Homeಕರ್ನಾಟಕಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ರಾಜ್ಯದ 25 ಸಂಸದರು ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.

- Advertisement -
- Advertisement -

ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜಿಎಸ್‌ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಅವರು ಟ್ವೀಟ್‌ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ ಜಿಎಸ್‌ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ ಎಂದಿರುವ ಅವರು, ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‌ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7 ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 71 ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ಹೇಳಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ ಎಂದು ರಾಜ್ಯದ ಬಿಜೆಪಿ ಸಂಸದರನ್ನು ವ್ಯಂಗ್ಯವಾಡಿದ್ದಾರೆ.


ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...