ದೇಶಾದ್ಯಂತ ಜನಜೀವನ ಅನಿರ್ದಿಷ್ಟ ಕಾಲ ಸ್ತಬ್ದಗೊಳ್ಳಲಿದೆ. ನಿತ್ಯದ ದುಡಿಮೆಯನ್ನು ಆಧರಿಸಿ ಹೊಟ್ಟೆ ಹೊರೆಯುವ ಕೋಟ್ಯಂತರ ಜನರ ಬದುಕು ನೋಟು ರದ್ದಿನ ನಂತರ ಮತ್ತೊಮ್ಮೆ ಅತಂತ್ರ ಆಗಲಿದೆ. ಈ ಜನರಿಗೆ ಪ್ರಧಾನಿಯವರು ಯಾವ ಪರಿಹಾರವನ್ನೂ ನೀಡಿಲ್ಲ. ಕೇವಲ ಚಪ್ಪಾಳೆ ತಟ್ಟಲು ಹೇಳಿರುವುದು ಕ್ರೌರ್ಯದ ಪರಮಾವಧಿ.

ಜನತಾಂತ್ರಿಕವಾಗಿ ಆರಿಸಿ ಬಂದಿರುವವರು ಸರ್ವಾಧಿಕಾರಿಗಳಾಗುವ ದಿನ ದೂರವಿಲ್ಲ. ಚಿಂತಕ ಶಿವಸುಂದರ್ ಅವರು ಹೇಳುವಂತೆ ದೇಹಕ್ಕೆ ಬಿದ್ದ ಪೆಟ್ಟು ಮೆದುಳಿಗೆ ತಿಳಿಯುತ್ತಿಲ್ಲ. ಯಾಕೆಂದರೆ ಮಿದುಳನ್ನು ನಾಶ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...