Homeಕರ್ನಾಟಕಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ರಾಜ್ಯದ 25 ಸಂಸದರು ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.

- Advertisement -
- Advertisement -

ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜಿಎಸ್‌ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಅವರು ಟ್ವೀಟ್‌ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ ಜಿಎಸ್‌ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ ಎಂದಿರುವ ಅವರು, ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‌ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7 ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 71 ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ಹೇಳಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ ಎಂದು ರಾಜ್ಯದ ಬಿಜೆಪಿ ಸಂಸದರನ್ನು ವ್ಯಂಗ್ಯವಾಡಿದ್ದಾರೆ.


ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...