Homeಮುಖಪುಟ'ಎಂತಹ ಹುಚ್ಚುತನ..'; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

‘ಎಂತಹ ಹುಚ್ಚುತನ..’; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

- Advertisement -
- Advertisement -

ಭಾರತದಲ್ಲಿ ನಡೆಯುತ್ತಿರುವ “ವೋಟ್ ಚೋರಿ” (ಮತ ಕಳ್ಳತನ) ವಿವಾದದಲ್ಲಿ ತಮ್ಮ ಹಳೆಯ ಫೋಟೋವನ್ನು ಬಳಸಲಾಗಿದೆ ಎಂದು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ರೋಚಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಬ್ರೆಜಿಲಿಯನ್ ಮಾಡೆಲ್ ಸಿಲ್ವಾ, ಭಾರತೀಯ ರಾಜಕೀಯದಲ್ಲಿ ತಮ್ಮ ಹದಿಹರೆಯದ ಫೋಟೋವನ್ನು ಬಳಸಲಾಗುತ್ತಿರುವುದನ್ನು ನೋಡಿ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದರು. “ಗೈಸ್, ಈ ಜನರು ಗಾಸಿಪ್ ಮಾಡುತ್ತಿದ್ದಾರೆ ಎಂದು ನನಗೆ ನಂಬಲು ಸಾಧ್ಯವಿಲ್ಲ. ಅವರು ನನ್ನ ಹಳೆಯ ಫೋಟೋವನ್ನು ಬಳಸುತ್ತಿದ್ದಾರೆ… ಆ ಚಿತ್ರದಲ್ಲಿ ನನಗೆ 18 ಅಥವಾ 20 ವರ್ಷ ವಯಸ್ಸಾಗಿತ್ತು. ಜನರನ್ನು ವಂಚಿಸಲು ನನ್ನನ್ನು ಭಾರತೀಯ ಎಂದು ಚಿತ್ರಿಸುತ್ತಿದ್ದಾರೆ. ಎಂತಹ ಹುಚ್ಚುತನ! ಇದು ಎಂತಹ ಹುಚ್ಚುತನ, ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯ ಪ್ರಕಾರ, ಹರಿಯಾಣದಲ್ಲಿ ಮತದಾರರ ಗುರುತಿನ ಚೀಟಿಗಳಲ್ಲಿ ಸೀಮಾ ಮತ್ತು ಸರಸ್ವತಿ ಮುಂತಾದ ವಿವಿಧ ಹೆಸರುಗಳಲ್ಲಿ ಬಳಸಲಾದ ಲಾರಿಸ್ಸಾ ರೋಚಾ ಸಿಲ್ವಾ ಚಿತ್ರವನ್ನು 22 ಬಾರಿ ತೋರಿಸಲಾಗಿದೆ. “ಕಾಂಗ್ರೆಸ್ ಚುನಾವಣೆಯಲ್ಲಿ 22,000 ಮತಗಳಿಂದ ಸೋತಿದೆ. ಆದರೆ ಈ ಮಹಿಳೆ ಯಾರು? ಅವರು ಹರಿಯಾಣದಲ್ಲಿ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ. ಅವರಿಗೆ ಬಹು ಹೆಸರುಗಳಿವೆ” ಎಂದು ರಾಹುಲ್ ಗಾಂಧಿ ತಮ್ಮ ಸುದ್ದಿಗೋಷ್ಠಿಯಲ್ಲಿ ಸಿಲ್ವಾ ಅವರ ಚಿತ್ರವನ್ನು ಪರದೆಯ ಮೇಲೆ “ಯೇ ಕೌನ್ ಹೈ?” ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಿದರು.

ವೈರಲ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಿಲ್ವಾ, ಭಾರತೀಯ ರಾಜಕೀಯ ವಿಷಯದಲ್ಲಿ ನನ್ನ ಫೋಟೋ ಏಕೆ ಪ್ರಸಾರವಾಗುತ್ತಿದೆ ಎಂದು ತನಗೆ ತಿಳಿದಿಲ್ಲ ಎಂದು ಹೇಳಿದರು. “ನೀವು ಮತದಾನಕ್ಕೆ ಸಂಬಂಧಿಸಿದ ಯಾವುದೋ ವಿಷಯಕ್ಕೆ ನನ್ನ ಚಿತ್ರವನ್ನು ಬಳಸುತ್ತಿದ್ದೀರಿ… ಅದು ಚುನಾವಣೆಯೋ ಇಲ್ಲವೋ ನನಗೆ ತಿಳಿದಿಲ್ಲ. ಭಾರತದಲ್ಲಿ, ಜನರು ಪರಸ್ಪರ ಜಗಳವಾಡಲು ನನ್ನನ್ನು ಭಾರತೀಯನೆಂದು ತೋರಿಸುತ್ತಿದ್ದಾರೆ. ಇದು ಎಷ್ಟು ಹುಚ್ಚುತನ ನೋಡಿ! ನಾವು ಎಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿದ್ದೇನೆ” ಎಂದು ಅವರು ಹೇಳಿದರು.

ಈ ಘಟನೆಯ ಬಗ್ಗೆ ಪತ್ರಕರ್ತರು ತಮ್ಮನ್ನು ಸಂಪರ್ಕಿಸಲು ಪ್ರಾರಂಭಿಸಿದ್ದಾರೆ ಎಂದು ಮಾಡೆಲ್ ಹೇಳಿದರು. “ಒಬ್ಬ ವರದಿಗಾರ ನನ್ನ ಕೆಲಸದ ಸ್ಥಳಕ್ಕೆ ಕರೆ ಮಾಡಿ ಸಂದರ್ಶನ ಕೇಳಿದ್ದ. ನಾನು ಅವರಿಗೆ ನನ್ನ ನಂಬರ್ ನೀಡಬೇಡಿ ಎಂದು ಹೇಳಿದೆ. ಆದರೆ ಅವರು ನನ್ನನ್ನು ಇನ್‌ಸ್ಟಾಗ್ರಾಮ್‌ ಹುಡುಕಿದ್ದಾರೆ. ನಂತರ ಬೇರೆ ನಗರದ ಸ್ನೇಹಿತರೊಬ್ಬರು ನನಗೆ ಚಿತ್ರವನ್ನು ಕಳುಹಿಸಿ, ‘ನೋಡಿ, ನೀವು ಇದನ್ನು ನಂಬುವುದಿಲ್ಲ!’ ಎಂದು ಹೇಳಿದರು” ಎಂದು ಸಿಲ್ವಾ ಬರೆದಿದ್ದಾರೆ.

ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...