Homeಮುಖಪುಟ'ಎಂತಹ ಹುಚ್ಚುತನ..'; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

‘ಎಂತಹ ಹುಚ್ಚುತನ..’; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

- Advertisement -
- Advertisement -

ಭಾರತದಲ್ಲಿ ನಡೆಯುತ್ತಿರುವ “ವೋಟ್ ಚೋರಿ” (ಮತ ಕಳ್ಳತನ) ವಿವಾದದಲ್ಲಿ ತಮ್ಮ ಹಳೆಯ ಫೋಟೋವನ್ನು ಬಳಸಲಾಗಿದೆ ಎಂದು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ರೋಚಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಬ್ರೆಜಿಲಿಯನ್ ಮಾಡೆಲ್ ಸಿಲ್ವಾ, ಭಾರತೀಯ ರಾಜಕೀಯದಲ್ಲಿ ತಮ್ಮ ಹದಿಹರೆಯದ ಫೋಟೋವನ್ನು ಬಳಸಲಾಗುತ್ತಿರುವುದನ್ನು ನೋಡಿ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದರು. “ಗೈಸ್, ಈ ಜನರು ಗಾಸಿಪ್ ಮಾಡುತ್ತಿದ್ದಾರೆ ಎಂದು ನನಗೆ ನಂಬಲು ಸಾಧ್ಯವಿಲ್ಲ. ಅವರು ನನ್ನ ಹಳೆಯ ಫೋಟೋವನ್ನು ಬಳಸುತ್ತಿದ್ದಾರೆ… ಆ ಚಿತ್ರದಲ್ಲಿ ನನಗೆ 18 ಅಥವಾ 20 ವರ್ಷ ವಯಸ್ಸಾಗಿತ್ತು. ಜನರನ್ನು ವಂಚಿಸಲು ನನ್ನನ್ನು ಭಾರತೀಯ ಎಂದು ಚಿತ್ರಿಸುತ್ತಿದ್ದಾರೆ. ಎಂತಹ ಹುಚ್ಚುತನ! ಇದು ಎಂತಹ ಹುಚ್ಚುತನ, ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯ ಪ್ರಕಾರ, ಹರಿಯಾಣದಲ್ಲಿ ಮತದಾರರ ಗುರುತಿನ ಚೀಟಿಗಳಲ್ಲಿ ಸೀಮಾ ಮತ್ತು ಸರಸ್ವತಿ ಮುಂತಾದ ವಿವಿಧ ಹೆಸರುಗಳಲ್ಲಿ ಬಳಸಲಾದ ಲಾರಿಸ್ಸಾ ರೋಚಾ ಸಿಲ್ವಾ ಚಿತ್ರವನ್ನು 22 ಬಾರಿ ತೋರಿಸಲಾಗಿದೆ. “ಕಾಂಗ್ರೆಸ್ ಚುನಾವಣೆಯಲ್ಲಿ 22,000 ಮತಗಳಿಂದ ಸೋತಿದೆ. ಆದರೆ ಈ ಮಹಿಳೆ ಯಾರು? ಅವರು ಹರಿಯಾಣದಲ್ಲಿ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ. ಅವರಿಗೆ ಬಹು ಹೆಸರುಗಳಿವೆ” ಎಂದು ರಾಹುಲ್ ಗಾಂಧಿ ತಮ್ಮ ಸುದ್ದಿಗೋಷ್ಠಿಯಲ್ಲಿ ಸಿಲ್ವಾ ಅವರ ಚಿತ್ರವನ್ನು ಪರದೆಯ ಮೇಲೆ “ಯೇ ಕೌನ್ ಹೈ?” ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಿದರು.

ವೈರಲ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಿಲ್ವಾ, ಭಾರತೀಯ ರಾಜಕೀಯ ವಿಷಯದಲ್ಲಿ ನನ್ನ ಫೋಟೋ ಏಕೆ ಪ್ರಸಾರವಾಗುತ್ತಿದೆ ಎಂದು ತನಗೆ ತಿಳಿದಿಲ್ಲ ಎಂದು ಹೇಳಿದರು. “ನೀವು ಮತದಾನಕ್ಕೆ ಸಂಬಂಧಿಸಿದ ಯಾವುದೋ ವಿಷಯಕ್ಕೆ ನನ್ನ ಚಿತ್ರವನ್ನು ಬಳಸುತ್ತಿದ್ದೀರಿ… ಅದು ಚುನಾವಣೆಯೋ ಇಲ್ಲವೋ ನನಗೆ ತಿಳಿದಿಲ್ಲ. ಭಾರತದಲ್ಲಿ, ಜನರು ಪರಸ್ಪರ ಜಗಳವಾಡಲು ನನ್ನನ್ನು ಭಾರತೀಯನೆಂದು ತೋರಿಸುತ್ತಿದ್ದಾರೆ. ಇದು ಎಷ್ಟು ಹುಚ್ಚುತನ ನೋಡಿ! ನಾವು ಎಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿದ್ದೇನೆ” ಎಂದು ಅವರು ಹೇಳಿದರು.

ಈ ಘಟನೆಯ ಬಗ್ಗೆ ಪತ್ರಕರ್ತರು ತಮ್ಮನ್ನು ಸಂಪರ್ಕಿಸಲು ಪ್ರಾರಂಭಿಸಿದ್ದಾರೆ ಎಂದು ಮಾಡೆಲ್ ಹೇಳಿದರು. “ಒಬ್ಬ ವರದಿಗಾರ ನನ್ನ ಕೆಲಸದ ಸ್ಥಳಕ್ಕೆ ಕರೆ ಮಾಡಿ ಸಂದರ್ಶನ ಕೇಳಿದ್ದ. ನಾನು ಅವರಿಗೆ ನನ್ನ ನಂಬರ್ ನೀಡಬೇಡಿ ಎಂದು ಹೇಳಿದೆ. ಆದರೆ ಅವರು ನನ್ನನ್ನು ಇನ್‌ಸ್ಟಾಗ್ರಾಮ್‌ ಹುಡುಕಿದ್ದಾರೆ. ನಂತರ ಬೇರೆ ನಗರದ ಸ್ನೇಹಿತರೊಬ್ಬರು ನನಗೆ ಚಿತ್ರವನ್ನು ಕಳುಹಿಸಿ, ‘ನೋಡಿ, ನೀವು ಇದನ್ನು ನಂಬುವುದಿಲ್ಲ!’ ಎಂದು ಹೇಳಿದರು” ಎಂದು ಸಿಲ್ವಾ ಬರೆದಿದ್ದಾರೆ.

ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...