Homeಮುಖಪುಟಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರವು ಅದಾನಿ ಗ್ರೂಪ್‌ನೊಂದಿಗೆ ಹೊಂದಿರುವ ಸಂಪರ್ಕದ ಸಂಬಂಧ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲಿ ಬುಧವಾರ ವಾಗ್ದಾಳಿ ನಡೆಸಿದರು.

ಎರಡೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರ ಸಂಪತ್ತು 13 ಪಟ್ಟು ಹೆಚ್ಚಾಗಿದೆ ಎಂದು ದೂರಿದರು. ಇದು ರಾಜ್ಯಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು.

“2014ರಲ್ಲಿ ಪ್ರಧಾನಿ ಮೋದಿಯವರು ನಾ ಖಾವೂಂಗಾ ನಾ ಖಾನೇ ದುಂಗಾ (ನಾನು ತಿನ್ನಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ) ಎಂದು ಹೇಳಿದ್ದರು. ಕೆಲವು ಕೈಗಾರಿಕೋದ್ಯಮಿಗಳನ್ನು ತಿನ್ನಲು ಏಕೆ ಬಿಡುತ್ತಿದ್ದಾರೆ ಎಂದು ಈಗ ನಾನು ಕೇಳಬಯಸುತ್ತೇನೆ” ಎಂದು ಖರ್ಗೆ ಪ್ರಶ್ನಿಸಿದರು.

“ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಕುಟುಕಿದರು. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚೆಯನ್ನು ಆರಂಭಿಸಲು ರಾಜ್ಯಸಭೆಯು ಬುಧವಾರ ‘ಶೂನ್ಯ ವೇಳೆ’ ಮತ್ತು ‘ಪ್ರಶ್ನೋತ್ತರ ಅವಧಿ’ ಎರಡನ್ನೂ ರದ್ದುಗೊಳಿಸಿತು.

ಅದಾನಿ ಸಮೂಹದ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಮಾಡಿರುವ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ಸದನಗಳಲ್ಲಿ ಸದ್ದು ಮಾಡುತ್ತಿದೆ.

ಅದಾನಿ ಗ್ರೂಪ್‌ನೊಂದಿಗೆ ಸಾರ್ವಜನಿಕ ವಲಯದ ಎಲ್‌ಐಸಿ ಮತ್ತು ಎಸ್‌ಬಿಐ ಹಣವನ್ನೂ ಹೂಡಿಕೆ ಮಾಡಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಅದಾನಿ ಗ್ರೂಪ್ ಷೇರುಗಳ ಇತ್ತೀಚಿನ ತೀವ್ರ ಕುಸಿತವು ಸಾಮಾನ್ಯ ಜನರ ಹಣವನ್ನು ಒಳಗೊಂಡಿರುವ ‘ಮೆಗಾ ಹಗರಣ’ ಎಂದು ವಿರೋಧ ಪಕ್ಷಗಳು ಬಣ್ಣಸಿವೆ. ಅದಾನಿ ಹಗರಣ ಸಂಬಂಧ ಯಾವ ಕ್ರಮ ಜರುಗಿಸಲಾಗಿದೆ ಎಂದು ಪ್ರತಿಪಕ್ಷಗಳು ಸರ್ಕಾರವನ್ನು ಪ್ರಶ್ನಿಸುತ್ತಿವೆ.

ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಮಾತನಾಡುತ್ತಾ, “ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು.

ಖರ್ಗೆ ಅವರ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಅವರು (ಪ್ರತಿಪಕ್ಷಗಳು) ಸೂಕ್ಷ್ಮವಾಗಿ ಮತ್ತು ಬಹಿರಂಗವಾಗಿ, ಪ್ರಧಾನಿ ವಿರುದ್ಧ ಪದೇ ಪದೇ ಚುಚ್ಚು ಮಾತುಗಳನ್ನಾಡುತ್ತಿದ್ದಾರೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳನ್ನು ಖಂಡಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, “ಖರ್ಗೆ ಅವರ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಉದ್ದೇಶಪೂರ್ವಕ ಸಂಪತ್ತಿನ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಅದು ಷೇರು ಮಾರುಕಟ್ಟೆ ಲೆಕ್ಕಾಚಾರವಾಗಿದೆ. ಅದರಲ್ಲಿ ಸರ್ಕಾರದ ಪಾತ್ರವಿಲ್ಲ” ಎಂದಿದ್ದಾರೆ ಗೋಯಲ್.

“ಈ ಮೌಲ್ಯಮಾಪನ ಹೇಗಿರುತ್ತದೆ ಎಂಬುದನ್ನು ಮಾಜಿ ಹಣಕಾಸು ಸಚಿವರಿಂದ ಕಲಿಯಬೇಕೆಂದು ನಾನು ಅವರಲ್ಲಿ ಒತ್ತಾಯಿಸುತ್ತೇನೆ” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ಮೋದಿಯವರ ಮೇಲೆ ಕಟುವಾದ ವಾಗ್ದಾಳಿ ನಡೆಸಿದ್ದರು. ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರ ಬೆಳವಣಿಗೆಗೆ ಮೋದಿ ಕಾರಣರು ಎಂದು ದೂರಿದ್ದರು.

ಅದಾನಿಯ ವ್ಯಾಪಾರ ಸಮೂಹಕ್ಕೆ ಅನುಕೂಲವಾಗುವಂತೆ ಹಲವಾರು ನಿಯಮಗಳನ್ನು ಬದಲಾಯಿಸಿದ್ದರಿಂದ ಅದಾನಿಯವರ ಬೆಳವಣಿಗೆಗೆ ಪ್ರಧಾನಿ ಮೋದಿ ಕಾರಣ ಎಂದು ಆರೋಪಿಸಿದ್ದರು.

ವಿಮಾನ ನಿಲ್ದಾಣಗಳ ಸಂಬಂಧ ಅನುಭವವಿಲ್ಲದವರನ್ನು ವಿಮಾನ ನಿಲ್ದಾಣಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬಾರದು ಎಂಬ ನಿಯಮವಿದೆ. ಈ ನಿಯಮವನ್ನು ಭಾರತ ಸರ್ಕಾರ ಬದಲಾಯಿಸಿದೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...