Homeಅಂತರಾಷ್ಟ್ರೀಯಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

ಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

- Advertisement -
- Advertisement -

ಮಂಗಳವಾರ ಸಾಂವಿಧಾನಿಕ ನ್ಯಾಯಾಲಯವು ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಅಮಾನತುಗೊಳಿಸಿರುವುದು ಥಾಯ್ಲೆಂಡ್ ರಾಜಕೀಯ ಮತ್ತು ರಾಜತಾಂತ್ರಿಕ ವ್ಯವಸ್ಥೆಯಲ್ಲಿ ಸಂಚಲನ ಮೂಡಿಸಿದೆ.

ಮಾರಕ ಗಡಿ ಘರ್ಷಣೆಯ ನಂತರ ಕಾಂಬೋಡಿಯನ್ ಸೆನೆಟ್ ಅಧ್ಯಕ್ಷ ಹುನ್ ಸೇನ್ ಅವರೊಂದಿಗಿನ ಫೋನ್ ಕರೆ ಸೋರಿಕೆಯಾದ ಕುರಿತ ತನಿಖೆಯ ಮಧ್ಯೆ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಹುನ್ ಸೇನ್ ಅವರೊಂದಿಗಿನ ಫೋನ್ ಸಂಭಾಷಣೆಯ ಸಮಯದಲ್ಲಿ ನೈತಿಕ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುವವರೆಗೆ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಪ್ರಧಾನಿ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಸೋರಿಕೆಯಾದ ಫೋನ್ ಕರೆಯಲ್ಲೇನಿತ್ತು?

ಮೇ 28, 2025ರಂದು ಥಾಯ್ ಮತ್ತು ಕಾಂಬೋಡಿಯನ್ ಪಡೆಗಳ ನಡುವಿನ ಗಡಿ ಘರ್ಷಣೆಯಲ್ಲಿ ಒಬ್ಬ ಕಾಂಬೋಡಿಯನ್ ಸೈನಿಕ ಸಾವನ್ನಪ್ಪಿದ ವಾರಗಳ ನಂತರ, ಅಂದರೆ ಜೂನ್ 15ರಂದು ಫೋನ್ ಸಂಭಾಷಣೆ ನಡೆದಿದೆ.

ಈ ಕರೆ ಸೋರಿಕೆಯಾಗಿ ಥಾಯ್ಲೆಂಡ್ ರಾಜಕೀಯದಲ್ಲಿ ಬಿರುಗಾಳಿಗೆ ಎದ್ದಿತ್ತು. ಪೇಟೊಂಗ್ಟಾರ್ನ್ ರಾಷ್ಟ್ರೀಯ ಹಿತಾಸಕ್ತಿಗಳ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಮಿಲಿಟರಿ ಅಧಿಕಾರವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಮರ್ಶಕರು ಆರೋಪಿಸಿದ್ದರು.

ಫೋನ್ ಕರೆಯನ್ನು ಹುನ್ ಸೇನ್ ರೆಕಾರ್ಡ್ ಮಾಡಿದ್ದಾರೆ. ನಂತರ ಅದು ಸೋರಿಕೆಯಾಗಿದೆ. ರೆಕಾರ್ಡ್ ಮಾಡಿದ ಸಂಭಾಷಣೆಯನ್ನು 80ಕ್ಕೂ ಹೆಚ್ಚು ಜನರೊಂದಿಗೆ ಹಂಚಿಕೊಂಡಿರುವುದಾಗಿ ಹುನ್ ಸೇನ್ ಹೇಳಿಕೊಂಡಿದ್ದಾರೆ.

ಫೋನ್ ಸಂಭಾಷಣೆಯಲ್ಲಿ, ಪೇಟೊಂಗ್ಟಾರ್ನ್ ಮತ್ತು ಹುನ್ ಸೇನ್ ಥಾಯ್ಲೆಂಡ್-ಕಾಂಬೋಡಿಯಾ ಗಡಿ ಉದ್ವಿಗ್ನತೆಯನ್ನು ಹೇಗೆ ಪರಿಹರಿಸುವುದು ಮತ್ತು ಘರ್ಷಣೆಯ ನಂತರ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಬೇಕೆ? ಎಂದು ಚರ್ಚಿಸಿರುವುದು ಇದೆ ಎಂದು ವರದಿಯಾಗಿದೆ.

ಬಹು ವರದಿಗಳ ಪ್ರಕಾರ, ಪೇಟೊಂಗ್ಟಾರ್ನ್ ಫೋನ್ ಕರೆಯಲ್ಲಿ ಹುನ್ ಸೇನ್ ಅವರನ್ನು ‘ಅಂಕಲ್’ ಎಂದು ಉಲ್ಲೇಖಿಸಿದ್ದಾರೆ. ಹುನ್ ಸೇನ್ ಪೇಟೊಂಗ್ಟಾರ್ನ್ ಅವರ ತಂದೆ ಥಾಕ್ಸಿನ್ ಶಿನವಾತ್ರ ಅವರ ಆಪ್ತ ಸ್ನೇಹಿತರಾಗಿದ್ದಾರೆ, ಅವರು ಕೂಡ ಥಾಯ್ಲೆಂಡ್ ಪ್ರಧಾನಿಯಾಗಿದ್ದರು.

ಥಾಯ್ಲೆಂಡ್‌ನ ‘ಇನ್ನೊಂದು ಕಡೆಯ’ ಮಾತನ್ನು ಕೇಳಬೇಡಿ ಎಂದು ಪೇಟೊಂಗ್ಟಾರ್ನ್ ಹುನ್ ಸೇನ್ ಅವರನ್ನು ಒತ್ತಾಯಿಸಿದ್ದಾರೆ ಮತ್ತು ಕಾಂಬೋಡಿಯಾವನ್ನು ನೇರವಾಗಿ ಟೀಕಿಸಿದ ಥಾಯ್ ಸೇನಾ ಕಮಾಂಡರ್ ಅನ್ನು ಉಲ್ಲೇಖಿಸಿದ್ದಾರೆ. ಸೋರಿಕೆಯಾದ ಫೋನ್ ಕರೆಯಲ್ಲಿ, ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಅನ್ನು ‘ವಿರೋಧಿ’ ಎಂದು ಹಣೆಪಟ್ಟಿ ಕಟ್ಟುವುದು ಸಹ ಕೇಳಬಹುದು ಎಂದು
ವರದಿಯಾಗಿದೆ.

ಅಷ್ಟಕ್ಕೆ ಸುಮ್ಮನಾಗದ ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಬಗ್ಗೆ ಉಲ್ಲೇಖಿಸುತ್ತಾ, “ಅವರು ಕೂಲ್ ಆಗಿ ಕಾಣಲು ಬಯಸುತ್ತಾರೆ” ಎಂದು ಹೇಳಿದ್ದಾರೆ. ಹುನ್‌ಸೇನ್ ಏನು ಬಯಸುತ್ತಿದ್ದಾರೆ ಎಂದು ಕೇಳಿರುವ ಪೇಟೊಂಗ್ಟಾರ್ನ್, ಅವರು ಬಯಸಿದ್ದನ್ನು ನೆರವೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಪೇಟೊಂಗ್ಟಾರ್ನ್ ಅವರ ಮಾತುಗಳು ಥಾಯ್ಲೆಂಡ್‌ನ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಂಡತಿದೆ. ಇದು ರಾಜತಾಂತ್ರಿಕ ಮತ್ತು ಮಿಲಿಟರಿ ನಿಲುವಿಗೆ ಹಾನಿ ಮಾಡುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಪೇಟೊಂಗ್ಟಾರ್ನ್ ಫೋನ್ ಕರೆ ಕುರಿತು ಕ್ಷಮೆಯಾಚಿಸಿದರೂ, ತನ್ನ ಮಾತುಕತೆ ಕಾರ್ಯ ತಂತ್ರದ ಭಾಗ ಎಂದು ಸಮರ್ಥಿಸಿಕೊಂಡಿದ್ದಾರೆ.

ಥಾಯ್-ಕಾಂಬೋಡಿಯನ್ ಗಡಿಯಲ್ಲಿರುವ ವಿವಾದಿತ ಪ್ರದೇಶದಲ್ಲಿ ಮೇ 28ರಂದು ನಡೆದ ಸಣ್ಣ ಗುಂಡಿನ ಚಕಮಕಿಯಿಂದ ಸಂಘರ್ಷ ಉಂಟಾಗಿದೆ. ಎರಡೂ ಕಡೆಯ ಸೈನಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯು ದೀರ್ಘಕಾಲದ ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತೆ ಮುನ್ನಲೆಗೆ ತಂದಿತ್ತು. ಆದರೆ, ಘರ್ಷಣೆಯ ನಂತರ ಎರಡೂ ಸರ್ಕಾರಗಳು ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಿಕೊಳ್ಳುವ ಉತ್ಸಾಹ ತೋರಿತ್ತು.

ಇದರ ಹೊರತಾಗಿಯೂ, ಪ್ರತೀಕಾರದ ಕ್ರಮಗಳು ಮುಂದುವರೆದಿತ್ತು. ಪರಿಣಾಮ ಥಾಯ್ಲೆಂಡ್ ತೀವ್ರ ಗಡಿ ನಿರ್ಬಂಧಗಳನ್ನು ವಿಧಿಸಿತ್ತು. ಅಗತ್ಯ ಮತ್ತು ಸೀಮಿತ ಗಡಿ ದಾಟುವಿಕೆಗಳಿಗೆ ಮಾತ್ರ ಅವಕಾಶ ನೀಡಿತ್ತು. ಕಾಂಬೋಡಿಯಾ ಥಾಯ್ ಮಾಧ್ಯಮವನ್ನು ನಿಷೇಧಿಸುವ ಮೂಲಕ, ಹಣ್ಣು ಮತ್ತು ತರಕಾರಿ ಆಮದುಗಳನ್ನು ನಿಲ್ಲಿಸುವ ಮೂಲಕ ಮತ್ತು ಥಾಯ್ ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಬಹಿಷ್ಕರಿಸುವ ಮೂಲಕ ಪ್ರತಿಕಾರ ತೀರಿಸಿತ್ತು. ಅಲ್ಲದೆ, ಕಾಂಬೋಡಿಯಾ ಥಾಯ್ಲೆಂಡ್‌ನಿಂದ ಇಂಧನ ಆಮದನ್ನು ಸಹ ಸ್ಥಗಿತಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ 800 ಕಿ.ಮೀ.ಗೂ ಹೆಚ್ಚು ಉದ್ದದ ಭೂ ಗಡಿಯನ್ನು ಹಂಚಿಕೊಂಡಿವೆ. ಕೆಲ ಗಡಿ ಭಾಗಗಳನ್ನು ಇನ್ನೂ ಗುರುತಿಸಲಾಗಿಲ್ಲ ಅಥವಾ ವಿವಾದಾತ್ಮಕವಾಗಿಯೇ ಉಳಿದಿವೆ. ಹೆಚ್ಚಿನ ವಿವಾದಿತ ಪ್ರದೇಶಗಳು 1907ರ ಫ್ರೆಂಚ್ ವಸಾಹತುಶಾಹಿ ಆಳ್ವಿಕೆಯಲ್ಲಿ ಚಿತ್ರಿಸಿದ ನಕ್ಷೆಗಿಂತ ಹಿಂದಿನವು. ಇದನ್ನು ಕಾಂಬೋಡಿಯಾ ತನ್ನ ಪ್ರದೇಶ ಎಂದು ಪ್ರತಿಪಾದಿಸಿಕೊಂಡು ಬಂದಿವೆ. ಥಾಯ್ಲೆಂಡ್ ವಿರೋಧಿಸಿದೆ.

ಕಳೆದ ಫೆಬ್ರವರಿಯಲ್ಲಿ, ಕಾಂಬೋಡಿಯನ್ ಪಡೆಗಳು ವಿವಾದಿತ ದೇವಾಲಯ ಪ್ರದೇಶವನ್ನು ಪ್ರವೇಶಿಸಿ ತಮ್ಮ ರಾಷ್ಟ್ರಗೀತೆಯನ್ನು ಹಾಡಿದಾಗ ಉದ್ವಿಗ್ನತೆ ಭುಗಿಲೆದ್ದಿತ್ತು. ಇದು ಥಾಯ್ ಸೈನಿಕರನ್ನು ಕೆರಳಿಸಿತ್ತು. ಐತಿಹಾಸಿಕವಾಗಿ, ಎರಡೂ ರಾಷ್ಟ್ರಗಳು ಹಕ್ಕು ಸಾಧಿಸಿರುವ 1,000 ವರ್ಷಗಳಷ್ಟು ಹಳೆಯದಾದ ಪ್ರಿಯಾ ವಿಹಿಯರ್ ದೇವಾಲಯದ ಸುತ್ತಲೂ ಅತ್ಯಂತ ಹಿಂಸಾತ್ಮಕ ಘರ್ಷಣೆಗಳು ನಡೆದಿತ್ತು.

1962ರಲ್ಲಿ, ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ದೇವಾಲಯದ ವಿಷಯದಲ್ಲಿ ಕಾಂಬೋಡಿಯಾದ ಪರವಾಗಿ ತೀರ್ಪು ನೀಡಿತ್ತು. 2011ರಲ್ಲಿ ನಡೆದ ಮಾರಕ ಘರ್ಷಣೆಗಳ ನಂತರ, ಐಸಿಜೆ 2013ರಲ್ಲಿ ಆ ಪ್ರದೇಶದ ಮೇಲೆ ಕಾಂಬೋಡಿಯಾದ ಸಾರ್ವಭೌಮತ್ವವನ್ನು ಪುನರುಚ್ಚರಿಸಿತ್ತು. ಈ ನಿರ್ಧಾರವು ಥಾಯ್ಲೆಂಡ್‌ನ ಆಕ್ರೋಶಕ್ಕೆ ಕಾರಣವಾಗಿದೆ.

ಥಾಯ್ಲೆಂಡ್-ಕಾಂಬೋಡಿಯಾ ಉದ್ವಿಗ್ನತೆಯಲ್ಲಿ ಹೊಸತೇನಿದೆ?

ಮೇ 28ರಂದು ಘರ್ಷಣೆ ನಡೆದ ಸ್ಥಳ ಸೇರಿದಂತೆ ಬಹು ವಿವಾದಿತ ಪ್ರದೇಶಗಳಿಗೆ ಕಾನೂನು ಪರಿಹಾರವನ್ನು ಕೋರಿ ಕಾಂಬೋಡಿಯಾ ಐಸಿಜೆ ಮೊರೆ ಹೋಗಿದೆ. ಆದರೆ, ಥಾಯ್ಲೆಂಡ್ ಐಸಿಜೆ ನ್ಯಾಯವ್ಯಾಪ್ತಿಯನ್ನು ತಿರಸ್ಕರಿಸಿದೆ. 2000ರಲ್ಲಿ ಸ್ಥಾಪಿಸಲಾದ ದ್ವಿಪಕ್ಷೀಯ ಕಾರ್ಯವಿಧಾನದ ಮೂಲಕ ಭೂ ಗಡಿ ಗುರುತಿಸುವಿಕೆಗೆ ಜವಾಬ್ದಾರರಾಗಿರುವ ಜಂಟಿ ಸಮಿತಿಯ ಮೂಲಕ ಪರಿಹಾರವನ್ನು ಕೋರಿದೆ.

ಕಾಂಬೋಡಿಯಾ ಇನ್ನು ಮುಂದೆ ದ್ವಿಪಕ್ಷೀಯ ಚರ್ಚೆಗಳನ್ನು ಮುಂದುವರಿಸುವುದಿಲ್ಲ ಎಂದಿದೆ. ಇದು ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ. ಎರಡೂ ಕಡೆಗಳಲ್ಲಿ ರಾಷ್ಟ್ರಪರ ವಾಗ್ವಾದಗಳು ಹೆಚ್ಚಿದ್ದು, ರಾಜತಾಂತ್ರಿಕತೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಘರ್ಷಣೆಯು ಕೇವಲ ಗಡಿ ವಿವಾದಕ್ಕೆ ಸೀಮಿತವಾಗಿಲ್ಲ. ಎರಡೂ ದೇಶಗಳ ನಡುವೆ ಆಳವಾದ ಸಾಂಸ್ಕೃತಿಕ ದ್ವೇಷವು ಶತಮಾನಗಳ ಹಿಂದಿನಿಂದ ಇದೆ. ಆಗ ಅವು ದೊಡ್ಡ ಮತ್ತು ಸ್ಪರ್ಧಾತ್ಮಕ ಸಾಮ್ರಾಜ್ಯಗಳಾಗಿದ್ದವು. ಇತ್ತೀಚಿನ ದಿನಗಳಲ್ಲಿ, ಫ್ರೆಂಚ್ ವಸಾಹತುಶಾಹಿ ಮತ್ತು 1970ರ ದಶಕದಲ್ಲಿ ಕಮ್ಯುನಿಸ್ಟ್ ಖಮೇರ್ ರೂಜ್‌ನ ಕ್ರೂರ ಆಳ್ವಿಕೆಯಿಂದ ಕಾಂಬೋಡಿಯಾದ ಅಭಿವೃದ್ಧಿಗೆ ಅಡ್ಡಿಯಾಗಿದೆ. ಆದ್ದರಿಂದ ಅದು ಥಾಯ್ಲೆಂಡ್‌ಗಿಂತ ಬಹಳ ಹಿಂದೆ ಇದೆ ಎಂಬ ಅಸಮಾಧಾನದ ಭಾವನೆ ಇದೆ.

ಬಾಕ್ಸಿಂಗ್ ಮತ್ತು ಮಾಸ್ಕ್‌ ಡ್ಯಾನ್ಸ್‌ನಿಂದ ಹಿಡಿದು ಸಾಂಪ್ರದಾಯಿಕ ಉಡುಪು ಮತ್ತು ಆಹಾರದವರೆಗೆ ಸಾಂಸ್ಕೃತಿಕ ಉತ್ಪನ್ನಗಳ ಹಕ್ಕುಗಳಿಗಾಗಿ ಎರಡೂ ದೇಶಗಳು ಹೋರಾಡುತ್ತಿವೆ.

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...