Homeಕರ್ನಾಟಕಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ರಾಜ್ಯದ 25 ಸಂಸದರು ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.

- Advertisement -
- Advertisement -

ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜಿಎಸ್‌ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಅವರು ಟ್ವೀಟ್‌ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ ಜಿಎಸ್‌ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ ಎಂದಿರುವ ಅವರು, ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‌ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7 ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 71 ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ಹೇಳಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ ಎಂದು ರಾಜ್ಯದ ಬಿಜೆಪಿ ಸಂಸದರನ್ನು ವ್ಯಂಗ್ಯವಾಡಿದ್ದಾರೆ.


ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...