Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...