Homeಮುಖಪುಟಟಿಪ್ಪು ಸುಲ್ತಾನರ ಖಡ್ಗದಲ್ಲಿ ಬರೆದಿರುವುದೇನು...?

ಟಿಪ್ಪು ಸುಲ್ತಾನರ ಖಡ್ಗದಲ್ಲಿ ಬರೆದಿರುವುದೇನು…?

- Advertisement -
- Advertisement -

ಮೇ 4, 1799ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಅಕ್ಷರಶಃ ಹುಲಿಯಂತೆಯೇ ಕಾದಾಡಿ ರಣರಂಗದಲ್ಲಿ ಹುತಾತ್ಮರಾದರು. ಟಿಪ್ಪು ಸುಲ್ತಾನರ ಹುತಾತ್ಮತೆಯೊಂದಿಗೆ ಉಪಖಂಡದಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿಯ ಅಧಿಪತ್ಯ ಸ್ಥಾಪನೆಗಿದ್ದ ಅಡೆ ತಡೆ ಶಾಶ್ವತವಾಗಿ ಇಲ್ಲವಾಯಿತು. ಟಿಪ್ಪು ಹುತಾತ್ಮರಾಗಿ ರಣರಂಗದಲ್ಲಿ ಬಿದ್ಧಾಗ ಅವರ ಕೈಯಲ್ಲಿದ್ದ ಖಡ್ಗವನ್ನು ಬ್ರಿಟಿಷ್ ಸೈನಿಕರು ಎಳೆದುಕೊಂಡು ಹೋದರು. ಅಂತಹದ್ದೇ ಸಾವಿರಾರು ಖಡ್ಗಗಳು ಟಿಪ್ಪು ಸುಲ್ತಾನರ ಆಯುಧ ಮನೆಯಲ್ಲಿತ್ತು. ಅವುಗಳನ್ನೂ ಬ್ರಿಟಿಷರು ದೋಚಿದರು.

ಟಿಪ್ಪು ಸುಲ್ತಾನರು ಹುತಾತ್ಮರಾದಾಗ ಅವರ ಕೈಯಿಂದ ಬ್ರಿಟಿಷ್ ಸೈನಿಕನೋರ್ವ ಎಳೆದು ತೆಗೆದುಕೊಂಡ ಖಡ್ಗವನ್ನು ಲಂಡನ್‌ನ ಮ್ಯೂಸಿಯಂ‌ನಲ್ಲಿಡಲಾಗಿತ್ತು. ಟಿಪ್ಪು ಹುತಾತ್ಮರಾಗಿ ಸುಮಾರು 205 ವರ್ಷಗಳ ಬಳಿಕ ಅಂದರೆ 2004ರಲ್ಲಿ ಉದ್ಯಮಿ ವಿಜಯ್ ಮಲ್ಯ ಹರಾಜಿನಲ್ಲಿ ಒಂದೂವರೆ ಕೋಟಿ ರೂಪಾಯಿ ಪಾವತಿಸಿ ಆ ಖಡ್ಗವನ್ನು ಖರೀದಿಸಿದ್ದರು.
ಆ ಖಡ್ಗದಲ್ಲಿ “ನನ್ನ ಈ ಖಡ್ಗ ಕಾಫಿರರ ನಾಶಕ್ಕಾಗಿ.. ಹೈದರ್ ನನ್ನ ಸಹಾಯಿ… ಅವರು ಕಾಫಿರರ ಕುತಂತ್ರಗಳನ್ನು ನಾಶಪಡಿಸಿದ……” ಹೀಗೆ ಅರಬಿಕ್‌ನಲ್ಲಿ ಬರೆಯಲಾಗಿತ್ತೆಂದು ಟಿಪ್ಪುವಿನ ಕುರಿತಂತೆ ಅಪಪ್ರಚಾರ ಮಾಡುತ್ತಾ ಬರಲಾಗಿದೆ..

ವಾಸ್ತವದಲ್ಲಿ ಆ ಖಡ್ಗದ ಹಿಡಿಕೆಯಲ್ಲಿ ಅರಬಿ ಲಿಪಿಯಲ್ಲಿ ಬರೆದಿರುವುದು “ಯಾ ನಸೀರ್, ಯಾ ಫತಾಹ್, ಯಾ ನಸೀರ್, ಯಾ ಮುಈನ್…” ಎಂಬುದಾಗಿದೆ. ಮತ್ತು ಅದರ ಹಿಡಿಕೆಯ ಎರಡೂ ತುದಿಗಳಲ್ಲಿ ಯಾ ಅಲ್ಲಾಹ್..‌ ಯಾ ಅಲ್ಲಾಹ್… ಎಂದು ಬರೆಯಲಾಗಿದೆ. ಅರಬಿಕ್ ಮತ್ತು ಉರ್ದು ಓದಲು ಬಲ್ಲ ಯಾರು ಬೇಕಾದರೂ ಅಂತರ್ಜಾಲದಲ್ಲಿ ಸಿಗುವ ಆ ಖಡ್ಗದ ಫೋಟೋ ಡೌನ್‌ಲೋಡ್ ಮಾಡಿ ಸುಲಭವಾಗಿ ಓದಬಹುದು..

ಟಿಪ್ಪುವಿನ ಖಡ್ಗದ ಮೇಲಿರುವ ಆ ಅರಬಿಕ್ ಪದಗಳು ಅಲ್ಲಾಹನ ತೊಂಬತ್ತೊಂಬತ್ತು ನಾಮ ವಿಶೇಷಣಗಳಲ್ಲಿ ಕೆಲವಾಗಿದೆ.
ಅವುಗಳ ಅರ್ಥ ಈ ರೀತಿಯಾಗಿದೆ.
ಯಾ ನಸೀರ್ = ಓ ಸಹಾಯ ನೀಡುವವನೇ…
ಯಾ ಫತಾಹ್ = ಓ ಯಶಸ್ಸು ನೀಡುವವನೇ…
ಯಾ ಝಹೀರುಲ್ಲಾಹ್ = ಓ ಬೆಳಕು ತೋರುವವನೇ…
ಓ ಅಲ್ಲಾಹ್…ಓ ಅಲ್ಲಾಹ್..
ಅದರಲ್ಲಿ ಎಲ್ಲೂ ಕಾಫಿರ್ ಎಂಬ ಅರಬಿಕ್‌ ಪದ ಬಳಸಲಾಗಿಲ್ಲ.
ಮತ್ತು ಮುಸ್ಲಿಮರ ವಿಶ್ವಾಸದ ಪ್ರಕಾರ ತಂದೆ- ತಾಯಿಯನ್ನು ಯಾರೂ ದೈವತ್ವಕ್ಕೇರಿಸುವುದಿಲ್ಲ. ಹೈದರ್ ನನಗೆ ಸಹಾಯ ನೀಡುವವನು ಎಂದು ಬರೆಯಲಾಗಿದೆ ಎಂದೂ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ವಾಸ್ತವವಾಗಿ ಅದರಲ್ಲೆಲ್ಲೂ ಹೈದರನ ಹೆಸರೇ ಇಲ್ಲ..

ಅಂತರ್ಜಾಲದಲ್ಲಿ ಟಿಪ್ಪುವಿನ ಖಡ್ಗದಲ್ಲಿ ಬರೆದಿಡಲಾಗಿದೆ ಎನ್ನುವ ವಾಕ್ಯಗಳು ಮೈಸೂರು ಗೆಜೆಟಿಯರ್‌ನದ್ದೆಂದೂ ಇದೆ. ನಿಜಕ್ಕೂ ಮೈಸೂರು ಗೆಜೆಟಿಯರ್‌ನಲ್ಲಿ ಅಂತಹ ವಾಕ್ಯಗಳಿವೆಯೋ ನಾನರಿಯೆ.
………………….

ಟಿಪ್ಪು ಸುಲ್ತಾನರ ಇನ್ನೂ ಕೆಲವು ಖಡ್ಗಗಳನ್ನು ವೀಕ್ಷಿಸಿ ಅವುಗಳಲ್ಲಿ ಬರೆದಿಡಲ್ಪಟ್ಟ ಕೆಲವು ಅರಬಿಕ್ ವಾಕ್ಯಗಳನ್ನು ಓದಿದ ಯೂ ಟ್ಯೂಬರ್ ಒಬ್ಬರು ಅವುಗಳ ಕುರಿತಂತೆ ಯೂ ಟ್ಯೂಬ್‌‌ನಲ್ಲಿ ಉರ್ದು ಭಾಷೆಯ ವೀಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದಾರೆ.
ಎರಡು ಬೇರೆ ಬೇರೆ ಖಡ್ಗಗಳಲ್ಲಿ ಖುರ್‌ಆನಿನ ವಾಕ್ಯಗಳನ್ನು ಬರೆದಿಡಲಾಗಿದೆ.
ಒಂದು ಖಡ್ಗದಲ್ಲಿ ಖುರ್‌ಆನಿನ ಎರಡನೇ ಅಧ್ಯಾಯವಾದ ಸೂರಃ ಅಲ್ ಬಕರಾ ಇದರ ನೂರ ಎಂಟನೇ ವಾಕ್ಯದ ಒಂದು ಭಾಗವನ್ನು ಬರೆಯಲಾಗಿದೆ. ಅದರ ಅರ್ಥ “ನಿಶ್ಚಯವಾಗಿಯೂ ಅಲ್ಲಾಹನು ಸರ್ವಶಕ್ತನು…”

ಇನ್ನೊಂದು ಖಡ್ಗದಲ್ಲಿ ಖುರ್‌ಆನ್‌ನ ಅಸ್ಸ್ವಪ್ಫ್ ಎಂಬ ಇಪ್ಪತ್ತೊಂದನೇ ಅಧ್ಯಾಯದ ವಾಕ್ಯವೊಂದನ್ನು ಬರೆದಿಡಲಾಗಿದೆ. ಅದರ ಅರ್ಥ ಇಂತಿದೆ “ಅಲ್ಲಾಹನ ಸಹಾಯದಿಂದ ಯಶಸ್ಸು ಸನಿಹದಲ್ಲೇ ಇದೆ.. ಅಲ್ಲಾಹನ ಮೇಲೆ ಭರವಸೆ ಇಡುವವನಿಗೆ ಅಲ್ಲಾಹನೇ ಸಾಕು…”
………………

ಟಿಪ್ಪು ಬೇರೆ ರಾಜರುಗಳಂತಲ್ಲ, ಸ್ವಯಂ ರಣರಂಗಕ್ಕಿಳಿದು ಹೋರಾಡುತ್ತಿದ್ದವರು, ಹೋರಾಡುತ್ತಲೇ ಮಡಿದವರು. ಟಿಪ್ಪು ಇಸ್ಲಾಂ ಧರ್ಮಾನುಯಾಯಿಯಾಗಿದ್ದುದರಿಂದ ಸಹಜವಾಗಿಯೇ ತನ್ನ ಸ್ವಂತ ಬಳಕೆಯ ಖಡ್ಗಗಳಲ್ಲಿ ಈ ರೀತಿ ಇಸ್ಲಾಮಿಗೆ ಸಂಬಂಧಿಸಿದ ನಂಬಿಕೆಗಳನ್ನು ಬರೆಸಿದ್ದರೇ ಹೊರತು ವಸಾಹತುಶಾಹಿ ಪರ ಇತಿಹಾಸಕಾರರು, ಬಲಪಂಥೀಯ ಇತಿಹಾಸಕಾರರು ಸುಳ್ಳು ಸುಳ್ಳೇ ದಾಖಲಿಸಿದ ಯಾವುದೇ ಮತೀಯ ದ್ವೇಷದ ಬರಹಗಳೂ‌ ಟಿಪ್ಪುವಿನ ಖಡ್ಗದಲ್ಲಿ ಕಾಣಸಿಗದು. ಈ ಲೇಖನದ ಮೊದಲ ಭಾಗದಲ್ಲೇ ಬರೆದಂತೆ ಅದರಲ್ಲಿ‌ ಟಿಪ್ಪು ತನ್ನ ಆರಾಧ್ಯನಾದ ಅಲ್ಲಾಹನಲ್ಲಿ‌ ತನ್ನ ನಂಬಿಕೆಯ ಪ್ರಕಾರ ಸಹಾಯ ಯಾಚಿಸುವ ಬರಹಗಳಿವೆಯೇ ಹೊರತು ಅದರಲ್ಲಾಗಲೀ, ಬೇರೆ ಯಾವ ಖಡ್ಗದಲ್ಲಾಗಲೀ ಕಾಫಿರರ (ಮುಸ್ಲಿಮೇತರರ) ಕುರಿತಂತಾಗಲೀ, ತನ್ನ ತಂದೆ ಹೈದರ್ ಕುರಿತಾಗಲೀ ಯಾವುದೇ ಪ್ರಸ್ತಾಪವಿಲ್ಲ.

ವಿರೋಧಿಗಳು ಟಿಪ್ಪುವನ್ನು ಎಷ್ಟು ಹಳಿಯುತ್ತಾರೋ.. ಅಷ್ಟು ಟಿಪ್ಪುವಿನ ನಿಜ ವ್ಯಕ್ತಿತ್ವದ ಕುರಿತ ಅಧ್ಯಯನಗಳು ಆಗುತ್ತಲೇ ಇರುತ್ತವೆ.

ನಾನು ಅನೇಕ ಬಾರಿ ಯೋಚಿಸಿದ್ದಿದೆ, ಇನ್ನು ಟಿಪ್ಪುವಿನ ಜನಪರ ಕೆಲಸಗಳು, ಸುಧಾರಣೆಗಳು ಇತ್ಯಾದಿಗಳ ಕುರಿತಂತೆ ಮಾತ್ರ ಬರೆಯಬೇಕು. ಯಾವುದೇ ಕಾರಣಕ್ಕೂ ಟಿಪ್ಪುವಿನ ಧಾರ್ಮಿಕ ನೀತಿಗಳ ಕುರಿತಂತೆ ಬರೆಯಬಾರದು.. ಆದರೆ ಟಿಪ್ಪು ವಿರೋಧಿ ಹಿತಾಸಕ್ತಿಗಳು ಮತ್ತೆ ಮತ್ತೆ ಟಿಪ್ಪುವಿನ ಕುರಿತಂತೆ ಸುಳ್ಳು ಪ್ರಚಾರ ನಡೆಸುವಾಗ ಮತ್ತೆ ಮತ್ತೆ ಅವರ ಅಪ ಪ್ರಚಾರಗಳಿಗೆ ಉತ್ತರ ನೀಡಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ನನಗೆ ಅನೇಕ ಬಾರಿ ಅನ್ನಿಸುವುದಿದೆ “ಇವರು ದುರುದ್ದೇಶಪೂರ್ವಕವಾಗಿಯೇ ಇಂತಹ ಚರ್ಚೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ” ಎಂದು. ಇದರಿಂದ ನಮ್ಮ ಚರ್ಚೆಗಳು ಅಲ್ಲಿಯೇ ಗಿರಕಿ ಹೊಡೆಯುತ್ತಾ ಟಿಪ್ಪು ಮಾಡಿದ ಅಪಾರ ಸುಧಾರಣೆಗಳು, ಜನಪರ ಕೆಲಸಗಳು, ಟಿಪ್ಪುವಿನ ಕೊಡುಗೆಗಳು ಚರ್ಚೆಗೆ ಬರದೇ ಇರಲಿ ಎನ್ನುವುದೂ ಅವರ ಹಿಡನ್ ಅಜೆಂಡಾ…
*****

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಟಿಪ್ಪು ಲೀಡರ್ ಅಷ್ಟೇ ಸ್ವತಂತ್ರ ಹೋರಾಟಗಾರ ಅಲ್ಲ..
    ತುಂಬಾ ಜನ ಸ್ವತಂತ್ರ ಹೋರಾಟಗಾರರು ಇದಾರೆ ಅವ್ರನ್ನ ಗುರ್ತಿಸಿ. ಬೆಂಕಿ ಹಚ್ಚುವ ಕೆಲಸ ಮಾಡಬೇಡಿ

  2. Shiyab, mataandharige Tipu hesaru pathyavaagolla yekendare Tipu hedigalante tappoppige patra baredu tanna jeeva rakshisikollolla.

    Itihasadallelloo kaana sigada aparoopada, apratima paraakrami Tipu Sultan.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....