Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...