Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...