Homeಕರ್ನಾಟಕಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ರಾಜ್ಯದ 25 ಸಂಸದರು ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.

- Advertisement -
- Advertisement -

ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜಿಎಸ್‌ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಅವರು ಟ್ವೀಟ್‌ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ ಜಿಎಸ್‌ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ ಎಂದಿರುವ ಅವರು, ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‌ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7 ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 71 ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ಹೇಳಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ ಎಂದು ರಾಜ್ಯದ ಬಿಜೆಪಿ ಸಂಸದರನ್ನು ವ್ಯಂಗ್ಯವಾಡಿದ್ದಾರೆ.


ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...