Homeಮುಖಪುಟಟಿಪ್ಪು ಸುಲ್ತಾನರ ಖಡ್ಗದಲ್ಲಿ ಬರೆದಿರುವುದೇನು...?

ಟಿಪ್ಪು ಸುಲ್ತಾನರ ಖಡ್ಗದಲ್ಲಿ ಬರೆದಿರುವುದೇನು…?

- Advertisement -
- Advertisement -

ಮೇ 4, 1799ರಂದು ಮೈಸೂರು ಹುಲಿ ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಅಕ್ಷರಶಃ ಹುಲಿಯಂತೆಯೇ ಕಾದಾಡಿ ರಣರಂಗದಲ್ಲಿ ಹುತಾತ್ಮರಾದರು. ಟಿಪ್ಪು ಸುಲ್ತಾನರ ಹುತಾತ್ಮತೆಯೊಂದಿಗೆ ಉಪಖಂಡದಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿಯ ಅಧಿಪತ್ಯ ಸ್ಥಾಪನೆಗಿದ್ದ ಅಡೆ ತಡೆ ಶಾಶ್ವತವಾಗಿ ಇಲ್ಲವಾಯಿತು. ಟಿಪ್ಪು ಹುತಾತ್ಮರಾಗಿ ರಣರಂಗದಲ್ಲಿ ಬಿದ್ಧಾಗ ಅವರ ಕೈಯಲ್ಲಿದ್ದ ಖಡ್ಗವನ್ನು ಬ್ರಿಟಿಷ್ ಸೈನಿಕರು ಎಳೆದುಕೊಂಡು ಹೋದರು. ಅಂತಹದ್ದೇ ಸಾವಿರಾರು ಖಡ್ಗಗಳು ಟಿಪ್ಪು ಸುಲ್ತಾನರ ಆಯುಧ ಮನೆಯಲ್ಲಿತ್ತು. ಅವುಗಳನ್ನೂ ಬ್ರಿಟಿಷರು ದೋಚಿದರು.

ಟಿಪ್ಪು ಸುಲ್ತಾನರು ಹುತಾತ್ಮರಾದಾಗ ಅವರ ಕೈಯಿಂದ ಬ್ರಿಟಿಷ್ ಸೈನಿಕನೋರ್ವ ಎಳೆದು ತೆಗೆದುಕೊಂಡ ಖಡ್ಗವನ್ನು ಲಂಡನ್‌ನ ಮ್ಯೂಸಿಯಂ‌ನಲ್ಲಿಡಲಾಗಿತ್ತು. ಟಿಪ್ಪು ಹುತಾತ್ಮರಾಗಿ ಸುಮಾರು 205 ವರ್ಷಗಳ ಬಳಿಕ ಅಂದರೆ 2004ರಲ್ಲಿ ಉದ್ಯಮಿ ವಿಜಯ್ ಮಲ್ಯ ಹರಾಜಿನಲ್ಲಿ ಒಂದೂವರೆ ಕೋಟಿ ರೂಪಾಯಿ ಪಾವತಿಸಿ ಆ ಖಡ್ಗವನ್ನು ಖರೀದಿಸಿದ್ದರು.
ಆ ಖಡ್ಗದಲ್ಲಿ “ನನ್ನ ಈ ಖಡ್ಗ ಕಾಫಿರರ ನಾಶಕ್ಕಾಗಿ.. ಹೈದರ್ ನನ್ನ ಸಹಾಯಿ… ಅವರು ಕಾಫಿರರ ಕುತಂತ್ರಗಳನ್ನು ನಾಶಪಡಿಸಿದ……” ಹೀಗೆ ಅರಬಿಕ್‌ನಲ್ಲಿ ಬರೆಯಲಾಗಿತ್ತೆಂದು ಟಿಪ್ಪುವಿನ ಕುರಿತಂತೆ ಅಪಪ್ರಚಾರ ಮಾಡುತ್ತಾ ಬರಲಾಗಿದೆ..

ವಾಸ್ತವದಲ್ಲಿ ಆ ಖಡ್ಗದ ಹಿಡಿಕೆಯಲ್ಲಿ ಅರಬಿ ಲಿಪಿಯಲ್ಲಿ ಬರೆದಿರುವುದು “ಯಾ ನಸೀರ್, ಯಾ ಫತಾಹ್, ಯಾ ನಸೀರ್, ಯಾ ಮುಈನ್…” ಎಂಬುದಾಗಿದೆ. ಮತ್ತು ಅದರ ಹಿಡಿಕೆಯ ಎರಡೂ ತುದಿಗಳಲ್ಲಿ ಯಾ ಅಲ್ಲಾಹ್..‌ ಯಾ ಅಲ್ಲಾಹ್… ಎಂದು ಬರೆಯಲಾಗಿದೆ. ಅರಬಿಕ್ ಮತ್ತು ಉರ್ದು ಓದಲು ಬಲ್ಲ ಯಾರು ಬೇಕಾದರೂ ಅಂತರ್ಜಾಲದಲ್ಲಿ ಸಿಗುವ ಆ ಖಡ್ಗದ ಫೋಟೋ ಡೌನ್‌ಲೋಡ್ ಮಾಡಿ ಸುಲಭವಾಗಿ ಓದಬಹುದು..

ಟಿಪ್ಪುವಿನ ಖಡ್ಗದ ಮೇಲಿರುವ ಆ ಅರಬಿಕ್ ಪದಗಳು ಅಲ್ಲಾಹನ ತೊಂಬತ್ತೊಂಬತ್ತು ನಾಮ ವಿಶೇಷಣಗಳಲ್ಲಿ ಕೆಲವಾಗಿದೆ.
ಅವುಗಳ ಅರ್ಥ ಈ ರೀತಿಯಾಗಿದೆ.
ಯಾ ನಸೀರ್ = ಓ ಸಹಾಯ ನೀಡುವವನೇ…
ಯಾ ಫತಾಹ್ = ಓ ಯಶಸ್ಸು ನೀಡುವವನೇ…
ಯಾ ಝಹೀರುಲ್ಲಾಹ್ = ಓ ಬೆಳಕು ತೋರುವವನೇ…
ಓ ಅಲ್ಲಾಹ್…ಓ ಅಲ್ಲಾಹ್..
ಅದರಲ್ಲಿ ಎಲ್ಲೂ ಕಾಫಿರ್ ಎಂಬ ಅರಬಿಕ್‌ ಪದ ಬಳಸಲಾಗಿಲ್ಲ.
ಮತ್ತು ಮುಸ್ಲಿಮರ ವಿಶ್ವಾಸದ ಪ್ರಕಾರ ತಂದೆ- ತಾಯಿಯನ್ನು ಯಾರೂ ದೈವತ್ವಕ್ಕೇರಿಸುವುದಿಲ್ಲ. ಹೈದರ್ ನನಗೆ ಸಹಾಯ ನೀಡುವವನು ಎಂದು ಬರೆಯಲಾಗಿದೆ ಎಂದೂ ಸುಳ್ಳು ಪ್ರಚಾರ ಮಾಡಲಾಗುತ್ತಿದೆ. ವಾಸ್ತವವಾಗಿ ಅದರಲ್ಲೆಲ್ಲೂ ಹೈದರನ ಹೆಸರೇ ಇಲ್ಲ..

ಅಂತರ್ಜಾಲದಲ್ಲಿ ಟಿಪ್ಪುವಿನ ಖಡ್ಗದಲ್ಲಿ ಬರೆದಿಡಲಾಗಿದೆ ಎನ್ನುವ ವಾಕ್ಯಗಳು ಮೈಸೂರು ಗೆಜೆಟಿಯರ್‌ನದ್ದೆಂದೂ ಇದೆ. ನಿಜಕ್ಕೂ ಮೈಸೂರು ಗೆಜೆಟಿಯರ್‌ನಲ್ಲಿ ಅಂತಹ ವಾಕ್ಯಗಳಿವೆಯೋ ನಾನರಿಯೆ.
………………….

ಟಿಪ್ಪು ಸುಲ್ತಾನರ ಇನ್ನೂ ಕೆಲವು ಖಡ್ಗಗಳನ್ನು ವೀಕ್ಷಿಸಿ ಅವುಗಳಲ್ಲಿ ಬರೆದಿಡಲ್ಪಟ್ಟ ಕೆಲವು ಅರಬಿಕ್ ವಾಕ್ಯಗಳನ್ನು ಓದಿದ ಯೂ ಟ್ಯೂಬರ್ ಒಬ್ಬರು ಅವುಗಳ ಕುರಿತಂತೆ ಯೂ ಟ್ಯೂಬ್‌‌ನಲ್ಲಿ ಉರ್ದು ಭಾಷೆಯ ವೀಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದಾರೆ.
ಎರಡು ಬೇರೆ ಬೇರೆ ಖಡ್ಗಗಳಲ್ಲಿ ಖುರ್‌ಆನಿನ ವಾಕ್ಯಗಳನ್ನು ಬರೆದಿಡಲಾಗಿದೆ.
ಒಂದು ಖಡ್ಗದಲ್ಲಿ ಖುರ್‌ಆನಿನ ಎರಡನೇ ಅಧ್ಯಾಯವಾದ ಸೂರಃ ಅಲ್ ಬಕರಾ ಇದರ ನೂರ ಎಂಟನೇ ವಾಕ್ಯದ ಒಂದು ಭಾಗವನ್ನು ಬರೆಯಲಾಗಿದೆ. ಅದರ ಅರ್ಥ “ನಿಶ್ಚಯವಾಗಿಯೂ ಅಲ್ಲಾಹನು ಸರ್ವಶಕ್ತನು…”

ಇನ್ನೊಂದು ಖಡ್ಗದಲ್ಲಿ ಖುರ್‌ಆನ್‌ನ ಅಸ್ಸ್ವಪ್ಫ್ ಎಂಬ ಇಪ್ಪತ್ತೊಂದನೇ ಅಧ್ಯಾಯದ ವಾಕ್ಯವೊಂದನ್ನು ಬರೆದಿಡಲಾಗಿದೆ. ಅದರ ಅರ್ಥ ಇಂತಿದೆ “ಅಲ್ಲಾಹನ ಸಹಾಯದಿಂದ ಯಶಸ್ಸು ಸನಿಹದಲ್ಲೇ ಇದೆ.. ಅಲ್ಲಾಹನ ಮೇಲೆ ಭರವಸೆ ಇಡುವವನಿಗೆ ಅಲ್ಲಾಹನೇ ಸಾಕು…”
………………

ಟಿಪ್ಪು ಬೇರೆ ರಾಜರುಗಳಂತಲ್ಲ, ಸ್ವಯಂ ರಣರಂಗಕ್ಕಿಳಿದು ಹೋರಾಡುತ್ತಿದ್ದವರು, ಹೋರಾಡುತ್ತಲೇ ಮಡಿದವರು. ಟಿಪ್ಪು ಇಸ್ಲಾಂ ಧರ್ಮಾನುಯಾಯಿಯಾಗಿದ್ದುದರಿಂದ ಸಹಜವಾಗಿಯೇ ತನ್ನ ಸ್ವಂತ ಬಳಕೆಯ ಖಡ್ಗಗಳಲ್ಲಿ ಈ ರೀತಿ ಇಸ್ಲಾಮಿಗೆ ಸಂಬಂಧಿಸಿದ ನಂಬಿಕೆಗಳನ್ನು ಬರೆಸಿದ್ದರೇ ಹೊರತು ವಸಾಹತುಶಾಹಿ ಪರ ಇತಿಹಾಸಕಾರರು, ಬಲಪಂಥೀಯ ಇತಿಹಾಸಕಾರರು ಸುಳ್ಳು ಸುಳ್ಳೇ ದಾಖಲಿಸಿದ ಯಾವುದೇ ಮತೀಯ ದ್ವೇಷದ ಬರಹಗಳೂ‌ ಟಿಪ್ಪುವಿನ ಖಡ್ಗದಲ್ಲಿ ಕಾಣಸಿಗದು. ಈ ಲೇಖನದ ಮೊದಲ ಭಾಗದಲ್ಲೇ ಬರೆದಂತೆ ಅದರಲ್ಲಿ‌ ಟಿಪ್ಪು ತನ್ನ ಆರಾಧ್ಯನಾದ ಅಲ್ಲಾಹನಲ್ಲಿ‌ ತನ್ನ ನಂಬಿಕೆಯ ಪ್ರಕಾರ ಸಹಾಯ ಯಾಚಿಸುವ ಬರಹಗಳಿವೆಯೇ ಹೊರತು ಅದರಲ್ಲಾಗಲೀ, ಬೇರೆ ಯಾವ ಖಡ್ಗದಲ್ಲಾಗಲೀ ಕಾಫಿರರ (ಮುಸ್ಲಿಮೇತರರ) ಕುರಿತಂತಾಗಲೀ, ತನ್ನ ತಂದೆ ಹೈದರ್ ಕುರಿತಾಗಲೀ ಯಾವುದೇ ಪ್ರಸ್ತಾಪವಿಲ್ಲ.

ವಿರೋಧಿಗಳು ಟಿಪ್ಪುವನ್ನು ಎಷ್ಟು ಹಳಿಯುತ್ತಾರೋ.. ಅಷ್ಟು ಟಿಪ್ಪುವಿನ ನಿಜ ವ್ಯಕ್ತಿತ್ವದ ಕುರಿತ ಅಧ್ಯಯನಗಳು ಆಗುತ್ತಲೇ ಇರುತ್ತವೆ.

ನಾನು ಅನೇಕ ಬಾರಿ ಯೋಚಿಸಿದ್ದಿದೆ, ಇನ್ನು ಟಿಪ್ಪುವಿನ ಜನಪರ ಕೆಲಸಗಳು, ಸುಧಾರಣೆಗಳು ಇತ್ಯಾದಿಗಳ ಕುರಿತಂತೆ ಮಾತ್ರ ಬರೆಯಬೇಕು. ಯಾವುದೇ ಕಾರಣಕ್ಕೂ ಟಿಪ್ಪುವಿನ ಧಾರ್ಮಿಕ ನೀತಿಗಳ ಕುರಿತಂತೆ ಬರೆಯಬಾರದು.. ಆದರೆ ಟಿಪ್ಪು ವಿರೋಧಿ ಹಿತಾಸಕ್ತಿಗಳು ಮತ್ತೆ ಮತ್ತೆ ಟಿಪ್ಪುವಿನ ಕುರಿತಂತೆ ಸುಳ್ಳು ಪ್ರಚಾರ ನಡೆಸುವಾಗ ಮತ್ತೆ ಮತ್ತೆ ಅವರ ಅಪ ಪ್ರಚಾರಗಳಿಗೆ ಉತ್ತರ ನೀಡಲೇ ಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ನನಗೆ ಅನೇಕ ಬಾರಿ ಅನ್ನಿಸುವುದಿದೆ “ಇವರು ದುರುದ್ದೇಶಪೂರ್ವಕವಾಗಿಯೇ ಇಂತಹ ಚರ್ಚೆಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ” ಎಂದು. ಇದರಿಂದ ನಮ್ಮ ಚರ್ಚೆಗಳು ಅಲ್ಲಿಯೇ ಗಿರಕಿ ಹೊಡೆಯುತ್ತಾ ಟಿಪ್ಪು ಮಾಡಿದ ಅಪಾರ ಸುಧಾರಣೆಗಳು, ಜನಪರ ಕೆಲಸಗಳು, ಟಿಪ್ಪುವಿನ ಕೊಡುಗೆಗಳು ಚರ್ಚೆಗೆ ಬರದೇ ಇರಲಿ ಎನ್ನುವುದೂ ಅವರ ಹಿಡನ್ ಅಜೆಂಡಾ…
*****

  • ಇಸ್ಮತ್ ಪಜೀರ್

(ಮಂಗಳೂರಿನ ಯುವ ಲೇಖಕರಾದ ಇಸ್ಮತ್ ಪಜೀರ್ ಬ್ಯಾರಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾಗಿದ್ದರು. ಆದರೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರ ಮೇಲಿನ ಹಲ್ಲೆ ಖಂಡಿಸಿ ಅದಕ್ಕೆ ರಾಜೀನಾಮೆ ನೀಡಿ ಹೊರಬಂದವರು. ತಮ್ಮದೇ ಆದ ಪಾಲಿಕ್ಲಿನಿಕ್ ನಡೆಸುತ್ತಿದ್ದಾರೆ.)


ಇದನ್ನೂ ಓದಿ: ಟಿಪ್ಪು ಜನ್ಮ ದಿನಾಚರಣೆ: ಮೈಸೂರು ಹುಲಿ ಟಿಪ್ಪುವಿನ ಪುಸ್ತಕ ಪ್ರೇಮ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಟಿಪ್ಪು ಲೀಡರ್ ಅಷ್ಟೇ ಸ್ವತಂತ್ರ ಹೋರಾಟಗಾರ ಅಲ್ಲ..
    ತುಂಬಾ ಜನ ಸ್ವತಂತ್ರ ಹೋರಾಟಗಾರರು ಇದಾರೆ ಅವ್ರನ್ನ ಗುರ್ತಿಸಿ. ಬೆಂಕಿ ಹಚ್ಚುವ ಕೆಲಸ ಮಾಡಬೇಡಿ

  2. Shiyab, mataandharige Tipu hesaru pathyavaagolla yekendare Tipu hedigalante tappoppige patra baredu tanna jeeva rakshisikollolla.

    Itihasadallelloo kaana sigada aparoopada, apratima paraakrami Tipu Sultan.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...