Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...