Homeಮುಖಪುಟತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

ತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

1975ರಲ್ಲಿ ದೇಶದಲ್ಲಿ ಇಂದಿರಾ ಗಾಂಧಿಯವರು ಹೇರಿದ್ದ ಕರಾಳ ತುರ್ತುಪರಿಸ್ಥಿತಿಗೆ ಇಂದಿಗೆ 45 ವರ್ಷ ತುಂಬಿದೆ. ತುರ್ತು ಪರಿಸ್ಥಿತಿಯ ದಿನಗಳನ್ನು, ಅಂದಿಗೂ ಇಂದಿಗೂ ಆದ ಬದಲಾವಣೆಗಳನ್ನು ಮೆಲುಕು ಹಾಕಿದ್ದಾರೆ ಹಿರಿಯ ಹೋರಾಟಗಾರ ಹಿರೇಮಠ್‌ರವರು.

- Advertisement -
- Advertisement -

ನಾನು 11 ವರ್ಷ ಅಮೇರಿಕಾದಲ್ಲಿ ಇದ್ದೆ. ಬಡಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತುವ ಇರಾದೆಯಿಂದ ಕೆಲಸ ಬಿಟ್ಟೆ. ನಮ್ಮ ಸಮಾನ ಮನಸ್ಕ ಗೆಳೆಯರೊಂದಿಗೆ ಸೇರಿ 1974 ಜನವರಿ 1 ರಂದು ಇಂಡಿಯಾ ಡೆವಲಪ್‍ಮೆಂಟ್ ಎಂಬ ಸಂಸ್ಥೆಯೊಂದನ್ನು ಮಾಡಿದೆವು. ಯಾವುದೇ ಒಂದು ಮಾನವೀಯ ಅಭಿವೃದ್ಧಿಯನ್ನು ಮಾಡಬೇಕಾದಾರೆ ಒಂದು ಲಾರ್ಜರ್ ಡೆಮಾಕ್ರಿಟಿಕ್ ಫ್ರೇಮ್‍ವರ್ಕ್ ಇರುವ ಪ್ರಜಾಪ್ರಭುತ್ವ ಆಶಯಗಳು ಮತ್ತು ಮೌಲ್ಯಗಳಿಗೆ ಗೌರವ ಇರುವಂತಹ ವಾತಾವರಣ ಇರುವುದು ಬಹಳ ಮುಖ್ಯವಾಗಿದೆ.

1971ರ ಬಾಂಗ್ಲಾದೇಶ ಲಿಬರೇಶನ್‍ನಲ್ಲಿ ಭಾರತ ಮಹತ್ವದ ಪಾತ್ರ ನಿರ್ವಹಿಸಿತು. ಅದರ ನಂತರ ಬರಬರುತ್ತಾ ಇಂದಿರಾ ಗಾಂಧಿಯವರು ಟೊಟಾಲಿಟೇರಿಯನಿಸಂ ಅಂತ ನಾವು ಏನು ಕರಿತೀವಿ, ಹಾಗೆ ಡಿಕ್ಟೇಟರ್‍ಶಿಪ್ ಕಡೆಗೆ ಹೋಗುವುದನ್ನ ನಾವು ನೋಡಿದೆವು. ಯಾಕೆಂದರೆ ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸಬೇಕಾದರೆ ಪ್ರಜಾಪ್ರಭುತ್ವವನ್ನ ಎತ್ತಿಹಿಡಿಯುವಂತಹ ಸಂಸ್ಥೆಗಳ ಸಶಕ್ತೀಕರಣ ಆಗಬೇಕಾಗುತ್ತದೆ.

ಇಂದಿರಾಗಾಂಧಿ ಮೊದಲನೆಯದಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮ ಮಾತುಗಳಿಗೆ ಒಪ್ಪುವಂತಹವರು, ಆ ತರದ ನಿರ್ಣಯಗಳನ್ನ ಕೊಡುವಂತಹವರಾದ ಎ.ಕೆ ರೇ. ಅನ್ನುವವರನ್ನು 1973ರಲ್ಲಿ ಮೂರು ಜನ ಜಡ್ಜಸ್- ಹಿಂದಿನ ಲೋಕಯುಕ್ತ ಸಂತೋಷ್ ಹೆಗೆಡೆ ಅವರ ತಂದೆಯನ್ನು ಒಳಗೊಂಡಂತೆ- ಆಯ್ಕೆ ಮಾಡಿದಾಗ ಈ ಸರ್ವಾಧಿಕಾರದ ಟ್ರೆಂಡ್ ಬರುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸಿದೆವು.

ನಾನು ಅಮೆರಿಕಾದಲ್ಲಿ ಇದ್ದಾಗ ನ್ಯೂರ್ಯಾಕ್ ಟೈಮ್ಸ್ ಗಮನಿಸುತ್ತಿದ್ದೆ. ಅದರಲ್ಲಿ ಜಯಪ್ರಕಾಶ್ ನಾರಾಯಣ ಅವರ ಬಗ್ಗೆ 6 ಪುಟಗಳ ವರದಿ ನೋಡಿದೆ. ಅದೇ ಸಮಯದಲ್ಲಿ ಚಿಕಾಗೊಗೆ ಅನಿರಿಕ್ಷಿತವಾಗಿ ಯು.ಆರ್ ಅನಂತಮೂರ್ತಿಯವರು ಬಂದಿದ್ದರು. ಅಲ್ಲಿ ಎಲ್ಲರೂ ಸೇರಿ ಅವರೊಂದಿಗೆ ಸಭೆ ಸೇರಿ ಭಾರತದಲ್ಲಿ ಏನು ನಡಿಯುತ್ತಿದೆ ಎಂದು ತಿಳಿದೆವು. ಅಲಹಾಬಾದ್ ಕೋರ್ಟ್ ಜೂನ್ ತಿಂಗಳಲ್ಲಿ ಇಂದಿರಾಗಾಂದಿಯವರ ಲೋಕಸಭಾ ಸದಸ್ಯತ್ವವನ್ನ ರದ್ದುಗೊಳಿಸಿತು. ಇದು ಸರ್ಕಾರನ್ನು ಅಲುಗಾಡಿಸಿತು. ಇನ್ನು ಕೆಲವು ಘಟನೆಗಳು ಕೂಡ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯ ಕಡೆ ತೆಗೆದುಕೊಂಡು ಹೋಗಲು ಕಾರಣವಾಯಿತು. ಆಗ ತುರ್ತು ಪರಿಸ್ಥಿತಿಯ ಮೂಲಕ ನಮ್ಮ ಸಂವಿಧಾನವನ್ನೆ ಅಪ್ರಸ್ತುತಗೊಳಿಸಲು ಹೊರಟಿದ್ದರು. ಆಗ ನಾವು ವಾಷಿಂಗ್ಟನ್‍ನ ನಮ್ಮ ರಾಯಭಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದೆವು. ನಾವು ಆಗ ಸತ್ಯಗಳನ್ನು ಮಾತಾಡಿದ್ದಕ್ಕಾಗಿ ನಮ್ಮ ಪಾಸ್‍ಪೋರ್ಟ್‍ಗಳನ್ನು ರದ್ದುಮಾಡಿದ್ದರು.

ಈಗ ವಲಸೆ ಕಾರ್ಮಿಕರ ಘಟನೆ ಬಗ್ಗೆ ಕೋರ್ಟ್‍ಗಳೂ ಕೂಡ ಸರಿಯಾಗಿ ಸ್ಪಂದಿಸಿಲ್ಲ. ಆಗಲೂ ಸಹ ಇದೇ ರೀತಿ ಆಯಿತು. ಜನಪರವಾಗಿ ತೀರ್ಪುಕೊಟ್ಟ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿದರು. ಮೂಲಭೂತ ಹಕ್ಕುಗಳನ್ನು ತೆಗೆದು ಹಾಕುವಂತಹ ಪರಿಸ್ಥಿತಿ ಬಂತು. ಇವತ್ತಿನ ಮೋದಿಯ ಮೊದಲನೇ ಮತ್ತು ಎರಡನೇ ಅವಧಿಯ ಸರ್ಕಾರ ಬಹಳ ಕರಾಳವಾಗಿದೆ. ತುರ್ತುಪರಿಸ್ಥಿತಿಗಿಂತ ಇಪ್ಪತ್ತು ಪಟ್ಟು ಗಂಭೀರವಾಗಿದೆ. ನೋಡಿ ಸಂವಿಧಾನದ ಮೂಲತತ್ವಗಳಾದ ಸಮಾನತೆ, ಸಹೋದರತೆ, ಭ್ರಾತೃತ್ವಗಳನ್ನು ಎತ್ತಿಹಿಡಿಯುವ ಆನಂದ್ ತೇಲ್ತುಂಬ್ಡೆಯಂತಹ ಬುದ್ಧಿಜೀವಿಗಳನ್ನು ಬಂಧನದಲ್ಲಿ ಇಟ್ಟಿದ್ದಾರೆ ಎಂದರೆ ಇಂದಿರಾಗಾಂದಿಯವರಿಗಿಂತ ಹೆಚ್ಚಿನದಾದ ತುರ್ತುಪರಿಸ್ಥಿತಿ ಇದಾಗಿದೆ. ಇದನ್ನು ಖಂಡಿಸಿ ಆಳವಾದ ಅಧ್ಯಯನದಿಂದ ಆಂದೋಲನವನ್ನು ಕಟ್ಟಬೇಕು.

ಕಾರ್ಮಿಕರ ದುಡಿಮೆಯ ಅವಧಿಯನ್ನೇ ಕಡಿಮೆ ಮಾಡಿ ಮೂರು ವರ್ಷ ಕಾರ್ಮಿಕ ಕಾನೂನುಗಳಿಗೆ ತಿಲಾಂಜಲಿ ಇಡುವುದನ್ನು ಈ ಸರ್ಕಾರ ಮಾಡಿದೆ. ಇದನ್ನು ನಾವು ಬುದ್ದ, ಬಸವ, ಅಂಬೇಡ್ಕರ್‌ರ ಆಶಯದೊಂದಿಗೆ ಎದುರಿಸಲೇಬೇಕು. ಅಂದು ಜಯಪ್ರಕಾಶ್ ನಾರಾಯಣರವರು ಸಮಗ್ರ ಪರಿವರ್ತನೆ ಎನ್ನುವ ಪರಿಕಲ್ಪನೆಯಲ್ಲಿ ಯುವಕರಿಗೆ ಕರೆಕೊಟ್ಟಿದ್ದರು. ಈ ಸ್ವಾತಂತ್ರ್ಯ ಅರ್ಥಪೂರ್ಣವಾಗಬೇಕಾದರೆ ಸಂವಿಧಾನದ ಪೂರಕ ಅಂಶಗಳಿಂದ ಸ್ಫೂರ್ತಿಪಡೆದ ಯುವಜನರು ಈ ದೇಶಕ್ಕೆ ಅವಶ್ಯಕತೆ ಇದ್ದಾರೆ. ಜೆಪಿಯವರು ಎಲ್ಲಾಪಕ್ಷಗಳನ್ನು ಕೂಡಿಸಿ ಹೊಸತೊಂದನ್ನು ಮಾಡಲು ಹೊರಟರು ಆದರೆ ಅವರ ಕಣ್ಣ ಮುಂದೆಯೇ ಜನತಾ ಪಕ್ಷ ಒಡೆದುಹೋಯಿತು. ಇದು ಕೂಡ ಐತಿಹಾಸಿಕ ಪ್ರಮಾದ ಅನಿಸುತ್ತೆ.

ಇಂದು ಯಾವುದೇ ಸ್ವಾತಂತ್ರ್ಯ ಹೋರಾಟ ಹಿನ್ನಲೆ ಇರದ ಆರ್.ಎಸ್.ಎಸ್ ದೇಶವನ್ನು ಹಿಂದಕ್ಕೆ ಒಯ್ಯುವ ಮತ್ತು ಭಯಾನಕ ಸಿದ್ಧಾಂತವನ್ನು ಹೊಂದಿರುವ ಸಂಘಟನೆ. ಸಂವಿಧಾನದ ಪ್ರಸ್ತಾವನೆ ಮತ್ತು ದೇಶದ ಬಾವುಟ ಹಿಡಿದು ಪ್ರತಿಭಟನೆ ಮಾಡಿದರೆ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇವತ್ತಿನ ಆರ್ಥಿಕ ಅಸಮಾನತೆಯ ಜನಕರು ಕಾಂಗ್ರೆಸ್. ಆದರೆ ಇದನ್ನ ಇನ್ನಷ್ಟು ನಾಗಲೋಟದಲ್ಲಿ ತೆಗೆದುಕೊಂಡು ಹೋಗುತ್ತಿರುವುದು ಬಿಜೆಪಿ. ಗಾಂಧಿ, ಶುಮಾಕರ್ ಅವರುಗಳು ಹೇಳಿದ ಆರ್ಥಿಕ ಸಮಾನತೆ, ಅಂಬೇಡ್ಕರ್ ಅವರು ಹೇಳಿದ ಜಾತಿವಿನಾಶ ಈ ವಿಚಾರಗಳ ಕಡೆಗೆ ನಾವು ಹೋಗಬೇಕು. ನನ್ನ ಪ್ರಕಾರ ಈ ದೇಶದ ಆತ್ಮ ಶರಣ ಸಂತರು. ಅವರು ಸಾವಿರಾರು ವರ್ಷಗಳ ಪರಂಪರೆ, ಜೀವನದ ಅರ್ಥವನ್ನು ಜನಸಾಮಾನ್ಯರಿಗೆ ತಿಳಿಸಿದ್ದಾರೆ. ರಾಜಕೀಯ ಪಕ್ಷಗಳು ಆ ಮಾರ್ಗದಲ್ಲಿ ಇರಬೇಕು. ಆದರೆ ಇವತ್ತಿನ ಯಾವ ರಾಜಕೀಯ ಪಕ್ಷಗಳು ಆ ನಿಟ್ಟಿನಲ್ಲಿ ಜನರ ವಿಶ್ವಾಸವನ್ನು ಉಳಿಸಿಕೊಂಡಿಲ್ಲ.

ಸಂದರ್ಶನ: ಬಸವರಾಜ ಸೂಳಿಬಾವಿ

( ಲೇಖಕ, ಪ್ರಕಾಶಕ ಬಸವರಾಜ ಸೂಳಿಬಾವಿ ಅವರು ನಡೆಸಿದ ಎಸ್ ಆರ್ ಹಿರೇಮಠರೊಂದಿಗಿನ ದೀರ್ಘ ಸಂದರ್ಶನದ ಸಂಗ್ರಹ ರೂಪ. ಪೂರ್ಣ ಸಂದರ್ಶನದ ವಿಡಿಯೋವನ್ನು ತಾಣದಲ್ಲಿ ನೋಡಬಹುದು)


ಇದನ್ನೂ ಓದಿ: 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...