Homeಕರ್ನಾಟಕಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ರಾಜ್ಯದ 25 ಸಂಸದರು ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.

- Advertisement -
- Advertisement -

ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜಿಎಸ್‌ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಅವರು ಟ್ವೀಟ್‌ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ ಜಿಎಸ್‌ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ ಎಂದಿರುವ ಅವರು, ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‌ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7 ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 71 ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ಹೇಳಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ ಎಂದು ರಾಜ್ಯದ ಬಿಜೆಪಿ ಸಂಸದರನ್ನು ವ್ಯಂಗ್ಯವಾಡಿದ್ದಾರೆ.


ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...