Homeಅಂತರಾಷ್ಟ್ರೀಯಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

ಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

- Advertisement -
- Advertisement -

ಮಂಗಳವಾರ ಸಾಂವಿಧಾನಿಕ ನ್ಯಾಯಾಲಯವು ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಅಮಾನತುಗೊಳಿಸಿರುವುದು ಥಾಯ್ಲೆಂಡ್ ರಾಜಕೀಯ ಮತ್ತು ರಾಜತಾಂತ್ರಿಕ ವ್ಯವಸ್ಥೆಯಲ್ಲಿ ಸಂಚಲನ ಮೂಡಿಸಿದೆ.

ಮಾರಕ ಗಡಿ ಘರ್ಷಣೆಯ ನಂತರ ಕಾಂಬೋಡಿಯನ್ ಸೆನೆಟ್ ಅಧ್ಯಕ್ಷ ಹುನ್ ಸೇನ್ ಅವರೊಂದಿಗಿನ ಫೋನ್ ಕರೆ ಸೋರಿಕೆಯಾದ ಕುರಿತ ತನಿಖೆಯ ಮಧ್ಯೆ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಹುನ್ ಸೇನ್ ಅವರೊಂದಿಗಿನ ಫೋನ್ ಸಂಭಾಷಣೆಯ ಸಮಯದಲ್ಲಿ ನೈತಿಕ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುವವರೆಗೆ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಪ್ರಧಾನಿ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಸೋರಿಕೆಯಾದ ಫೋನ್ ಕರೆಯಲ್ಲೇನಿತ್ತು?

ಮೇ 28, 2025ರಂದು ಥಾಯ್ ಮತ್ತು ಕಾಂಬೋಡಿಯನ್ ಪಡೆಗಳ ನಡುವಿನ ಗಡಿ ಘರ್ಷಣೆಯಲ್ಲಿ ಒಬ್ಬ ಕಾಂಬೋಡಿಯನ್ ಸೈನಿಕ ಸಾವನ್ನಪ್ಪಿದ ವಾರಗಳ ನಂತರ, ಅಂದರೆ ಜೂನ್ 15ರಂದು ಫೋನ್ ಸಂಭಾಷಣೆ ನಡೆದಿದೆ.

ಈ ಕರೆ ಸೋರಿಕೆಯಾಗಿ ಥಾಯ್ಲೆಂಡ್ ರಾಜಕೀಯದಲ್ಲಿ ಬಿರುಗಾಳಿಗೆ ಎದ್ದಿತ್ತು. ಪೇಟೊಂಗ್ಟಾರ್ನ್ ರಾಷ್ಟ್ರೀಯ ಹಿತಾಸಕ್ತಿಗಳ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಮಿಲಿಟರಿ ಅಧಿಕಾರವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಮರ್ಶಕರು ಆರೋಪಿಸಿದ್ದರು.

ಫೋನ್ ಕರೆಯನ್ನು ಹುನ್ ಸೇನ್ ರೆಕಾರ್ಡ್ ಮಾಡಿದ್ದಾರೆ. ನಂತರ ಅದು ಸೋರಿಕೆಯಾಗಿದೆ. ರೆಕಾರ್ಡ್ ಮಾಡಿದ ಸಂಭಾಷಣೆಯನ್ನು 80ಕ್ಕೂ ಹೆಚ್ಚು ಜನರೊಂದಿಗೆ ಹಂಚಿಕೊಂಡಿರುವುದಾಗಿ ಹುನ್ ಸೇನ್ ಹೇಳಿಕೊಂಡಿದ್ದಾರೆ.

ಫೋನ್ ಸಂಭಾಷಣೆಯಲ್ಲಿ, ಪೇಟೊಂಗ್ಟಾರ್ನ್ ಮತ್ತು ಹುನ್ ಸೇನ್ ಥಾಯ್ಲೆಂಡ್-ಕಾಂಬೋಡಿಯಾ ಗಡಿ ಉದ್ವಿಗ್ನತೆಯನ್ನು ಹೇಗೆ ಪರಿಹರಿಸುವುದು ಮತ್ತು ಘರ್ಷಣೆಯ ನಂತರ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಬೇಕೆ? ಎಂದು ಚರ್ಚಿಸಿರುವುದು ಇದೆ ಎಂದು ವರದಿಯಾಗಿದೆ.

ಬಹು ವರದಿಗಳ ಪ್ರಕಾರ, ಪೇಟೊಂಗ್ಟಾರ್ನ್ ಫೋನ್ ಕರೆಯಲ್ಲಿ ಹುನ್ ಸೇನ್ ಅವರನ್ನು ‘ಅಂಕಲ್’ ಎಂದು ಉಲ್ಲೇಖಿಸಿದ್ದಾರೆ. ಹುನ್ ಸೇನ್ ಪೇಟೊಂಗ್ಟಾರ್ನ್ ಅವರ ತಂದೆ ಥಾಕ್ಸಿನ್ ಶಿನವಾತ್ರ ಅವರ ಆಪ್ತ ಸ್ನೇಹಿತರಾಗಿದ್ದಾರೆ, ಅವರು ಕೂಡ ಥಾಯ್ಲೆಂಡ್ ಪ್ರಧಾನಿಯಾಗಿದ್ದರು.

ಥಾಯ್ಲೆಂಡ್‌ನ ‘ಇನ್ನೊಂದು ಕಡೆಯ’ ಮಾತನ್ನು ಕೇಳಬೇಡಿ ಎಂದು ಪೇಟೊಂಗ್ಟಾರ್ನ್ ಹುನ್ ಸೇನ್ ಅವರನ್ನು ಒತ್ತಾಯಿಸಿದ್ದಾರೆ ಮತ್ತು ಕಾಂಬೋಡಿಯಾವನ್ನು ನೇರವಾಗಿ ಟೀಕಿಸಿದ ಥಾಯ್ ಸೇನಾ ಕಮಾಂಡರ್ ಅನ್ನು ಉಲ್ಲೇಖಿಸಿದ್ದಾರೆ. ಸೋರಿಕೆಯಾದ ಫೋನ್ ಕರೆಯಲ್ಲಿ, ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಅನ್ನು ‘ವಿರೋಧಿ’ ಎಂದು ಹಣೆಪಟ್ಟಿ ಕಟ್ಟುವುದು ಸಹ ಕೇಳಬಹುದು ಎಂದು
ವರದಿಯಾಗಿದೆ.

ಅಷ್ಟಕ್ಕೆ ಸುಮ್ಮನಾಗದ ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಬಗ್ಗೆ ಉಲ್ಲೇಖಿಸುತ್ತಾ, “ಅವರು ಕೂಲ್ ಆಗಿ ಕಾಣಲು ಬಯಸುತ್ತಾರೆ” ಎಂದು ಹೇಳಿದ್ದಾರೆ. ಹುನ್‌ಸೇನ್ ಏನು ಬಯಸುತ್ತಿದ್ದಾರೆ ಎಂದು ಕೇಳಿರುವ ಪೇಟೊಂಗ್ಟಾರ್ನ್, ಅವರು ಬಯಸಿದ್ದನ್ನು ನೆರವೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಪೇಟೊಂಗ್ಟಾರ್ನ್ ಅವರ ಮಾತುಗಳು ಥಾಯ್ಲೆಂಡ್‌ನ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಂಡತಿದೆ. ಇದು ರಾಜತಾಂತ್ರಿಕ ಮತ್ತು ಮಿಲಿಟರಿ ನಿಲುವಿಗೆ ಹಾನಿ ಮಾಡುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಪೇಟೊಂಗ್ಟಾರ್ನ್ ಫೋನ್ ಕರೆ ಕುರಿತು ಕ್ಷಮೆಯಾಚಿಸಿದರೂ, ತನ್ನ ಮಾತುಕತೆ ಕಾರ್ಯ ತಂತ್ರದ ಭಾಗ ಎಂದು ಸಮರ್ಥಿಸಿಕೊಂಡಿದ್ದಾರೆ.

ಥಾಯ್-ಕಾಂಬೋಡಿಯನ್ ಗಡಿಯಲ್ಲಿರುವ ವಿವಾದಿತ ಪ್ರದೇಶದಲ್ಲಿ ಮೇ 28ರಂದು ನಡೆದ ಸಣ್ಣ ಗುಂಡಿನ ಚಕಮಕಿಯಿಂದ ಸಂಘರ್ಷ ಉಂಟಾಗಿದೆ. ಎರಡೂ ಕಡೆಯ ಸೈನಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯು ದೀರ್ಘಕಾಲದ ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತೆ ಮುನ್ನಲೆಗೆ ತಂದಿತ್ತು. ಆದರೆ, ಘರ್ಷಣೆಯ ನಂತರ ಎರಡೂ ಸರ್ಕಾರಗಳು ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಿಕೊಳ್ಳುವ ಉತ್ಸಾಹ ತೋರಿತ್ತು.

ಇದರ ಹೊರತಾಗಿಯೂ, ಪ್ರತೀಕಾರದ ಕ್ರಮಗಳು ಮುಂದುವರೆದಿತ್ತು. ಪರಿಣಾಮ ಥಾಯ್ಲೆಂಡ್ ತೀವ್ರ ಗಡಿ ನಿರ್ಬಂಧಗಳನ್ನು ವಿಧಿಸಿತ್ತು. ಅಗತ್ಯ ಮತ್ತು ಸೀಮಿತ ಗಡಿ ದಾಟುವಿಕೆಗಳಿಗೆ ಮಾತ್ರ ಅವಕಾಶ ನೀಡಿತ್ತು. ಕಾಂಬೋಡಿಯಾ ಥಾಯ್ ಮಾಧ್ಯಮವನ್ನು ನಿಷೇಧಿಸುವ ಮೂಲಕ, ಹಣ್ಣು ಮತ್ತು ತರಕಾರಿ ಆಮದುಗಳನ್ನು ನಿಲ್ಲಿಸುವ ಮೂಲಕ ಮತ್ತು ಥಾಯ್ ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಬಹಿಷ್ಕರಿಸುವ ಮೂಲಕ ಪ್ರತಿಕಾರ ತೀರಿಸಿತ್ತು. ಅಲ್ಲದೆ, ಕಾಂಬೋಡಿಯಾ ಥಾಯ್ಲೆಂಡ್‌ನಿಂದ ಇಂಧನ ಆಮದನ್ನು ಸಹ ಸ್ಥಗಿತಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ 800 ಕಿ.ಮೀ.ಗೂ ಹೆಚ್ಚು ಉದ್ದದ ಭೂ ಗಡಿಯನ್ನು ಹಂಚಿಕೊಂಡಿವೆ. ಕೆಲ ಗಡಿ ಭಾಗಗಳನ್ನು ಇನ್ನೂ ಗುರುತಿಸಲಾಗಿಲ್ಲ ಅಥವಾ ವಿವಾದಾತ್ಮಕವಾಗಿಯೇ ಉಳಿದಿವೆ. ಹೆಚ್ಚಿನ ವಿವಾದಿತ ಪ್ರದೇಶಗಳು 1907ರ ಫ್ರೆಂಚ್ ವಸಾಹತುಶಾಹಿ ಆಳ್ವಿಕೆಯಲ್ಲಿ ಚಿತ್ರಿಸಿದ ನಕ್ಷೆಗಿಂತ ಹಿಂದಿನವು. ಇದನ್ನು ಕಾಂಬೋಡಿಯಾ ತನ್ನ ಪ್ರದೇಶ ಎಂದು ಪ್ರತಿಪಾದಿಸಿಕೊಂಡು ಬಂದಿವೆ. ಥಾಯ್ಲೆಂಡ್ ವಿರೋಧಿಸಿದೆ.

ಕಳೆದ ಫೆಬ್ರವರಿಯಲ್ಲಿ, ಕಾಂಬೋಡಿಯನ್ ಪಡೆಗಳು ವಿವಾದಿತ ದೇವಾಲಯ ಪ್ರದೇಶವನ್ನು ಪ್ರವೇಶಿಸಿ ತಮ್ಮ ರಾಷ್ಟ್ರಗೀತೆಯನ್ನು ಹಾಡಿದಾಗ ಉದ್ವಿಗ್ನತೆ ಭುಗಿಲೆದ್ದಿತ್ತು. ಇದು ಥಾಯ್ ಸೈನಿಕರನ್ನು ಕೆರಳಿಸಿತ್ತು. ಐತಿಹಾಸಿಕವಾಗಿ, ಎರಡೂ ರಾಷ್ಟ್ರಗಳು ಹಕ್ಕು ಸಾಧಿಸಿರುವ 1,000 ವರ್ಷಗಳಷ್ಟು ಹಳೆಯದಾದ ಪ್ರಿಯಾ ವಿಹಿಯರ್ ದೇವಾಲಯದ ಸುತ್ತಲೂ ಅತ್ಯಂತ ಹಿಂಸಾತ್ಮಕ ಘರ್ಷಣೆಗಳು ನಡೆದಿತ್ತು.

1962ರಲ್ಲಿ, ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ದೇವಾಲಯದ ವಿಷಯದಲ್ಲಿ ಕಾಂಬೋಡಿಯಾದ ಪರವಾಗಿ ತೀರ್ಪು ನೀಡಿತ್ತು. 2011ರಲ್ಲಿ ನಡೆದ ಮಾರಕ ಘರ್ಷಣೆಗಳ ನಂತರ, ಐಸಿಜೆ 2013ರಲ್ಲಿ ಆ ಪ್ರದೇಶದ ಮೇಲೆ ಕಾಂಬೋಡಿಯಾದ ಸಾರ್ವಭೌಮತ್ವವನ್ನು ಪುನರುಚ್ಚರಿಸಿತ್ತು. ಈ ನಿರ್ಧಾರವು ಥಾಯ್ಲೆಂಡ್‌ನ ಆಕ್ರೋಶಕ್ಕೆ ಕಾರಣವಾಗಿದೆ.

ಥಾಯ್ಲೆಂಡ್-ಕಾಂಬೋಡಿಯಾ ಉದ್ವಿಗ್ನತೆಯಲ್ಲಿ ಹೊಸತೇನಿದೆ?

ಮೇ 28ರಂದು ಘರ್ಷಣೆ ನಡೆದ ಸ್ಥಳ ಸೇರಿದಂತೆ ಬಹು ವಿವಾದಿತ ಪ್ರದೇಶಗಳಿಗೆ ಕಾನೂನು ಪರಿಹಾರವನ್ನು ಕೋರಿ ಕಾಂಬೋಡಿಯಾ ಐಸಿಜೆ ಮೊರೆ ಹೋಗಿದೆ. ಆದರೆ, ಥಾಯ್ಲೆಂಡ್ ಐಸಿಜೆ ನ್ಯಾಯವ್ಯಾಪ್ತಿಯನ್ನು ತಿರಸ್ಕರಿಸಿದೆ. 2000ರಲ್ಲಿ ಸ್ಥಾಪಿಸಲಾದ ದ್ವಿಪಕ್ಷೀಯ ಕಾರ್ಯವಿಧಾನದ ಮೂಲಕ ಭೂ ಗಡಿ ಗುರುತಿಸುವಿಕೆಗೆ ಜವಾಬ್ದಾರರಾಗಿರುವ ಜಂಟಿ ಸಮಿತಿಯ ಮೂಲಕ ಪರಿಹಾರವನ್ನು ಕೋರಿದೆ.

ಕಾಂಬೋಡಿಯಾ ಇನ್ನು ಮುಂದೆ ದ್ವಿಪಕ್ಷೀಯ ಚರ್ಚೆಗಳನ್ನು ಮುಂದುವರಿಸುವುದಿಲ್ಲ ಎಂದಿದೆ. ಇದು ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ. ಎರಡೂ ಕಡೆಗಳಲ್ಲಿ ರಾಷ್ಟ್ರಪರ ವಾಗ್ವಾದಗಳು ಹೆಚ್ಚಿದ್ದು, ರಾಜತಾಂತ್ರಿಕತೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಘರ್ಷಣೆಯು ಕೇವಲ ಗಡಿ ವಿವಾದಕ್ಕೆ ಸೀಮಿತವಾಗಿಲ್ಲ. ಎರಡೂ ದೇಶಗಳ ನಡುವೆ ಆಳವಾದ ಸಾಂಸ್ಕೃತಿಕ ದ್ವೇಷವು ಶತಮಾನಗಳ ಹಿಂದಿನಿಂದ ಇದೆ. ಆಗ ಅವು ದೊಡ್ಡ ಮತ್ತು ಸ್ಪರ್ಧಾತ್ಮಕ ಸಾಮ್ರಾಜ್ಯಗಳಾಗಿದ್ದವು. ಇತ್ತೀಚಿನ ದಿನಗಳಲ್ಲಿ, ಫ್ರೆಂಚ್ ವಸಾಹತುಶಾಹಿ ಮತ್ತು 1970ರ ದಶಕದಲ್ಲಿ ಕಮ್ಯುನಿಸ್ಟ್ ಖಮೇರ್ ರೂಜ್‌ನ ಕ್ರೂರ ಆಳ್ವಿಕೆಯಿಂದ ಕಾಂಬೋಡಿಯಾದ ಅಭಿವೃದ್ಧಿಗೆ ಅಡ್ಡಿಯಾಗಿದೆ. ಆದ್ದರಿಂದ ಅದು ಥಾಯ್ಲೆಂಡ್‌ಗಿಂತ ಬಹಳ ಹಿಂದೆ ಇದೆ ಎಂಬ ಅಸಮಾಧಾನದ ಭಾವನೆ ಇದೆ.

ಬಾಕ್ಸಿಂಗ್ ಮತ್ತು ಮಾಸ್ಕ್‌ ಡ್ಯಾನ್ಸ್‌ನಿಂದ ಹಿಡಿದು ಸಾಂಪ್ರದಾಯಿಕ ಉಡುಪು ಮತ್ತು ಆಹಾರದವರೆಗೆ ಸಾಂಸ್ಕೃತಿಕ ಉತ್ಪನ್ನಗಳ ಹಕ್ಕುಗಳಿಗಾಗಿ ಎರಡೂ ದೇಶಗಳು ಹೋರಾಡುತ್ತಿವೆ.

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...