Homeಅಂತರಾಷ್ಟ್ರೀಯಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

ಥಾಯ್ಲೆಂಡ್ ಪ್ರಧಾನಿಯ ಅಮಾನತಿಗೆ ಕಾರಣವಾದ ಫೋನ್ ಕಾಲ್: ಅದರಲ್ಲಿ ಅಂತದ್ದೇನಿದೆ?

- Advertisement -
- Advertisement -

ಮಂಗಳವಾರ ಸಾಂವಿಧಾನಿಕ ನ್ಯಾಯಾಲಯವು ಪ್ರಧಾನಿ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಅಮಾನತುಗೊಳಿಸಿರುವುದು ಥಾಯ್ಲೆಂಡ್ ರಾಜಕೀಯ ಮತ್ತು ರಾಜತಾಂತ್ರಿಕ ವ್ಯವಸ್ಥೆಯಲ್ಲಿ ಸಂಚಲನ ಮೂಡಿಸಿದೆ.

ಮಾರಕ ಗಡಿ ಘರ್ಷಣೆಯ ನಂತರ ಕಾಂಬೋಡಿಯನ್ ಸೆನೆಟ್ ಅಧ್ಯಕ್ಷ ಹುನ್ ಸೇನ್ ಅವರೊಂದಿಗಿನ ಫೋನ್ ಕರೆ ಸೋರಿಕೆಯಾದ ಕುರಿತ ತನಿಖೆಯ ಮಧ್ಯೆ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.

ಹುನ್ ಸೇನ್ ಅವರೊಂದಿಗಿನ ಫೋನ್ ಸಂಭಾಷಣೆಯ ಸಮಯದಲ್ಲಿ ನೈತಿಕ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುವವರೆಗೆ ಪೇಟೊಂಗ್ಟಾರ್ನ್ ಶಿನವಾತ್ರ ಅವರನ್ನು ಪ್ರಧಾನಿ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಸೋರಿಕೆಯಾದ ಫೋನ್ ಕರೆಯಲ್ಲೇನಿತ್ತು?

ಮೇ 28, 2025ರಂದು ಥಾಯ್ ಮತ್ತು ಕಾಂಬೋಡಿಯನ್ ಪಡೆಗಳ ನಡುವಿನ ಗಡಿ ಘರ್ಷಣೆಯಲ್ಲಿ ಒಬ್ಬ ಕಾಂಬೋಡಿಯನ್ ಸೈನಿಕ ಸಾವನ್ನಪ್ಪಿದ ವಾರಗಳ ನಂತರ, ಅಂದರೆ ಜೂನ್ 15ರಂದು ಫೋನ್ ಸಂಭಾಷಣೆ ನಡೆದಿದೆ.

ಈ ಕರೆ ಸೋರಿಕೆಯಾಗಿ ಥಾಯ್ಲೆಂಡ್ ರಾಜಕೀಯದಲ್ಲಿ ಬಿರುಗಾಳಿಗೆ ಎದ್ದಿತ್ತು. ಪೇಟೊಂಗ್ಟಾರ್ನ್ ರಾಷ್ಟ್ರೀಯ ಹಿತಾಸಕ್ತಿಗಳ ವಿಷಯದಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಮಿಲಿಟರಿ ಅಧಿಕಾರವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ವಿಮರ್ಶಕರು ಆರೋಪಿಸಿದ್ದರು.

ಫೋನ್ ಕರೆಯನ್ನು ಹುನ್ ಸೇನ್ ರೆಕಾರ್ಡ್ ಮಾಡಿದ್ದಾರೆ. ನಂತರ ಅದು ಸೋರಿಕೆಯಾಗಿದೆ. ರೆಕಾರ್ಡ್ ಮಾಡಿದ ಸಂಭಾಷಣೆಯನ್ನು 80ಕ್ಕೂ ಹೆಚ್ಚು ಜನರೊಂದಿಗೆ ಹಂಚಿಕೊಂಡಿರುವುದಾಗಿ ಹುನ್ ಸೇನ್ ಹೇಳಿಕೊಂಡಿದ್ದಾರೆ.

ಫೋನ್ ಸಂಭಾಷಣೆಯಲ್ಲಿ, ಪೇಟೊಂಗ್ಟಾರ್ನ್ ಮತ್ತು ಹುನ್ ಸೇನ್ ಥಾಯ್ಲೆಂಡ್-ಕಾಂಬೋಡಿಯಾ ಗಡಿ ಉದ್ವಿಗ್ನತೆಯನ್ನು ಹೇಗೆ ಪರಿಹರಿಸುವುದು ಮತ್ತು ಘರ್ಷಣೆಯ ನಂತರ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಬೇಕೆ? ಎಂದು ಚರ್ಚಿಸಿರುವುದು ಇದೆ ಎಂದು ವರದಿಯಾಗಿದೆ.

ಬಹು ವರದಿಗಳ ಪ್ರಕಾರ, ಪೇಟೊಂಗ್ಟಾರ್ನ್ ಫೋನ್ ಕರೆಯಲ್ಲಿ ಹುನ್ ಸೇನ್ ಅವರನ್ನು ‘ಅಂಕಲ್’ ಎಂದು ಉಲ್ಲೇಖಿಸಿದ್ದಾರೆ. ಹುನ್ ಸೇನ್ ಪೇಟೊಂಗ್ಟಾರ್ನ್ ಅವರ ತಂದೆ ಥಾಕ್ಸಿನ್ ಶಿನವಾತ್ರ ಅವರ ಆಪ್ತ ಸ್ನೇಹಿತರಾಗಿದ್ದಾರೆ, ಅವರು ಕೂಡ ಥಾಯ್ಲೆಂಡ್ ಪ್ರಧಾನಿಯಾಗಿದ್ದರು.

ಥಾಯ್ಲೆಂಡ್‌ನ ‘ಇನ್ನೊಂದು ಕಡೆಯ’ ಮಾತನ್ನು ಕೇಳಬೇಡಿ ಎಂದು ಪೇಟೊಂಗ್ಟಾರ್ನ್ ಹುನ್ ಸೇನ್ ಅವರನ್ನು ಒತ್ತಾಯಿಸಿದ್ದಾರೆ ಮತ್ತು ಕಾಂಬೋಡಿಯಾವನ್ನು ನೇರವಾಗಿ ಟೀಕಿಸಿದ ಥಾಯ್ ಸೇನಾ ಕಮಾಂಡರ್ ಅನ್ನು ಉಲ್ಲೇಖಿಸಿದ್ದಾರೆ. ಸೋರಿಕೆಯಾದ ಫೋನ್ ಕರೆಯಲ್ಲಿ, ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಅನ್ನು ‘ವಿರೋಧಿ’ ಎಂದು ಹಣೆಪಟ್ಟಿ ಕಟ್ಟುವುದು ಸಹ ಕೇಳಬಹುದು ಎಂದು
ವರದಿಯಾಗಿದೆ.

ಅಷ್ಟಕ್ಕೆ ಸುಮ್ಮನಾಗದ ಪೇಟೊಂಗ್ಟಾರ್ನ್ ಸೇನಾ ಕಮಾಂಡರ್ ಬಗ್ಗೆ ಉಲ್ಲೇಖಿಸುತ್ತಾ, “ಅವರು ಕೂಲ್ ಆಗಿ ಕಾಣಲು ಬಯಸುತ್ತಾರೆ” ಎಂದು ಹೇಳಿದ್ದಾರೆ. ಹುನ್‌ಸೇನ್ ಏನು ಬಯಸುತ್ತಿದ್ದಾರೆ ಎಂದು ಕೇಳಿರುವ ಪೇಟೊಂಗ್ಟಾರ್ನ್, ಅವರು ಬಯಸಿದ್ದನ್ನು ನೆರವೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಪೇಟೊಂಗ್ಟಾರ್ನ್ ಅವರ ಮಾತುಗಳು ಥಾಯ್ಲೆಂಡ್‌ನ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಂಡತಿದೆ. ಇದು ರಾಜತಾಂತ್ರಿಕ ಮತ್ತು ಮಿಲಿಟರಿ ನಿಲುವಿಗೆ ಹಾನಿ ಮಾಡುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಪೇಟೊಂಗ್ಟಾರ್ನ್ ಫೋನ್ ಕರೆ ಕುರಿತು ಕ್ಷಮೆಯಾಚಿಸಿದರೂ, ತನ್ನ ಮಾತುಕತೆ ಕಾರ್ಯ ತಂತ್ರದ ಭಾಗ ಎಂದು ಸಮರ್ಥಿಸಿಕೊಂಡಿದ್ದಾರೆ.

ಥಾಯ್-ಕಾಂಬೋಡಿಯನ್ ಗಡಿಯಲ್ಲಿರುವ ವಿವಾದಿತ ಪ್ರದೇಶದಲ್ಲಿ ಮೇ 28ರಂದು ನಡೆದ ಸಣ್ಣ ಗುಂಡಿನ ಚಕಮಕಿಯಿಂದ ಸಂಘರ್ಷ ಉಂಟಾಗಿದೆ. ಎರಡೂ ಕಡೆಯ ಸೈನಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯು ದೀರ್ಘಕಾಲದ ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತೆ ಮುನ್ನಲೆಗೆ ತಂದಿತ್ತು. ಆದರೆ, ಘರ್ಷಣೆಯ ನಂತರ ಎರಡೂ ಸರ್ಕಾರಗಳು ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಪರಿಹರಿಸಿಕೊಳ್ಳುವ ಉತ್ಸಾಹ ತೋರಿತ್ತು.

ಇದರ ಹೊರತಾಗಿಯೂ, ಪ್ರತೀಕಾರದ ಕ್ರಮಗಳು ಮುಂದುವರೆದಿತ್ತು. ಪರಿಣಾಮ ಥಾಯ್ಲೆಂಡ್ ತೀವ್ರ ಗಡಿ ನಿರ್ಬಂಧಗಳನ್ನು ವಿಧಿಸಿತ್ತು. ಅಗತ್ಯ ಮತ್ತು ಸೀಮಿತ ಗಡಿ ದಾಟುವಿಕೆಗಳಿಗೆ ಮಾತ್ರ ಅವಕಾಶ ನೀಡಿತ್ತು. ಕಾಂಬೋಡಿಯಾ ಥಾಯ್ ಮಾಧ್ಯಮವನ್ನು ನಿಷೇಧಿಸುವ ಮೂಲಕ, ಹಣ್ಣು ಮತ್ತು ತರಕಾರಿ ಆಮದುಗಳನ್ನು ನಿಲ್ಲಿಸುವ ಮೂಲಕ ಮತ್ತು ಥಾಯ್ ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕಗಳನ್ನು ಬಹಿಷ್ಕರಿಸುವ ಮೂಲಕ ಪ್ರತಿಕಾರ ತೀರಿಸಿತ್ತು. ಅಲ್ಲದೆ, ಕಾಂಬೋಡಿಯಾ ಥಾಯ್ಲೆಂಡ್‌ನಿಂದ ಇಂಧನ ಆಮದನ್ನು ಸಹ ಸ್ಥಗಿತಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ 800 ಕಿ.ಮೀ.ಗೂ ಹೆಚ್ಚು ಉದ್ದದ ಭೂ ಗಡಿಯನ್ನು ಹಂಚಿಕೊಂಡಿವೆ. ಕೆಲ ಗಡಿ ಭಾಗಗಳನ್ನು ಇನ್ನೂ ಗುರುತಿಸಲಾಗಿಲ್ಲ ಅಥವಾ ವಿವಾದಾತ್ಮಕವಾಗಿಯೇ ಉಳಿದಿವೆ. ಹೆಚ್ಚಿನ ವಿವಾದಿತ ಪ್ರದೇಶಗಳು 1907ರ ಫ್ರೆಂಚ್ ವಸಾಹತುಶಾಹಿ ಆಳ್ವಿಕೆಯಲ್ಲಿ ಚಿತ್ರಿಸಿದ ನಕ್ಷೆಗಿಂತ ಹಿಂದಿನವು. ಇದನ್ನು ಕಾಂಬೋಡಿಯಾ ತನ್ನ ಪ್ರದೇಶ ಎಂದು ಪ್ರತಿಪಾದಿಸಿಕೊಂಡು ಬಂದಿವೆ. ಥಾಯ್ಲೆಂಡ್ ವಿರೋಧಿಸಿದೆ.

ಕಳೆದ ಫೆಬ್ರವರಿಯಲ್ಲಿ, ಕಾಂಬೋಡಿಯನ್ ಪಡೆಗಳು ವಿವಾದಿತ ದೇವಾಲಯ ಪ್ರದೇಶವನ್ನು ಪ್ರವೇಶಿಸಿ ತಮ್ಮ ರಾಷ್ಟ್ರಗೀತೆಯನ್ನು ಹಾಡಿದಾಗ ಉದ್ವಿಗ್ನತೆ ಭುಗಿಲೆದ್ದಿತ್ತು. ಇದು ಥಾಯ್ ಸೈನಿಕರನ್ನು ಕೆರಳಿಸಿತ್ತು. ಐತಿಹಾಸಿಕವಾಗಿ, ಎರಡೂ ರಾಷ್ಟ್ರಗಳು ಹಕ್ಕು ಸಾಧಿಸಿರುವ 1,000 ವರ್ಷಗಳಷ್ಟು ಹಳೆಯದಾದ ಪ್ರಿಯಾ ವಿಹಿಯರ್ ದೇವಾಲಯದ ಸುತ್ತಲೂ ಅತ್ಯಂತ ಹಿಂಸಾತ್ಮಕ ಘರ್ಷಣೆಗಳು ನಡೆದಿತ್ತು.

1962ರಲ್ಲಿ, ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ದೇವಾಲಯದ ವಿಷಯದಲ್ಲಿ ಕಾಂಬೋಡಿಯಾದ ಪರವಾಗಿ ತೀರ್ಪು ನೀಡಿತ್ತು. 2011ರಲ್ಲಿ ನಡೆದ ಮಾರಕ ಘರ್ಷಣೆಗಳ ನಂತರ, ಐಸಿಜೆ 2013ರಲ್ಲಿ ಆ ಪ್ರದೇಶದ ಮೇಲೆ ಕಾಂಬೋಡಿಯಾದ ಸಾರ್ವಭೌಮತ್ವವನ್ನು ಪುನರುಚ್ಚರಿಸಿತ್ತು. ಈ ನಿರ್ಧಾರವು ಥಾಯ್ಲೆಂಡ್‌ನ ಆಕ್ರೋಶಕ್ಕೆ ಕಾರಣವಾಗಿದೆ.

ಥಾಯ್ಲೆಂಡ್-ಕಾಂಬೋಡಿಯಾ ಉದ್ವಿಗ್ನತೆಯಲ್ಲಿ ಹೊಸತೇನಿದೆ?

ಮೇ 28ರಂದು ಘರ್ಷಣೆ ನಡೆದ ಸ್ಥಳ ಸೇರಿದಂತೆ ಬಹು ವಿವಾದಿತ ಪ್ರದೇಶಗಳಿಗೆ ಕಾನೂನು ಪರಿಹಾರವನ್ನು ಕೋರಿ ಕಾಂಬೋಡಿಯಾ ಐಸಿಜೆ ಮೊರೆ ಹೋಗಿದೆ. ಆದರೆ, ಥಾಯ್ಲೆಂಡ್ ಐಸಿಜೆ ನ್ಯಾಯವ್ಯಾಪ್ತಿಯನ್ನು ತಿರಸ್ಕರಿಸಿದೆ. 2000ರಲ್ಲಿ ಸ್ಥಾಪಿಸಲಾದ ದ್ವಿಪಕ್ಷೀಯ ಕಾರ್ಯವಿಧಾನದ ಮೂಲಕ ಭೂ ಗಡಿ ಗುರುತಿಸುವಿಕೆಗೆ ಜವಾಬ್ದಾರರಾಗಿರುವ ಜಂಟಿ ಸಮಿತಿಯ ಮೂಲಕ ಪರಿಹಾರವನ್ನು ಕೋರಿದೆ.

ಕಾಂಬೋಡಿಯಾ ಇನ್ನು ಮುಂದೆ ದ್ವಿಪಕ್ಷೀಯ ಚರ್ಚೆಗಳನ್ನು ಮುಂದುವರಿಸುವುದಿಲ್ಲ ಎಂದಿದೆ. ಇದು ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ. ಎರಡೂ ಕಡೆಗಳಲ್ಲಿ ರಾಷ್ಟ್ರಪರ ವಾಗ್ವಾದಗಳು ಹೆಚ್ಚಿದ್ದು, ರಾಜತಾಂತ್ರಿಕತೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಘರ್ಷಣೆಯು ಕೇವಲ ಗಡಿ ವಿವಾದಕ್ಕೆ ಸೀಮಿತವಾಗಿಲ್ಲ. ಎರಡೂ ದೇಶಗಳ ನಡುವೆ ಆಳವಾದ ಸಾಂಸ್ಕೃತಿಕ ದ್ವೇಷವು ಶತಮಾನಗಳ ಹಿಂದಿನಿಂದ ಇದೆ. ಆಗ ಅವು ದೊಡ್ಡ ಮತ್ತು ಸ್ಪರ್ಧಾತ್ಮಕ ಸಾಮ್ರಾಜ್ಯಗಳಾಗಿದ್ದವು. ಇತ್ತೀಚಿನ ದಿನಗಳಲ್ಲಿ, ಫ್ರೆಂಚ್ ವಸಾಹತುಶಾಹಿ ಮತ್ತು 1970ರ ದಶಕದಲ್ಲಿ ಕಮ್ಯುನಿಸ್ಟ್ ಖಮೇರ್ ರೂಜ್‌ನ ಕ್ರೂರ ಆಳ್ವಿಕೆಯಿಂದ ಕಾಂಬೋಡಿಯಾದ ಅಭಿವೃದ್ಧಿಗೆ ಅಡ್ಡಿಯಾಗಿದೆ. ಆದ್ದರಿಂದ ಅದು ಥಾಯ್ಲೆಂಡ್‌ಗಿಂತ ಬಹಳ ಹಿಂದೆ ಇದೆ ಎಂಬ ಅಸಮಾಧಾನದ ಭಾವನೆ ಇದೆ.

ಬಾಕ್ಸಿಂಗ್ ಮತ್ತು ಮಾಸ್ಕ್‌ ಡ್ಯಾನ್ಸ್‌ನಿಂದ ಹಿಡಿದು ಸಾಂಪ್ರದಾಯಿಕ ಉಡುಪು ಮತ್ತು ಆಹಾರದವರೆಗೆ ಸಾಂಸ್ಕೃತಿಕ ಉತ್ಪನ್ನಗಳ ಹಕ್ಕುಗಳಿಗಾಗಿ ಎರಡೂ ದೇಶಗಳು ಹೋರಾಡುತ್ತಿವೆ.

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ಶ್ವೇತಭವನದಲ್ಲಿ ಪುನರುಚ್ಚರಿಸಿದ ಟ್ರಂಪ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...