Homeಮುಖಪುಟತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

ತುರ್ತುಪರಿಸ್ಥಿತಿಯ ವಿರುದ್ಧ ವಾಷಿಂಗ್ಟನ್‍ನಲ್ಲಿ ಪ್ರತಿಭಟಿಸಿದ್ದೆ: ಎಸ್.ಆರ್ ಹಿರೇಮಠ ಸಂದರ್ಶನ

1975ರಲ್ಲಿ ದೇಶದಲ್ಲಿ ಇಂದಿರಾ ಗಾಂಧಿಯವರು ಹೇರಿದ್ದ ಕರಾಳ ತುರ್ತುಪರಿಸ್ಥಿತಿಗೆ ಇಂದಿಗೆ 45 ವರ್ಷ ತುಂಬಿದೆ. ತುರ್ತು ಪರಿಸ್ಥಿತಿಯ ದಿನಗಳನ್ನು, ಅಂದಿಗೂ ಇಂದಿಗೂ ಆದ ಬದಲಾವಣೆಗಳನ್ನು ಮೆಲುಕು ಹಾಕಿದ್ದಾರೆ ಹಿರಿಯ ಹೋರಾಟಗಾರ ಹಿರೇಮಠ್‌ರವರು.

- Advertisement -
- Advertisement -

ನಾನು 11 ವರ್ಷ ಅಮೇರಿಕಾದಲ್ಲಿ ಇದ್ದೆ. ಬಡಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆತ್ತುವ ಇರಾದೆಯಿಂದ ಕೆಲಸ ಬಿಟ್ಟೆ. ನಮ್ಮ ಸಮಾನ ಮನಸ್ಕ ಗೆಳೆಯರೊಂದಿಗೆ ಸೇರಿ 1974 ಜನವರಿ 1 ರಂದು ಇಂಡಿಯಾ ಡೆವಲಪ್‍ಮೆಂಟ್ ಎಂಬ ಸಂಸ್ಥೆಯೊಂದನ್ನು ಮಾಡಿದೆವು. ಯಾವುದೇ ಒಂದು ಮಾನವೀಯ ಅಭಿವೃದ್ಧಿಯನ್ನು ಮಾಡಬೇಕಾದಾರೆ ಒಂದು ಲಾರ್ಜರ್ ಡೆಮಾಕ್ರಿಟಿಕ್ ಫ್ರೇಮ್‍ವರ್ಕ್ ಇರುವ ಪ್ರಜಾಪ್ರಭುತ್ವ ಆಶಯಗಳು ಮತ್ತು ಮೌಲ್ಯಗಳಿಗೆ ಗೌರವ ಇರುವಂತಹ ವಾತಾವರಣ ಇರುವುದು ಬಹಳ ಮುಖ್ಯವಾಗಿದೆ.

1971ರ ಬಾಂಗ್ಲಾದೇಶ ಲಿಬರೇಶನ್‍ನಲ್ಲಿ ಭಾರತ ಮಹತ್ವದ ಪಾತ್ರ ನಿರ್ವಹಿಸಿತು. ಅದರ ನಂತರ ಬರಬರುತ್ತಾ ಇಂದಿರಾ ಗಾಂಧಿಯವರು ಟೊಟಾಲಿಟೇರಿಯನಿಸಂ ಅಂತ ನಾವು ಏನು ಕರಿತೀವಿ, ಹಾಗೆ ಡಿಕ್ಟೇಟರ್‍ಶಿಪ್ ಕಡೆಗೆ ಹೋಗುವುದನ್ನ ನಾವು ನೋಡಿದೆವು. ಯಾಕೆಂದರೆ ಪ್ರಜಾಪ್ರಭುತ್ವವನ್ನು ಸಶಕ್ತಗೊಳಿಸಬೇಕಾದರೆ ಪ್ರಜಾಪ್ರಭುತ್ವವನ್ನ ಎತ್ತಿಹಿಡಿಯುವಂತಹ ಸಂಸ್ಥೆಗಳ ಸಶಕ್ತೀಕರಣ ಆಗಬೇಕಾಗುತ್ತದೆ.

ಇಂದಿರಾಗಾಂಧಿ ಮೊದಲನೆಯದಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮ ಮಾತುಗಳಿಗೆ ಒಪ್ಪುವಂತಹವರು, ಆ ತರದ ನಿರ್ಣಯಗಳನ್ನ ಕೊಡುವಂತಹವರಾದ ಎ.ಕೆ ರೇ. ಅನ್ನುವವರನ್ನು 1973ರಲ್ಲಿ ಮೂರು ಜನ ಜಡ್ಜಸ್- ಹಿಂದಿನ ಲೋಕಯುಕ್ತ ಸಂತೋಷ್ ಹೆಗೆಡೆ ಅವರ ತಂದೆಯನ್ನು ಒಳಗೊಂಡಂತೆ- ಆಯ್ಕೆ ಮಾಡಿದಾಗ ಈ ಸರ್ವಾಧಿಕಾರದ ಟ್ರೆಂಡ್ ಬರುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸಿದೆವು.

ನಾನು ಅಮೆರಿಕಾದಲ್ಲಿ ಇದ್ದಾಗ ನ್ಯೂರ್ಯಾಕ್ ಟೈಮ್ಸ್ ಗಮನಿಸುತ್ತಿದ್ದೆ. ಅದರಲ್ಲಿ ಜಯಪ್ರಕಾಶ್ ನಾರಾಯಣ ಅವರ ಬಗ್ಗೆ 6 ಪುಟಗಳ ವರದಿ ನೋಡಿದೆ. ಅದೇ ಸಮಯದಲ್ಲಿ ಚಿಕಾಗೊಗೆ ಅನಿರಿಕ್ಷಿತವಾಗಿ ಯು.ಆರ್ ಅನಂತಮೂರ್ತಿಯವರು ಬಂದಿದ್ದರು. ಅಲ್ಲಿ ಎಲ್ಲರೂ ಸೇರಿ ಅವರೊಂದಿಗೆ ಸಭೆ ಸೇರಿ ಭಾರತದಲ್ಲಿ ಏನು ನಡಿಯುತ್ತಿದೆ ಎಂದು ತಿಳಿದೆವು. ಅಲಹಾಬಾದ್ ಕೋರ್ಟ್ ಜೂನ್ ತಿಂಗಳಲ್ಲಿ ಇಂದಿರಾಗಾಂದಿಯವರ ಲೋಕಸಭಾ ಸದಸ್ಯತ್ವವನ್ನ ರದ್ದುಗೊಳಿಸಿತು. ಇದು ಸರ್ಕಾರನ್ನು ಅಲುಗಾಡಿಸಿತು. ಇನ್ನು ಕೆಲವು ಘಟನೆಗಳು ಕೂಡ ಇಂದಿರಾಗಾಂಧಿ ತುರ್ತು ಪರಿಸ್ಥಿತಿಯ ಕಡೆ ತೆಗೆದುಕೊಂಡು ಹೋಗಲು ಕಾರಣವಾಯಿತು. ಆಗ ತುರ್ತು ಪರಿಸ್ಥಿತಿಯ ಮೂಲಕ ನಮ್ಮ ಸಂವಿಧಾನವನ್ನೆ ಅಪ್ರಸ್ತುತಗೊಳಿಸಲು ಹೊರಟಿದ್ದರು. ಆಗ ನಾವು ವಾಷಿಂಗ್ಟನ್‍ನ ನಮ್ಮ ರಾಯಭಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದೆವು. ನಾವು ಆಗ ಸತ್ಯಗಳನ್ನು ಮಾತಾಡಿದ್ದಕ್ಕಾಗಿ ನಮ್ಮ ಪಾಸ್‍ಪೋರ್ಟ್‍ಗಳನ್ನು ರದ್ದುಮಾಡಿದ್ದರು.

ಈಗ ವಲಸೆ ಕಾರ್ಮಿಕರ ಘಟನೆ ಬಗ್ಗೆ ಕೋರ್ಟ್‍ಗಳೂ ಕೂಡ ಸರಿಯಾಗಿ ಸ್ಪಂದಿಸಿಲ್ಲ. ಆಗಲೂ ಸಹ ಇದೇ ರೀತಿ ಆಯಿತು. ಜನಪರವಾಗಿ ತೀರ್ಪುಕೊಟ್ಟ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿದರು. ಮೂಲಭೂತ ಹಕ್ಕುಗಳನ್ನು ತೆಗೆದು ಹಾಕುವಂತಹ ಪರಿಸ್ಥಿತಿ ಬಂತು. ಇವತ್ತಿನ ಮೋದಿಯ ಮೊದಲನೇ ಮತ್ತು ಎರಡನೇ ಅವಧಿಯ ಸರ್ಕಾರ ಬಹಳ ಕರಾಳವಾಗಿದೆ. ತುರ್ತುಪರಿಸ್ಥಿತಿಗಿಂತ ಇಪ್ಪತ್ತು ಪಟ್ಟು ಗಂಭೀರವಾಗಿದೆ. ನೋಡಿ ಸಂವಿಧಾನದ ಮೂಲತತ್ವಗಳಾದ ಸಮಾನತೆ, ಸಹೋದರತೆ, ಭ್ರಾತೃತ್ವಗಳನ್ನು ಎತ್ತಿಹಿಡಿಯುವ ಆನಂದ್ ತೇಲ್ತುಂಬ್ಡೆಯಂತಹ ಬುದ್ಧಿಜೀವಿಗಳನ್ನು ಬಂಧನದಲ್ಲಿ ಇಟ್ಟಿದ್ದಾರೆ ಎಂದರೆ ಇಂದಿರಾಗಾಂದಿಯವರಿಗಿಂತ ಹೆಚ್ಚಿನದಾದ ತುರ್ತುಪರಿಸ್ಥಿತಿ ಇದಾಗಿದೆ. ಇದನ್ನು ಖಂಡಿಸಿ ಆಳವಾದ ಅಧ್ಯಯನದಿಂದ ಆಂದೋಲನವನ್ನು ಕಟ್ಟಬೇಕು.

ಕಾರ್ಮಿಕರ ದುಡಿಮೆಯ ಅವಧಿಯನ್ನೇ ಕಡಿಮೆ ಮಾಡಿ ಮೂರು ವರ್ಷ ಕಾರ್ಮಿಕ ಕಾನೂನುಗಳಿಗೆ ತಿಲಾಂಜಲಿ ಇಡುವುದನ್ನು ಈ ಸರ್ಕಾರ ಮಾಡಿದೆ. ಇದನ್ನು ನಾವು ಬುದ್ದ, ಬಸವ, ಅಂಬೇಡ್ಕರ್‌ರ ಆಶಯದೊಂದಿಗೆ ಎದುರಿಸಲೇಬೇಕು. ಅಂದು ಜಯಪ್ರಕಾಶ್ ನಾರಾಯಣರವರು ಸಮಗ್ರ ಪರಿವರ್ತನೆ ಎನ್ನುವ ಪರಿಕಲ್ಪನೆಯಲ್ಲಿ ಯುವಕರಿಗೆ ಕರೆಕೊಟ್ಟಿದ್ದರು. ಈ ಸ್ವಾತಂತ್ರ್ಯ ಅರ್ಥಪೂರ್ಣವಾಗಬೇಕಾದರೆ ಸಂವಿಧಾನದ ಪೂರಕ ಅಂಶಗಳಿಂದ ಸ್ಫೂರ್ತಿಪಡೆದ ಯುವಜನರು ಈ ದೇಶಕ್ಕೆ ಅವಶ್ಯಕತೆ ಇದ್ದಾರೆ. ಜೆಪಿಯವರು ಎಲ್ಲಾಪಕ್ಷಗಳನ್ನು ಕೂಡಿಸಿ ಹೊಸತೊಂದನ್ನು ಮಾಡಲು ಹೊರಟರು ಆದರೆ ಅವರ ಕಣ್ಣ ಮುಂದೆಯೇ ಜನತಾ ಪಕ್ಷ ಒಡೆದುಹೋಯಿತು. ಇದು ಕೂಡ ಐತಿಹಾಸಿಕ ಪ್ರಮಾದ ಅನಿಸುತ್ತೆ.

ಇಂದು ಯಾವುದೇ ಸ್ವಾತಂತ್ರ್ಯ ಹೋರಾಟ ಹಿನ್ನಲೆ ಇರದ ಆರ್.ಎಸ್.ಎಸ್ ದೇಶವನ್ನು ಹಿಂದಕ್ಕೆ ಒಯ್ಯುವ ಮತ್ತು ಭಯಾನಕ ಸಿದ್ಧಾಂತವನ್ನು ಹೊಂದಿರುವ ಸಂಘಟನೆ. ಸಂವಿಧಾನದ ಪ್ರಸ್ತಾವನೆ ಮತ್ತು ದೇಶದ ಬಾವುಟ ಹಿಡಿದು ಪ್ರತಿಭಟನೆ ಮಾಡಿದರೆ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇವತ್ತಿನ ಆರ್ಥಿಕ ಅಸಮಾನತೆಯ ಜನಕರು ಕಾಂಗ್ರೆಸ್. ಆದರೆ ಇದನ್ನ ಇನ್ನಷ್ಟು ನಾಗಲೋಟದಲ್ಲಿ ತೆಗೆದುಕೊಂಡು ಹೋಗುತ್ತಿರುವುದು ಬಿಜೆಪಿ. ಗಾಂಧಿ, ಶುಮಾಕರ್ ಅವರುಗಳು ಹೇಳಿದ ಆರ್ಥಿಕ ಸಮಾನತೆ, ಅಂಬೇಡ್ಕರ್ ಅವರು ಹೇಳಿದ ಜಾತಿವಿನಾಶ ಈ ವಿಚಾರಗಳ ಕಡೆಗೆ ನಾವು ಹೋಗಬೇಕು. ನನ್ನ ಪ್ರಕಾರ ಈ ದೇಶದ ಆತ್ಮ ಶರಣ ಸಂತರು. ಅವರು ಸಾವಿರಾರು ವರ್ಷಗಳ ಪರಂಪರೆ, ಜೀವನದ ಅರ್ಥವನ್ನು ಜನಸಾಮಾನ್ಯರಿಗೆ ತಿಳಿಸಿದ್ದಾರೆ. ರಾಜಕೀಯ ಪಕ್ಷಗಳು ಆ ಮಾರ್ಗದಲ್ಲಿ ಇರಬೇಕು. ಆದರೆ ಇವತ್ತಿನ ಯಾವ ರಾಜಕೀಯ ಪಕ್ಷಗಳು ಆ ನಿಟ್ಟಿನಲ್ಲಿ ಜನರ ವಿಶ್ವಾಸವನ್ನು ಉಳಿಸಿಕೊಂಡಿಲ್ಲ.

ಸಂದರ್ಶನ: ಬಸವರಾಜ ಸೂಳಿಬಾವಿ

( ಲೇಖಕ, ಪ್ರಕಾಶಕ ಬಸವರಾಜ ಸೂಳಿಬಾವಿ ಅವರು ನಡೆಸಿದ ಎಸ್ ಆರ್ ಹಿರೇಮಠರೊಂದಿಗಿನ ದೀರ್ಘ ಸಂದರ್ಶನದ ಸಂಗ್ರಹ ರೂಪ. ಪೂರ್ಣ ಸಂದರ್ಶನದ ವಿಡಿಯೋವನ್ನು ತಾಣದಲ್ಲಿ ನೋಡಬಹುದು)


ಇದನ್ನೂ ಓದಿ: 1% ಅತಿ ಶ್ರೀಮಂತರಿಗೆ 2% ಸಂಪತ್ತಿನ ತೆರಿಗೆ ವಿಧಿಸಿ: ದೇಶಾದ್ಯಂತ ಚಿಂತಕರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...