Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...