Homeಮುಖಪುಟಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರವು ಅದಾನಿ ಗ್ರೂಪ್‌ನೊಂದಿಗೆ ಹೊಂದಿರುವ ಸಂಪರ್ಕದ ಸಂಬಂಧ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲಿ ಬುಧವಾರ ವಾಗ್ದಾಳಿ ನಡೆಸಿದರು.

ಎರಡೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರ ಸಂಪತ್ತು 13 ಪಟ್ಟು ಹೆಚ್ಚಾಗಿದೆ ಎಂದು ದೂರಿದರು. ಇದು ರಾಜ್ಯಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು.

“2014ರಲ್ಲಿ ಪ್ರಧಾನಿ ಮೋದಿಯವರು ನಾ ಖಾವೂಂಗಾ ನಾ ಖಾನೇ ದುಂಗಾ (ನಾನು ತಿನ್ನಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ) ಎಂದು ಹೇಳಿದ್ದರು. ಕೆಲವು ಕೈಗಾರಿಕೋದ್ಯಮಿಗಳನ್ನು ತಿನ್ನಲು ಏಕೆ ಬಿಡುತ್ತಿದ್ದಾರೆ ಎಂದು ಈಗ ನಾನು ಕೇಳಬಯಸುತ್ತೇನೆ” ಎಂದು ಖರ್ಗೆ ಪ್ರಶ್ನಿಸಿದರು.

“ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಕುಟುಕಿದರು. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚೆಯನ್ನು ಆರಂಭಿಸಲು ರಾಜ್ಯಸಭೆಯು ಬುಧವಾರ ‘ಶೂನ್ಯ ವೇಳೆ’ ಮತ್ತು ‘ಪ್ರಶ್ನೋತ್ತರ ಅವಧಿ’ ಎರಡನ್ನೂ ರದ್ದುಗೊಳಿಸಿತು.

ಅದಾನಿ ಸಮೂಹದ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಮಾಡಿರುವ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ಸದನಗಳಲ್ಲಿ ಸದ್ದು ಮಾಡುತ್ತಿದೆ.

ಅದಾನಿ ಗ್ರೂಪ್‌ನೊಂದಿಗೆ ಸಾರ್ವಜನಿಕ ವಲಯದ ಎಲ್‌ಐಸಿ ಮತ್ತು ಎಸ್‌ಬಿಐ ಹಣವನ್ನೂ ಹೂಡಿಕೆ ಮಾಡಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಅದಾನಿ ಗ್ರೂಪ್ ಷೇರುಗಳ ಇತ್ತೀಚಿನ ತೀವ್ರ ಕುಸಿತವು ಸಾಮಾನ್ಯ ಜನರ ಹಣವನ್ನು ಒಳಗೊಂಡಿರುವ ‘ಮೆಗಾ ಹಗರಣ’ ಎಂದು ವಿರೋಧ ಪಕ್ಷಗಳು ಬಣ್ಣಸಿವೆ. ಅದಾನಿ ಹಗರಣ ಸಂಬಂಧ ಯಾವ ಕ್ರಮ ಜರುಗಿಸಲಾಗಿದೆ ಎಂದು ಪ್ರತಿಪಕ್ಷಗಳು ಸರ್ಕಾರವನ್ನು ಪ್ರಶ್ನಿಸುತ್ತಿವೆ.

ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಮಾತನಾಡುತ್ತಾ, “ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು.

ಖರ್ಗೆ ಅವರ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಅವರು (ಪ್ರತಿಪಕ್ಷಗಳು) ಸೂಕ್ಷ್ಮವಾಗಿ ಮತ್ತು ಬಹಿರಂಗವಾಗಿ, ಪ್ರಧಾನಿ ವಿರುದ್ಧ ಪದೇ ಪದೇ ಚುಚ್ಚು ಮಾತುಗಳನ್ನಾಡುತ್ತಿದ್ದಾರೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳನ್ನು ಖಂಡಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, “ಖರ್ಗೆ ಅವರ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಉದ್ದೇಶಪೂರ್ವಕ ಸಂಪತ್ತಿನ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಅದು ಷೇರು ಮಾರುಕಟ್ಟೆ ಲೆಕ್ಕಾಚಾರವಾಗಿದೆ. ಅದರಲ್ಲಿ ಸರ್ಕಾರದ ಪಾತ್ರವಿಲ್ಲ” ಎಂದಿದ್ದಾರೆ ಗೋಯಲ್.

“ಈ ಮೌಲ್ಯಮಾಪನ ಹೇಗಿರುತ್ತದೆ ಎಂಬುದನ್ನು ಮಾಜಿ ಹಣಕಾಸು ಸಚಿವರಿಂದ ಕಲಿಯಬೇಕೆಂದು ನಾನು ಅವರಲ್ಲಿ ಒತ್ತಾಯಿಸುತ್ತೇನೆ” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ಮೋದಿಯವರ ಮೇಲೆ ಕಟುವಾದ ವಾಗ್ದಾಳಿ ನಡೆಸಿದ್ದರು. ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರ ಬೆಳವಣಿಗೆಗೆ ಮೋದಿ ಕಾರಣರು ಎಂದು ದೂರಿದ್ದರು.

ಅದಾನಿಯ ವ್ಯಾಪಾರ ಸಮೂಹಕ್ಕೆ ಅನುಕೂಲವಾಗುವಂತೆ ಹಲವಾರು ನಿಯಮಗಳನ್ನು ಬದಲಾಯಿಸಿದ್ದರಿಂದ ಅದಾನಿಯವರ ಬೆಳವಣಿಗೆಗೆ ಪ್ರಧಾನಿ ಮೋದಿ ಕಾರಣ ಎಂದು ಆರೋಪಿಸಿದ್ದರು.

ವಿಮಾನ ನಿಲ್ದಾಣಗಳ ಸಂಬಂಧ ಅನುಭವವಿಲ್ಲದವರನ್ನು ವಿಮಾನ ನಿಲ್ದಾಣಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬಾರದು ಎಂಬ ನಿಯಮವಿದೆ. ಈ ನಿಯಮವನ್ನು ಭಾರತ ಸರ್ಕಾರ ಬದಲಾಯಿಸಿದೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...