Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...