Homeಮುಖಪುಟನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

- Advertisement -
- Advertisement -

ಟ್ವೀಟ್ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ಬಂಧಿಸಿರುವ ನಟ ಚೇತನ್ ಪರ ನಟಿ ಮತ್ತು ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನ ದನಿಯೆತ್ತಿದ್ದಾರೆ. ಚೇತನ್ ಮಾಡಿರುವ ಟ್ವೀಟ್‌ನಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಚೇತನ್ ಮಾಡಿದ್ದ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ನಟಿ, “ಚೇತನ್‌ರನ್ನು ಪೊಲೀಸರಿಗೆ ಬಂಧಿಸಲು ಈ ಟ್ವೀಟ್‌ನಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿ ಚೇತನ್‌ ಅವರನ್ನು ಟ್ಯಾಗ್ ಮಾಡಿದ್ದಾರೆ.

ಅದೇ ರೀತಿ ಮತ್ತೊರ್ವ ಚಿತ್ರನಟ, ಕ್ರಿಕೆಟ್ ವೀಕ್ಷಕ ವಿವರಣೆಗಾರರಾದ ಕಿರಣ್ ಶ್ರೀನಿವಾಸ್ ಸಹ “ಚೇತನ್‌ರವರೆ ನಿಮ್ಮ ಜೊತೆ ನಾನು ಹಾಗು ಲಕ್ಷಾಂತರ ಕನ್ನಡಿಗರ ಬೆಂಬಲವಿದೆ” ಎಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ “ಆತ್ಮೀಯ ಗೆಳೆಯ ಚೇತನ್ ಇಂದು ನಿಮ್ಮ ಜನ್ಮದಿನ. ಇಂದು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ನಿಮ್ಮನ್ನು ಪ್ರೀತಿಸುವವರೊಂದಿಗೆ ನೀವಿರಬೇಕಿತ್ತು. ಆದರೆ ಪೊಲೀಸರು ನಿಮ್ಮನ್ನು ಬಂಧಿಸಿದ್ದಾರೆ. ಇದರಿಂದ ನನಗೆ ಹಾಗೂ ಲಕ್ಷಾಂತರ ಅಭಿಮಾನಿಗೆ ಬೇಜಾರು, ದುಃಖ, ನೋವಾಗಿದೆ. ಯಾಕೆ ನಿಮ್ಮ ಮೇಲೆ ಈ ಕ್ರಮ ತೆಗೆದುಕೊಂಡಿದ್ದಾರೆ ಎಂಬ ಅರಿವು ನನಗಿದೆ. ನಿಮ್ಮ ಹೋರಾಟ, ನಿಮ್ಮ ದನಿ, ಸತ್ಯದ ಪರ, ಸಮಾಜದ ಪರ, ಜನರ ಪರ ಹೋರಾಟ ಏನಿದೆ ಅದು ಬೆಳೆದುಬಂದು ರಾಜ್ಯ ಮಾತ್ರವಲ್ಲದೆ ಇಡೀ ದೇಶಕ್ಕೆ ಹಬ್ಬಿದೆ. ಇದರಿಂದ ಭದ್ರಕೋಟೆಯಲ್ಲಿ ಕೂತು ದಂಧೆ ನಡೆಸುತ್ತಿರುವವರ ಗೋಡೆಯಲ್ಲಿ ಬಿರುಕುಗಳು ಉಂಟಾಗಿವೆ. ಅದರಿಂದ ಭಯಗೊಂಡಿದ್ದಾರೆ. ಅದಕ್ಕೆ ಕಾರಣ ನೀವು ಮತ್ತು ನಿಮ್ಮ ಜೊತೆ ನಿಂತಿರುವ ಲಕ್ಷಾಂತರ ಹೋರಾಟಗಾರರು ಮತ್ತು ಅದರಲ್ಲಿ ನಾನು ಒಬ್ಬನಾಗಿದ್ದೇನೆ. ನಿಮ್ಮ ಈ ಜನ್ಮದಿನ ನಿಮ್ಮ ಹೋರಾಟದ ಮುಖ್ಯ ಜನ್ಮದಿನವಾಗಿ ಮೂಡಿಬರಲಿದೆ. ಇಲ್ಲಿಂದ ಮುಂದೆ ಏನೇ ಆಗಲಿ ನಿಮ್ಮ ಹೋರಾಟದೊಂದಿಗೆ ನಾನು ಮತ್ತು ಲಕ್ಷಾಂತರ ಜನರು ನಿಂತೇ ನಿಲ್ಲುತ್ತೇವೆ. ನಿಮಗೆ ಜನ್ಮದಿನದ ಶುಭಾಶಯಗಳು. ಜೈ ಭಾರತ್, ಜೈಭೀಮ್” ಎಂದು ಕಿರಣ್ ಶ್ರೀನಿವಾಸ್ ಹೇಳಿದ್ದಾರೆ.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್‌ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿದೆ. ಅವರ ಜಾಮೀನು ವಿಚಾರನೆಯ ವಾದಗಳು ಮುಗಿದಿದ್ದು ಫೆಬ್ರವರಿ 25 ರಂದು ತೀರ್ಪು ಹೊರಬರಲಿದೆ.


ಇದನ್ನೂ ಓದಿ: ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....