Homeಮುಖಪುಟನಾವು ಯಾವುದನ್ನು ಮಾಡಬಾರದು? ಯೋಗೇಂದ್ರ ಯಾದವ್

ನಾವು ಯಾವುದನ್ನು ಮಾಡಬಾರದು? ಯೋಗೇಂದ್ರ ಯಾದವ್

- Advertisement -
- Advertisement -

ಹರಿಯಾಣ ರಾಜ್ಯದ ಯೋಗೇಂದ್ರ ಯಾದವ್ ಸಮಾಜವಾದಿ ಚಳವಳಿಯಲ್ಲಿ ಸಕ್ರಿಯವಾಗಿರುತ್ತಲೇ, ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ, ಅವರ ರಾಜಕೀಯ ಶಾಸ್ತ್ರದ ಪರಿಣಿತಿ ಅವರನ್ನು ದೆಹಲಿಗೆ, ಅಲ್ಲಿನ ಸಿಎಸ್‍ಡಿಎಸ್, ಟಿವಿ ಚರ್ಚೆ ಮತ್ತು ಅಂತಿಮವಾಗಿ ನೇರ ರಾಜಕಾರಣಕ್ಕೇ ಎಳೆದು ತಂದಿತು. ರೈತರ ಸಂಕಷ್ಟದ ನಿವಾರಣೆಗೆ ದೇಶಾದ್ಯಂತ ಓಡಾಡಿ ಸಂಘಟಿಸಿದ ಬೃಹತ್ ಹೋರಾಟದ ರೂವಾರಿ ಅವರು. ಇದೀಗ ಸ್ವರಾಜ್ ಇಂಡಿಯಾ ಪಕ್ಷದ ರಾಷ್ಟ್ರಾಧ್ಯಕ್ಷರು.

ಭಾರತವೆಂಬ ಪರಿಕಲ್ಪನೆಯೇ ಹಿಂದೆಂದೂ ಕಾಣದಂತಹ ಸವಾಲನ್ನು ಎದುರಿಸುತ್ತಿದೆ. 2019ರ ಫಲಿತಾಂಶದ ನಂತರದಲ್ಲಿ ಭಾರತದ ಗಣತಂತ್ರವನ್ನು ಕೆಡವುವುದ ತಪ್ಪಿಸುವುದೇ ನಮ್ಮ ಕಾಲದ ಅತ್ಯಂತ ಜರೂರಿಯಾದ ಕಾರ್ಯವಾಗಿದೆ. ಇದು ನಮ್ಮ ಯುಗಧರ್ಮ. ಈ ತನಕ ಈ ಸವಾಲನ್ನು ಎದುರಿಸುತ್ತಿರುವ ರೀತಿಯಲ್ಲಿ ಒಂದೋ ಬೌದ್ಧಿಕ ಆಲಸ್ಯ, ರಾಜಕೀಯ ಪಕ್ಷಪಾತ ಅಥವಾ ಕೇವಲ ಮೋದಿ ವಿರೋಧದ ಗೀಳುಗಳು ಎದ್ದು ಕಾಣುತ್ತಿವೆ.

ಮೋದಿ ಸರಕಾರಕ್ಕೆ ಎದುರಾಗಿರುವ ವಿರೋಧದ ದೊಡ್ಡ ಸಮಸ್ಯೆಯೆಂದರೆ, ಈ ವಿರೋಧಿಗಳಲ್ಲಿ ಹೊಸ ಆಡಳಿತವು ಯಾವ ಮಟ್ಟಿಗೆ ಸವಾಲೊಡ್ಡಿದೆ ಎಂಬುದನ್ನು ಅರ್ಥಮಾಡಿಕೊಳ್ಳುವ ಸಾಮಥ್ರ್ಯವೇ ಇಲ್ಲ. ಈ ಪರಿವಾರದ ಆಳವಾದ ಬೇರುಗಳನ್ನು ಗುರುತಿಸದೆ, ತಕ್ಷಣದ ಪರಿಹಾರಗಳನ್ನು ಹುಡುಕುವುದರಾಚೆ ತಲೆ ಕೆಡಿಸಿಕೊಳ್ಳದಿರುವ ಸಮಸ್ಯೆ ಗಾಢವಾಗಿದೆ. ಇದುವರೆಗೆ, ಮೋದಿ ಆಡಳಿತಕ್ಕೆ ಬಂದಿರುವ ಪ್ರತಿಕ್ರಿಯೆಗಳು ಮುಂಚೆಯೇ ಊಹಿಸಬಹುದಾದಂಥವು ಮಾತ್ರವೇ ಆಗಿದೆ: ಮೋದಿ ಗುಳ್ಳೆ ತನ್ನಂತೆ ತಾನೇ ಒಡೆದು ಹೋಗಲಿ ಎಂದು ಬಯಸಿ ಕಾಯುವುದು; ಮೋದಿಯನ್ನು ವಿರೋಧಿಸುವುದಕ್ಕಾಗಿ ವಿರೋಧ ಎಂದು ತೋರುವಂತೆ ಪ್ರತಿಕ್ರಿಯಿಸುವುದು; ಅವರು ಯಾವುದರಲ್ಲಿ ಪ್ರಬಲರೋ ಅದೇರೀತಿಯಲ್ಲಿ ಎದುರಿಸುವ ಪ್ರಯತ್ನ; ಜನರ ಕಣ್ಣಲ್ಲಿ ಅಮಾನ್ಯರಾಗಿರುವ ಬಿಜೆಪಿ ವಿರೋಧಿ ಪಕ್ಷಗಳ ಮಹಾಕೂಟ ರಚಿಸುವುದು. ಇವ್ಯಾವುವೂ ಯಶಸ್ವಿಯಾಗುವ ಸಾಧ್ಯತೆಗಳಿಲ್ಲ. ಬಿಜೆಪಿ ವಿರೋಧಿ ಪಕ್ಷಗಳ ಮರ್ಯಾದೆ ಎಷ್ಟು ಹೋಗಿದೆ ಎಂದರೆ, ಈ ತನಕ ಇವರ ಯಾವುದೇ ಮೈತ್ರಿ ಯಶಸ್ವಿಯಾಗಿಲ್ಲ; ಇನ್ನೆಂದಿಗೂ ಯಶಸ್ವಿಯಾಗುವ ಸಾಧ್ಯತೆ ಇಲ್ಲ.

ನರೇಂದ್ರ ಮೋದಿ ಕುರಿತಾದ ಗೀಳಿನಲ್ಲಿ, ಆತನ ಟೀಕಾಕಾರರು, ಆತನನ್ನು ಇನ್ನೂ ದೊಡ್ಡವನನ್ನಾಗಿ ಮಾಡುತ್ತಾರೆ. ಸಕಾರಾತ್ಮಕವಾದ ಏನೇ ಕಂಡರೂ, ಅದರ ಹಿರಿಮೆಯನ್ನು ತನಗೇ ಆರೋಪಿಸಿಕೊಳ್ಳುವ ಮೋದಿಯನ್ನು ವಿರೋಧಿಸುವ ಭರದಲ್ಲಿ ಇವರೇನು ಮಾಡುತ್ತಿದ್ದಾರೆ ಗೊತ್ತೇ? ಕಂಡ ಸಮಸ್ಯೆಗಳಿಗೆಲ್ಲಾ ಮೋದಿಯೇ ಕಾರಣ ಎಂದು ಗೂಬೆ ಕೂರಿಸುತ್ತಾರೆ. ದೇಶದ ಯಾವುದೇ ಮೂಲೆಯಲ್ಲಿ ನಡೆಯುವ ಗುಂಪು ಹತ್ಯೆ ಇರಲಿ, ಕೃಷಿ ನೀತಿಯ ವೈಫಲ್ಯ ಇರಲಿ, ಯಾವುದೇ ಸಮತೋಲನ, ಲೆಕ್ಕಾಚಾರ ಇಲ್ಲದ ಬಜೆಟ್ ಇರಲಿ- ಪ್ರತಿಯೊಂದನ್ನೂ ಪ್ರಧಾನಮಂತ್ರಿಯ ಮೇಲೆ ಹೇರಲಾಗುತ್ತಿದೆ. ಮೋದಿಗೆ ಆತನ ಭಕ್ತರು ಕೊಡುವಷ್ಟೇ ಪ್ರಚಾರವನ್ನು ಆತನ ಟೀಕಾಕಾರರು ಕೊಡುತ್ತಿದ್ದಾರೆ.

ಎರಡನೆಯದಾಗಿ, ಮೋದಿ ವಿರೋಧಿಗಳು ತಕ್ಷಣದ ಪ್ರತಿಕ್ರಿಯೆ (knee-jerk ರಿಯಾಕ್ಷನ್) ನೀಡುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಯಾವುದೇ ನೀತಿ ಅಥವಾ ಧೋರಣೆಯು ಅವರ ಸರ್ಕಾರಕ್ಕೇ ಸಂಬಂಧಿಸಿದ್ದಾದ್ದರಿಂದ ನಾವು ಅದನ್ನು ವಿರೋಧಿಸಲೇಬೇಕು. ಆದರೆ, ಈಗ ಅವರ ಸರ್ಕಾರದ ನೀತಿಗಳ ವಿರುದ್ಧ ಬರುತ್ತಿರುವ ವಿಮರ್ಶೆಯು ಆ ನೀತಿಗಳ ವಿರೋಧಕ್ಕಿಂತ ಮೋದಿ ಸರ್ಕಾರದ ಅಡಿಯಲ್ಲಿ ಈ ನೀತಿಗಳು ಬಂದಿವೆ ಎನ್ನುವ ಕಾರಣಕ್ಕೇ ಬರುತ್ತಿದೆ ಎಂದು ನನಗನ್ನಿಸುತ್ತದೆ. ಅಂದರೆ, ಮೋದಿ ಏನೋ ಒಂದನ್ನು ಮಾಡಿದರೆ ನಾವು ವಿಮರ್ಶೆ ಮಾಡುತ್ತೇವೆ. ಒಂದು ವೇಳೆ ಅದನ್ನು ಮಾಡದಿದ್ದರೆ ಇನ್ನೂ ತೀವ್ರವಾಗಿ ವಿಮರ್ಶೆ ಮಾಡುತ್ತೇವೆ. ಇಂತಹ ವಿರೋಧದಿಂದ ಆಗುವ ಸಮಸ್ಯೆಯೇನೆಂದರೆ, ಈ ವಿರೋಧವನ್ನು ಜನಸಾಮಾನ್ಯರು ಒಪ್ಪುವುದಿಲ್ಲ. ಇದು ವಿರೋಧದ ಸಲುವಾಗಿ ವಿರೋಧ ಎಂದು ಸಹಜವಾಗಿಯೇ ಭಾವಿಸುತ್ತಾರೆ.

ಮೂರನೆಯ ಮತ್ತು ಮುಖ್ಯವಾದ ಸಂಗತಿಯೆಂದರೆ, ಮೋದಿ ವಿರೋಧಿಗಳು ನಿರಾಕರಣೆಯ ಭಾವದಲ್ಲಿ ಬದುಕುತ್ತಾರೆ. ಅವರು ಮೋದಿ ಅತ್ಯಂತ ಜನಪ್ರಿಯರು ಎಂಬುದನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಾರೆ ಮತ್ತು ಹಾಗಾಗಿ ಅದರ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳಲು ವಿಫಲರಾಗುತ್ತಾರೆ. 2019ರ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಮುಂಗಾಣುವುದರಲ್ಲಿನ ವೈಫಲ್ಯವು ಅದಕ್ಕೆ ದೊಡ್ಡ ಉದಾಹರಣೆ. 2018ರ ಉತ್ತರಾರ್ಧದಲ್ಲಿ ಮೋದಿಯ ಜನಪ್ರಿಯತೆ ಕುಗ್ಗಿದ್ದೇನೋ ನಿಜ. ಆದರೆ, ಪುಲ್ವಾಮಾ ಮತ್ತು ಬಾಲಾಕೋಟ್ ನಂತರ ಎಲ್ಲಾ ವಿರೋಧಿ ನಾಯಕರ ಒಟ್ಟು ಜನಪ್ರಿಯತೆಗಿಂತ ಎಷ್ಟೋ ಪಟ್ಟು ಮೋದಿಯ ಜನಪ್ರಿಯತೆ ಹೆಚ್ಚಾಗಿತ್ತು. ಆ ನಂತರ ಚುನಾವಣೆಯಲ್ಲಿ ಸ್ಪರ್ಧೆ ಎಂದೇ ಇರಲಿಲ್ಲ. ಆದರೆ, ಮೋದಿ ವಿರೋಧಿಗಳು ಈ ವಾಸ್ತವಕ್ಕೆ ಹತ್ತಿರವಿರಲಿಲ್ಲ. ಚುನಾವಣಾ ಫಲಿತಾಂಶದ ನಂತರವೂ ಅವರು ನಿರಾಕರಣೆಯಲ್ಲೇ ಇದ್ದಾರೆ. ಬಿಜೆಪಿಯು ಗೆದ್ದಿದೆ ಎಂಬುದನ್ನು ಒಪ್ಪಿಕೊಳ್ಳದೇ, ಜನರು ಮೋದಿಗೆ ಮತ್ತೊಂದು ಅವಕಾಶ ಕೊಡಲು ಬಯಸಿದ್ದಾರೆ ಎನ್ನುವುದಕ್ಕಿಂತ ಇವಿಎಂ ತಿರುಚಿದ್ದರಿಂದಲೇ ಗೆದ್ದಿರುವುದು ಎಂದು ಅವರು ನಂಬುತ್ತಾರೆ.

ಮೋದಿಯ ಜನಪ್ರಿಯತೆ ವಾಸ್ತವ ಎಂಬುದನ್ನು ಒಪ್ಪಿಕೊಳ್ಳುವುಲ್ಲಿನ ಈ ಪ್ರಮಾಣದ ವೈಫಲ್ಯವು ಅದಕ್ಕಿರುವ ಕಾರಣಗಳನ್ನು ಅರ್ಥಮಾಡಿಕೊಳ್ಳುವುದಕ್ಕೆ ಕಾರಣವಾಗುತ್ತದೆ. ಜನಸಾಮಾನ್ಯ ಮತದಾರರು ಒಳ್ಳೆಯ ಕಾರಣಗಳಿಂದಲೇ ಅವರಿಗೆ ಮತ ಹಾಕಿರಬಹುದೆಂಬುದನ್ನು ಒಪ್ಪಿಕೊಳ್ಳಲು ಇವರಿಗೆ ಸಾಧ್ಯವೇ ಇಲ್ಲ. ಅಮೆರಿಕಾದ ಉದಾರವಾದಿಗಳು ಟ್ರಂಪ್‍ಗೆ ಜನರು ಮತ ಹಾಕುವುದನ್ನು ಅರ್ಥ ಮಾಡಿಕೊಳ್ಳುವುದು ಸಾಧ್ಯವೇ ಇಲ್ಲ ಎಂದು ಬಗೆದಿರುವುದು ಹೇಗೋ, ಇಲ್ಲಿಯೂ ಸಾಮಾನ್ಯ ಭಾರತೀಯ ಮತದಾರರ ಇಂಗಿತವನ್ನು ಅರ್ಥೈಸಲೂ ಇಂಥವರಿಗೆ ಆಗುತ್ತಿಲ್ಲ. ಮೋದಿ ವಿರೋಧಿಗಳು ಸಮಾಜದ ಇತರರಿಂದ ಪ್ರತ್ಯೇಕಿಸಲ್ಪಟ್ಟು ಚಿಕ್ಕದಾದ ಮತ್ತು ಚಿಕ್ಕದಾಗುತ್ತಿರುವ ವರ್ತುಲದಲ್ಲೇ ಇರುತ್ತಾರೆ. ಇದರ ಫಲಿತವೆಂದರೆ ಅವಿಶ್ವಾಸ, ಆತಂಕ, ಕೋಪ ಮತ್ತು ನಿಷ್ಕ್ರಿಯತೆ. ರಾಜಕೀಯ ಪಕ್ಷವಾತಕ್ಕೆ ಇದು ದಾರಿ ಮಾಡಿಕೊಡುತ್ತದೆ.

ನಾವು ಹೊಸದಾಗಿಯೇ ಆರಂಭಿಸಬೇಕು. ನಾವು ಹೊಸ ರಾಜಕೀಯ ಯುಗವನ್ನು ಪ್ರವೇಶಿಸಿದ್ದೇವೆನ್ನುವುದನ್ನು ಒಪ್ಪಿಕೊಳ್ಳಬೇಕು. ನಾವು ಗುರುತಿಸಲಾಗದಷ್ಟು ಪ್ರಮಾಣಕ್ಕೆ ಜನರ ಆದ್ಯತೆಗಳು, ಅಭಿರುಚಿ ಮತ್ತು ಮಾನದಂಡಗಳು ಬದಲಾಗಿವೆ ಎಂಬುದನ್ನು ಗುರುತಿಸಬೇಕು. ನಮ್ಮ ಹಳೆಯ ಪರಿಭಾಷೆಗಳು ಹೊಸ ಪೀಳಿಗೆಯೊಂದಿಗೆ ಕೆಲಸ ಮಾಡುವುದಿಲ್ಲ ಎಂಬುದನ್ನು ಗಮನಿಸಿದರೆ, ನಮ್ಮೆಲ್ಲಾ ತಂತ್ರಗಳು ಆ ಪೀಳಿಗೆಯ ಮುಂದೆ ಬಕ್ಕಾಬೋರಲು ಮಲಗುತ್ತಿರುವುದು ಗೊತ್ತಾಗುತ್ತದೆ. ಈ ಹೊಸ ಪೀಳಿಗೆ ಅಸ್ತಿತ್ವದಲ್ಲಿರುವುದು ವಾಸ್ತವ ಮತ್ತು ನಾವು ಅದನ್ನು ಬಿಟ್ಟು ಬೇರೆಯವರನ್ನು ಆಯ್ಕೆ ಮಾಡಿಕೊಳ್ಳಲಾಗದು. ಹಾಗಾಗಿ ಉಳಿದಿರುವುದು ಒಂದೇ ದಾರಿ. ಅಪಾಯದ ಆಳ ಮತ್ತು ಅದೊಡ್ಡುತ್ತಿರುವ ಸವಾಲನ್ನು ಸರಿಯಾಗಿ ಅಂದಾಜಿಸಿ, ದೀರ್ಘಕಾಲದ ಮುನ್ನೋಟದೊಂದಿಗೆ ಅಲ್ಪಕಾಲೀನ ಮತ್ತು ಮಧ್ಯಕಾಲೀನ ವ್ಯೂಹತಂತ್ರವನ್ನೊಳಗೊಂಡ ಮಾರ್ಗನಕ್ಷೆಯನ್ನು ತಯಾರಿಸುವುದು. ವಿನೂತನ ಉಪಾಯಗಳು ಮತ್ತು ಸ್ಮಾರ್ಟ್ ಆದ ಸಂವಹನದೊಂದಿಗೆ ನಡೆಸಬೇಕಿರುವ ಸಾಂಸ್ಕೃತಿಕ ಸಂಗ್ರಾಮವದು ಎಂದು ಕಡೆಯದಾಗಿ ಹೇಳಬಯಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...