Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...