Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...