Homeಮುಖಪುಟಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರವು ಅದಾನಿ ಗ್ರೂಪ್‌ನೊಂದಿಗೆ ಹೊಂದಿರುವ ಸಂಪರ್ಕದ ಸಂಬಂಧ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲಿ ಬುಧವಾರ ವಾಗ್ದಾಳಿ ನಡೆಸಿದರು.

ಎರಡೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರ ಸಂಪತ್ತು 13 ಪಟ್ಟು ಹೆಚ್ಚಾಗಿದೆ ಎಂದು ದೂರಿದರು. ಇದು ರಾಜ್ಯಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು.

“2014ರಲ್ಲಿ ಪ್ರಧಾನಿ ಮೋದಿಯವರು ನಾ ಖಾವೂಂಗಾ ನಾ ಖಾನೇ ದುಂಗಾ (ನಾನು ತಿನ್ನಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ) ಎಂದು ಹೇಳಿದ್ದರು. ಕೆಲವು ಕೈಗಾರಿಕೋದ್ಯಮಿಗಳನ್ನು ತಿನ್ನಲು ಏಕೆ ಬಿಡುತ್ತಿದ್ದಾರೆ ಎಂದು ಈಗ ನಾನು ಕೇಳಬಯಸುತ್ತೇನೆ” ಎಂದು ಖರ್ಗೆ ಪ್ರಶ್ನಿಸಿದರು.

“ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಕುಟುಕಿದರು. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚೆಯನ್ನು ಆರಂಭಿಸಲು ರಾಜ್ಯಸಭೆಯು ಬುಧವಾರ ‘ಶೂನ್ಯ ವೇಳೆ’ ಮತ್ತು ‘ಪ್ರಶ್ನೋತ್ತರ ಅವಧಿ’ ಎರಡನ್ನೂ ರದ್ದುಗೊಳಿಸಿತು.

ಅದಾನಿ ಸಮೂಹದ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಮಾಡಿರುವ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ಸದನಗಳಲ್ಲಿ ಸದ್ದು ಮಾಡುತ್ತಿದೆ.

ಅದಾನಿ ಗ್ರೂಪ್‌ನೊಂದಿಗೆ ಸಾರ್ವಜನಿಕ ವಲಯದ ಎಲ್‌ಐಸಿ ಮತ್ತು ಎಸ್‌ಬಿಐ ಹಣವನ್ನೂ ಹೂಡಿಕೆ ಮಾಡಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಅದಾನಿ ಗ್ರೂಪ್ ಷೇರುಗಳ ಇತ್ತೀಚಿನ ತೀವ್ರ ಕುಸಿತವು ಸಾಮಾನ್ಯ ಜನರ ಹಣವನ್ನು ಒಳಗೊಂಡಿರುವ ‘ಮೆಗಾ ಹಗರಣ’ ಎಂದು ವಿರೋಧ ಪಕ್ಷಗಳು ಬಣ್ಣಸಿವೆ. ಅದಾನಿ ಹಗರಣ ಸಂಬಂಧ ಯಾವ ಕ್ರಮ ಜರುಗಿಸಲಾಗಿದೆ ಎಂದು ಪ್ರತಿಪಕ್ಷಗಳು ಸರ್ಕಾರವನ್ನು ಪ್ರಶ್ನಿಸುತ್ತಿವೆ.

ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಮಾತನಾಡುತ್ತಾ, “ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು.

ಖರ್ಗೆ ಅವರ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಅವರು (ಪ್ರತಿಪಕ್ಷಗಳು) ಸೂಕ್ಷ್ಮವಾಗಿ ಮತ್ತು ಬಹಿರಂಗವಾಗಿ, ಪ್ರಧಾನಿ ವಿರುದ್ಧ ಪದೇ ಪದೇ ಚುಚ್ಚು ಮಾತುಗಳನ್ನಾಡುತ್ತಿದ್ದಾರೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳನ್ನು ಖಂಡಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, “ಖರ್ಗೆ ಅವರ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಉದ್ದೇಶಪೂರ್ವಕ ಸಂಪತ್ತಿನ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಅದು ಷೇರು ಮಾರುಕಟ್ಟೆ ಲೆಕ್ಕಾಚಾರವಾಗಿದೆ. ಅದರಲ್ಲಿ ಸರ್ಕಾರದ ಪಾತ್ರವಿಲ್ಲ” ಎಂದಿದ್ದಾರೆ ಗೋಯಲ್.

“ಈ ಮೌಲ್ಯಮಾಪನ ಹೇಗಿರುತ್ತದೆ ಎಂಬುದನ್ನು ಮಾಜಿ ಹಣಕಾಸು ಸಚಿವರಿಂದ ಕಲಿಯಬೇಕೆಂದು ನಾನು ಅವರಲ್ಲಿ ಒತ್ತಾಯಿಸುತ್ತೇನೆ” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ಮೋದಿಯವರ ಮೇಲೆ ಕಟುವಾದ ವಾಗ್ದಾಳಿ ನಡೆಸಿದ್ದರು. ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರ ಬೆಳವಣಿಗೆಗೆ ಮೋದಿ ಕಾರಣರು ಎಂದು ದೂರಿದ್ದರು.

ಅದಾನಿಯ ವ್ಯಾಪಾರ ಸಮೂಹಕ್ಕೆ ಅನುಕೂಲವಾಗುವಂತೆ ಹಲವಾರು ನಿಯಮಗಳನ್ನು ಬದಲಾಯಿಸಿದ್ದರಿಂದ ಅದಾನಿಯವರ ಬೆಳವಣಿಗೆಗೆ ಪ್ರಧಾನಿ ಮೋದಿ ಕಾರಣ ಎಂದು ಆರೋಪಿಸಿದ್ದರು.

ವಿಮಾನ ನಿಲ್ದಾಣಗಳ ಸಂಬಂಧ ಅನುಭವವಿಲ್ಲದವರನ್ನು ವಿಮಾನ ನಿಲ್ದಾಣಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬಾರದು ಎಂಬ ನಿಯಮವಿದೆ. ಈ ನಿಯಮವನ್ನು ಭಾರತ ಸರ್ಕಾರ ಬದಲಾಯಿಸಿದೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...