Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...