Homeಮುಖಪುಟ'ಎಂತಹ ಹುಚ್ಚುತನ..'; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

‘ಎಂತಹ ಹುಚ್ಚುತನ..’; ಮತ ಕಳ್ಳತನ ಪತ್ರಿಕಾಗೋಷ್ಠಿಯಲ್ಲಿ ತನ್ನ ಫೋಟೋ ಕಂಡು ದಿಗ್ಭ್ರಮೆಗೊಂಡ ಬ್ರೆಜಿಲಿಯನ್ ಮಾಡೆಲ್

- Advertisement -
- Advertisement -

ಭಾರತದಲ್ಲಿ ನಡೆಯುತ್ತಿರುವ “ವೋಟ್ ಚೋರಿ” (ಮತ ಕಳ್ಳತನ) ವಿವಾದದಲ್ಲಿ ತಮ್ಮ ಹಳೆಯ ಫೋಟೋವನ್ನು ಬಳಸಲಾಗಿದೆ ಎಂದು ಬ್ರೆಜಿಲಿಯನ್ ಮಾಡೆಲ್ ಲಾರಿಸ್ಸಾ ರೋಚಾ ಸಿಲ್ವಾ ಆಘಾತ ವ್ಯಕ್ತಪಡಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರ ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

ಬ್ರೆಜಿಲಿಯನ್ ಮಾಡೆಲ್ ಸಿಲ್ವಾ, ಭಾರತೀಯ ರಾಜಕೀಯದಲ್ಲಿ ತಮ್ಮ ಹದಿಹರೆಯದ ಫೋಟೋವನ್ನು ಬಳಸಲಾಗುತ್ತಿರುವುದನ್ನು ನೋಡಿ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದರು. “ಗೈಸ್, ಈ ಜನರು ಗಾಸಿಪ್ ಮಾಡುತ್ತಿದ್ದಾರೆ ಎಂದು ನನಗೆ ನಂಬಲು ಸಾಧ್ಯವಿಲ್ಲ. ಅವರು ನನ್ನ ಹಳೆಯ ಫೋಟೋವನ್ನು ಬಳಸುತ್ತಿದ್ದಾರೆ… ಆ ಚಿತ್ರದಲ್ಲಿ ನನಗೆ 18 ಅಥವಾ 20 ವರ್ಷ ವಯಸ್ಸಾಗಿತ್ತು. ಜನರನ್ನು ವಂಚಿಸಲು ನನ್ನನ್ನು ಭಾರತೀಯ ಎಂದು ಚಿತ್ರಿಸುತ್ತಿದ್ದಾರೆ. ಎಂತಹ ಹುಚ್ಚುತನ! ಇದು ಎಂತಹ ಹುಚ್ಚುತನ, ನಾವು ಯಾವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಆಘಾತ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿಯವರ ಹೇಳಿಕೆಯ ಪ್ರಕಾರ, ಹರಿಯಾಣದಲ್ಲಿ ಮತದಾರರ ಗುರುತಿನ ಚೀಟಿಗಳಲ್ಲಿ ಸೀಮಾ ಮತ್ತು ಸರಸ್ವತಿ ಮುಂತಾದ ವಿವಿಧ ಹೆಸರುಗಳಲ್ಲಿ ಬಳಸಲಾದ ಲಾರಿಸ್ಸಾ ರೋಚಾ ಸಿಲ್ವಾ ಚಿತ್ರವನ್ನು 22 ಬಾರಿ ತೋರಿಸಲಾಗಿದೆ. “ಕಾಂಗ್ರೆಸ್ ಚುನಾವಣೆಯಲ್ಲಿ 22,000 ಮತಗಳಿಂದ ಸೋತಿದೆ. ಆದರೆ ಈ ಮಹಿಳೆ ಯಾರು? ಅವರು ಹರಿಯಾಣದಲ್ಲಿ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ. ಅವರಿಗೆ ಬಹು ಹೆಸರುಗಳಿವೆ” ಎಂದು ರಾಹುಲ್ ಗಾಂಧಿ ತಮ್ಮ ಸುದ್ದಿಗೋಷ್ಠಿಯಲ್ಲಿ ಸಿಲ್ವಾ ಅವರ ಚಿತ್ರವನ್ನು ಪರದೆಯ ಮೇಲೆ “ಯೇ ಕೌನ್ ಹೈ?” ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಿದರು.

ವೈರಲ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಸಿಲ್ವಾ, ಭಾರತೀಯ ರಾಜಕೀಯ ವಿಷಯದಲ್ಲಿ ನನ್ನ ಫೋಟೋ ಏಕೆ ಪ್ರಸಾರವಾಗುತ್ತಿದೆ ಎಂದು ತನಗೆ ತಿಳಿದಿಲ್ಲ ಎಂದು ಹೇಳಿದರು. “ನೀವು ಮತದಾನಕ್ಕೆ ಸಂಬಂಧಿಸಿದ ಯಾವುದೋ ವಿಷಯಕ್ಕೆ ನನ್ನ ಚಿತ್ರವನ್ನು ಬಳಸುತ್ತಿದ್ದೀರಿ… ಅದು ಚುನಾವಣೆಯೋ ಇಲ್ಲವೋ ನನಗೆ ತಿಳಿದಿಲ್ಲ. ಭಾರತದಲ್ಲಿ, ಜನರು ಪರಸ್ಪರ ಜಗಳವಾಡಲು ನನ್ನನ್ನು ಭಾರತೀಯನೆಂದು ತೋರಿಸುತ್ತಿದ್ದಾರೆ. ಇದು ಎಷ್ಟು ಹುಚ್ಚುತನ ನೋಡಿ! ನಾವು ಎಂತಹ ಅವ್ಯವಸ್ಥೆಯಲ್ಲಿ ವಾಸಿಸುತ್ತಿದ್ದೇನೆ” ಎಂದು ಅವರು ಹೇಳಿದರು.

ಈ ಘಟನೆಯ ಬಗ್ಗೆ ಪತ್ರಕರ್ತರು ತಮ್ಮನ್ನು ಸಂಪರ್ಕಿಸಲು ಪ್ರಾರಂಭಿಸಿದ್ದಾರೆ ಎಂದು ಮಾಡೆಲ್ ಹೇಳಿದರು. “ಒಬ್ಬ ವರದಿಗಾರ ನನ್ನ ಕೆಲಸದ ಸ್ಥಳಕ್ಕೆ ಕರೆ ಮಾಡಿ ಸಂದರ್ಶನ ಕೇಳಿದ್ದ. ನಾನು ಅವರಿಗೆ ನನ್ನ ನಂಬರ್ ನೀಡಬೇಡಿ ಎಂದು ಹೇಳಿದೆ. ಆದರೆ ಅವರು ನನ್ನನ್ನು ಇನ್‌ಸ್ಟಾಗ್ರಾಮ್‌ ಹುಡುಕಿದ್ದಾರೆ. ನಂತರ ಬೇರೆ ನಗರದ ಸ್ನೇಹಿತರೊಬ್ಬರು ನನಗೆ ಚಿತ್ರವನ್ನು ಕಳುಹಿಸಿ, ‘ನೋಡಿ, ನೀವು ಇದನ್ನು ನಂಬುವುದಿಲ್ಲ!’ ಎಂದು ಹೇಳಿದರು” ಎಂದು ಸಿಲ್ವಾ ಬರೆದಿದ್ದಾರೆ.

ಪಶ್ಚಿಮ ಬಂಗಾಳ ‘ಎಸ್‌ಐಆರ್‌’: ಎರಡು ದಿನಗಳಲ್ಲಿ 1.10 ಕೋಟಿ ಜನರಿಗೆ ಗಣತಿ ನಮೂನೆ ವಿತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೆ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...