Homeಕರ್ನಾಟಕಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಒಂದು ಗ್ರಾಮ ಅಭಿವೃದ್ದಿಯಾಗಲು ಏನು ಮಾಡಬೇಕು?: ಇಲ್ಲಿದೆ ಅಂತಹ ಗ್ರಾ.ಪಂ ಪ್ರಣಾಳಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪನವರ ಗ್ರಾ.ಪಂ ಚುನಾವಣಾ ಪ್ರಣಾಳಿಕೆ ಗಮನ ಸೆಳೆದಿದೆ.

- Advertisement -
- Advertisement -

ಕರ್ನಾಟಕದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಬಿರುಸಿನಿಂದ ಸಾಗುತ್ತಿದೆ, ಈಗಾಗಲೇ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಎರಡನೇ ಹಂತದ ಮತದಾನ ಡಿಸೆಂಬರ್ 27 ರಂದು ನಡೆಯಲಿದೆ. ಚುನಾವಣೆ ಆರಂಭವಾದಾಗಿನಿಂದಲೂ ತರೇಹವಾರಿ ಆಶ್ವಾಸನೆಗಳು, ಭರವಸೆಗಳು, ಪ್ರಣಾಳಿಕೆಗಳು ಚರ್ಚೆಯಲ್ಲಿವೆ. ಅಂತದ್ದೇ ವಿಶೇಷ ಪ್ರಣಾಳಿಕೆಯೊಂದು ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಹೊರಬಿದ್ದಿದೆ. ತಾನು ಗೆದ್ದಲ್ಲಿ ಗ್ರಾಮಕ್ಕೆ 25 ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಅಭ್ಯರ್ಥಿಯೊಬ್ಬರು ಘೋಷಿಸಿ ಗಮನಸೆಳೆದಿದ್ದಾರೆ.

ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮ ಪಂಚಾಯ್ತಿಯ ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಎಂಬುವವರು ದೊಡ್ಡಗಾನಹಳ್ಳಿ ಗ್ರಾಮದ ಚುನಾವಣಾ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಶಾಲೆ ಅಭಿವೃದ್ದಿ, ಗ್ರಂಥಾಲಯ ನಿರ್ಮಾಣ, ಕಾರ್ಮಿಕರಿಗೆ ಕೆಲಸ, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಹಲವು ಜನಪರ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ತುಮಕೂರಿನ ಕಲ್ಕೆರೆ ಗ್ರಾಮದ ಮಹಿಳೆಯೊಬ್ಬರ ಪ್ರಣಾಳಿಕೆ ವೈರಲ್ ಆಗಿತ್ತು. ಆದರೆ ಅದರಲ್ಲಿ ಸೋತರೆ ತೊಂದರೆ ಕೊಡುತ್ತೇನೆ ಎಂಬ ಧಮಕಿ ಇದ್ದ ಕಾರಣ ಅವರ ವಿರುದ್ಧ ದೂರು ಸಹ ದಾಖಲಾಗಿತ್ತು. ಆದರೆ ದೊಡ್ಡೇಗಾನಹಳ್ಳಿಯ ಪ್ರಣಾಳಿಕೆಯು ಗ್ರಾಮದ ಅಭಿವೃದ್ದಿಯ ಸಮಗ್ರ ನೋಟ ಒಳಗೊಂಡಿರುವುದರಿಂದ ಎಲ್ಲರ ಗಮನ ಸೆಳೆದಿದೆ.

ಗ್ರಾಮಗಳ ಅಭಿವೃದ್ದಿಯೇ ದೇಶದ ಅಭಿವೃದ್ದಿ ಎಂಬ ಮಾತನ್ನು ಎಲ್ಲಾ ಕಡೆ ಕೇಳುತ್ತೇವೆ. ಆದರೆ ರಸ್ತೆ ಮತ್ತು ದೇವಸ್ಥಾನ ನಿರ್ಮಾಣವನ್ನೇ ಬಹುತೇಕರು ಗ್ರಾಮದ ಅಭಿವೃದ್ದಿ ಎಂದು ಭಾವಿಸುವವರಿದ್ದಾರೆ. ಇವರ ನಡುವೆ ಈ ಅಭ್ಯರ್ಥಿ ಲಕ್ಷ್ಮೀನರಸಿಂಹಪ್ಪ ಮಾತ್ರ ವಿಶಿಷ್ಟವಾಗಿ ನಿಲ್ಲುತ್ತಾರೆ. ಅವರ ಪ್ರಣಾಳಿಕೆಯಲ್ಲಿ ಗ್ರಾಮಕ್ಕೆ ಶುದ್ಧ ನೀರಿನ ಘಟಕವನ್ನು ತರುವುದು, ಊರಿನ ಎಲ್ಲಾ ರಸ್ತೆಗಳಲ್ಲಿ ಕಸದ ತೊಟ್ಟಿಗಳನ್ನು ಸ್ಥಾಪಿಸಿ ಸ್ವಚ್ಚತೆಯನ್ನು ಕಾಪಾಡುವುದು. ಮನೆ ಇಲ್ಲದವರಿಗೆ ಖುದ್ದಾಗಿ ಸರ್ವೇ ಮಾಡಿ ಸರ್ಕಾರದಿಂದ ಹೊಸ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಕೊಡಿಸುವುದು. ಊರಿಗೆ ನೀರಿನ ಓವರ್‌ಹೆಡ್ ಟ್ಯಾಂಕ್ ತರುವುದು. ಹೊಸ ಗ್ರಂಥಾಲಯವನ್ನು ಸ್ಥಾಪಿಸಿ ವಾಚನಾಲಯದ ಮೂಲಕ ಊರಿನ ಮಕ್ಕಳ ಜ್ಞಾನವನ್ನು ವೃದ್ಧಿಸುವುದು. ಸಾರ್ವಜನಿಕ ಆರೋಗ್ಯ ಸಂರಕ್ಷಣೆ ಮತ್ತು ರೋಗಗಳ ಹರಡುವಿಕೆಯನ್ನು ತಡೆಯುವ ಸುವ್ಯವಸ್ಥೆಯನ್ನು ಜವಬ್ದಾರಿ ಇರುವಂತಹವರಿಗೆ ಪಿಂಚಣಿ ಸೌಲಭ್ಯವನ್ನು ಕೊಡಿಸುವುದು. ಊರಿನ ಪ್ರಮುಖರಸ್ತೆಗಳ ಬದಿಗಳಲ್ಲಿ ಗಿಡಗಳನ್ನು ನೆಟ್ಟು ಸಂರಕ್ಷಿಸಿ ಪೋಷಿಸುವ ಮೂಲಕ ಊರಿನ ಸೌಂದರ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಗ್ರಾಮದ ಜನರ ಜೊತೆ ನಿರಂತರ ಸಂಪರ್ಕದಲ್ಲಿರುವುದು ಸೇರಿ 25 ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.

ಒಬ್ಬ ಗ್ರಾಮ ಪಂಚಾಯ್ತಿ ಸದಸ್ಯ ಮತ್ತು ಜನಪ್ರತಿನಿಧಿಗಳು ಮಾಡಬೇಕಾದ ಪ್ರಾಥಮಿಕ ಕರ್ತವ್ಯವನ್ನು ಈ ಮೇಲಿನ ಪಟ್ಟಿ ಸೂಚಿಸುತ್ತದೆ. ಪ್ರಾಮಾಣಿಕವಾಗಿ, ಶ್ರದ್ದೆಯಿಂದ ನಿರಂತರವಾಗಿ ಕೆಲಸ ಮಾಡಿದ್ದಲ್ಲಿ ಮೇಲಿನವನ್ನು ಮಾಡುವುದು ಅಸಾಧ್ಯದ ಮಾತಲ್ಲ ಜೊತೆಗೆ ಅನುದಾನದ ಕೊರತೆಯೂ ಇರುವುದಿಲ್ಲ. ಈ ರೀತಿಯಾಗಿ ಬಹುತೇಕ ಚುನಾಯಿತ ಜನಪ್ರತಿನಿಧಿಗಳು ನಿರ್ಧರಿಸಿದ್ದಲ್ಲಿ ಗ್ರಾಮಗಳು ನಿಜವಾದ ಅರ್ಥದಲ್ಲಿ ಸಬಲೀಕರಣವಾಗುತ್ತವೆ. ಅಂತಹ ಕೆಲಸ ಮಾಡುತ್ತೇನೆ ಎಂದು ದೊಡ್ಡೇಗಾನಹಳ್ಳಿ ಕ್ಷೇತ್ರದ ಅಭ್ಯರ್ಥಿಯಾದ ಲಕ್ಷ್ಮೀನರಸಿಂಹಪ್ಪ ಘೋಷಿಸಿ ಮಾದರಿಯಾಗಿದ್ದಾರೆ. ಇದು ಇತರರಿಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ: ಇದನ್ನೂ ಓದಿ: ಗ್ರಾಮ ಪಂಚಾಯತ್‌ ಚುನಾವಣೆ: ಈ ಮಹಿಳಾ ಅಭ್ಯರ್ಥಿ ಸೋತರೆ ಏನು ಮಾಡುತ್ತಾರೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....