Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...