Homeಮುಖಪುಟನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

- Advertisement -
- Advertisement -

ಟ್ವೀಟ್ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ಬಂಧಿಸಿರುವ ನಟ ಚೇತನ್ ಪರ ನಟಿ ಮತ್ತು ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನ ದನಿಯೆತ್ತಿದ್ದಾರೆ. ಚೇತನ್ ಮಾಡಿರುವ ಟ್ವೀಟ್‌ನಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಚೇತನ್ ಮಾಡಿದ್ದ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ನಟಿ, “ಚೇತನ್‌ರನ್ನು ಪೊಲೀಸರಿಗೆ ಬಂಧಿಸಲು ಈ ಟ್ವೀಟ್‌ನಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿ ಚೇತನ್‌ ಅವರನ್ನು ಟ್ಯಾಗ್ ಮಾಡಿದ್ದಾರೆ.

ಅದೇ ರೀತಿ ಮತ್ತೊರ್ವ ಚಿತ್ರನಟ, ಕ್ರಿಕೆಟ್ ವೀಕ್ಷಕ ವಿವರಣೆಗಾರರಾದ ಕಿರಣ್ ಶ್ರೀನಿವಾಸ್ ಸಹ “ಚೇತನ್‌ರವರೆ ನಿಮ್ಮ ಜೊತೆ ನಾನು ಹಾಗು ಲಕ್ಷಾಂತರ ಕನ್ನಡಿಗರ ಬೆಂಬಲವಿದೆ” ಎಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ “ಆತ್ಮೀಯ ಗೆಳೆಯ ಚೇತನ್ ಇಂದು ನಿಮ್ಮ ಜನ್ಮದಿನ. ಇಂದು ನಿಮ್ಮ ಕುಟುಂಬ, ಸ್ನೇಹಿತರು ಮತ್ತು ನಿಮ್ಮನ್ನು ಪ್ರೀತಿಸುವವರೊಂದಿಗೆ ನೀವಿರಬೇಕಿತ್ತು. ಆದರೆ ಪೊಲೀಸರು ನಿಮ್ಮನ್ನು ಬಂಧಿಸಿದ್ದಾರೆ. ಇದರಿಂದ ನನಗೆ ಹಾಗೂ ಲಕ್ಷಾಂತರ ಅಭಿಮಾನಿಗೆ ಬೇಜಾರು, ದುಃಖ, ನೋವಾಗಿದೆ. ಯಾಕೆ ನಿಮ್ಮ ಮೇಲೆ ಈ ಕ್ರಮ ತೆಗೆದುಕೊಂಡಿದ್ದಾರೆ ಎಂಬ ಅರಿವು ನನಗಿದೆ. ನಿಮ್ಮ ಹೋರಾಟ, ನಿಮ್ಮ ದನಿ, ಸತ್ಯದ ಪರ, ಸಮಾಜದ ಪರ, ಜನರ ಪರ ಹೋರಾಟ ಏನಿದೆ ಅದು ಬೆಳೆದುಬಂದು ರಾಜ್ಯ ಮಾತ್ರವಲ್ಲದೆ ಇಡೀ ದೇಶಕ್ಕೆ ಹಬ್ಬಿದೆ. ಇದರಿಂದ ಭದ್ರಕೋಟೆಯಲ್ಲಿ ಕೂತು ದಂಧೆ ನಡೆಸುತ್ತಿರುವವರ ಗೋಡೆಯಲ್ಲಿ ಬಿರುಕುಗಳು ಉಂಟಾಗಿವೆ. ಅದರಿಂದ ಭಯಗೊಂಡಿದ್ದಾರೆ. ಅದಕ್ಕೆ ಕಾರಣ ನೀವು ಮತ್ತು ನಿಮ್ಮ ಜೊತೆ ನಿಂತಿರುವ ಲಕ್ಷಾಂತರ ಹೋರಾಟಗಾರರು ಮತ್ತು ಅದರಲ್ಲಿ ನಾನು ಒಬ್ಬನಾಗಿದ್ದೇನೆ. ನಿಮ್ಮ ಈ ಜನ್ಮದಿನ ನಿಮ್ಮ ಹೋರಾಟದ ಮುಖ್ಯ ಜನ್ಮದಿನವಾಗಿ ಮೂಡಿಬರಲಿದೆ. ಇಲ್ಲಿಂದ ಮುಂದೆ ಏನೇ ಆಗಲಿ ನಿಮ್ಮ ಹೋರಾಟದೊಂದಿಗೆ ನಾನು ಮತ್ತು ಲಕ್ಷಾಂತರ ಜನರು ನಿಂತೇ ನಿಲ್ಲುತ್ತೇವೆ. ನಿಮಗೆ ಜನ್ಮದಿನದ ಶುಭಾಶಯಗಳು. ಜೈ ಭಾರತ್, ಜೈಭೀಮ್” ಎಂದು ಕಿರಣ್ ಶ್ರೀನಿವಾಸ್ ಹೇಳಿದ್ದಾರೆ.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್‌ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿದೆ. ಅವರ ಜಾಮೀನು ವಿಚಾರನೆಯ ವಾದಗಳು ಮುಗಿದಿದ್ದು ಫೆಬ್ರವರಿ 25 ರಂದು ತೀರ್ಪು ಹೊರಬರಲಿದೆ.


ಇದನ್ನೂ ಓದಿ: ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...