Homeಮುಖಪುಟರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

ರಾರಾಜಿಸಿದ ಮೋದಿ: ನಿರಾಶೆಗೊಳಿಸಿದ ಬಿಜೆಪಿ ಪ್ರಣಾಳಿಕೆ

- Advertisement -
- Advertisement -

ಬಿಜೆಪಿಯು ಅದ್ಭುತವಾದ ಪ್ರಣಾಳಿಕೆಯನ್ನು ತಯಾರಿಸಿದೆ, ಪ್ರಣಾಳಿಕೆಯಲ್ಲಿ ಸುಂದರವಾದ, ಹೊಳೆಯುವ, ವರ್ಣರಂಜಿತ, ಸೃಜನಶೀಲ ಪ್ರಧಾನಿ ನರೇಂದ್ರ ಮೋದಿಯವರ ಪೋಟೋಗಳು ಕಂಡು ಬರುತ್ತದೆ. ಮೋದಿಯವರ ಛಾಯಾಗ್ರಹಣವನ್ನು ಯಾರೂ ಪ್ರಶ್ನಿಸುವಂತಿಲ್ಲ, ಆದರೆ ಛಾಯಾಚಿತ್ರಗಳಿಗಿಂತ ರಾಜಕೀಯ ಮತ್ತು ಚುನಾವಣೆಗಳ ಬಗ್ಗೆ ಗಮನ ಹರಿಸಿದರೆ, ಬಿಜೆಪಿಯ ಪ್ರಣಾಳಿಕೆ ನಿರಾಶೆಗೊಳಿಸುತ್ತದೆ. ಇದು ನಿರ್ದಿಷ್ಟ ವಿಚಾರಗಳನ್ನು ಹೊಂದಿಲ್ಲ, ವಿಷಯ ಮತ್ತು ದೃಷ್ಟಿಕೋನದಲ್ಲಿ ಕೊರತೆಯಿದೆ ಮತ್ತು ಮತದಾರರ ಬಯಕೆಗಳನ್ನು ಪೂರೈಸಲು ಮೋದಿ ವರ್ಚಸ್ಸಿನ ಮೇಲೆ ಅವಲಂಬಿತವಾಗಿದೆ. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರವು ಏನನ್ನು ಸಾಧಿಸಿದೆ ಎಂಬುದನ್ನು ಇದು ನಿರ್ಣಾಯಕ ಪದಗಳಲ್ಲಿ ವಿವರಿಸುವುದಿಲ್ಲ ಅಥವಾ ಭವಿಷ್ಯಕ್ಕಾಗಿ ಗಣನೀಯವಾದ ನೀಲನಕ್ಷೆಯನ್ನು ನೀಡುವುದಿಲ್ಲ. ವಾಸ್ತವವಾಗಿ, ಸಾಮಾಜಿಕ ನ್ಯಾಯಕ್ಕಾಗಿ ಸ್ಪಷ್ಟ ಮಾರ್ಗಸೂಚಿಯನ್ನು ಹೊಂದಿಲ್ಲ, ಜೊತೆಗೆ ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಜೀವನವನ್ನು ಸುಧಾರಿಸಲು ಸ್ಪಷ್ಟ ಯೋಜನೆ ಬಗ್ಗೆ ಭರವಸೆಯನ್ನು ಹೊಂದಿಲ್ಲ. ಹಣದುಬ್ಬರ, ನಿರುದ್ಯೋಗಕ್ಕೆ ಪರಿಹಾರ ಉಲ್ಲೇಖವಿಲ್ಲ.

ಪ್ರಣಾಳಿಕೆಯಲ್ಲಿನ ಪ್ರಧಾನಮಂತ್ರಿಯವರ ಪತ್ರವು ನಿರ್ದಿಷ್ಟತೆಯ ಕೊರತೆಯನ್ನು ತೋರಿಸುತ್ತದೆ. ಅವರು ಹೇಳುತ್ತಾರೆ, ನಿಮ್ಮ ನಂಬಿಕೆ ಮತ್ತು ಬೆಂಬಲದೊಂದಿಗೆ, ಕಳೆದ ಹತ್ತು ವರ್ಷಗಳಲ್ಲಿ ರಾಷ್ಟ್ರವು ಬೃಹತ್ ಪರಿವರ್ತನೆಯನ್ನು ಕಂಡಿದೆ. ಅಭಿವೃದ್ಧಿಯು ಅಭೂತಪೂರ್ವ ವೇಗವನ್ನು ಪಡೆದಿದೆ. ನಮ್ಮ ಯುವಕರು 2047 ರ ವೇಳೆಗೆ ಸಾಧಿಸಬಹುದಾದ ಗುರಿಯಾಗಿ ವಿಕಸಿತ್‌ ಭಾರತವನ್ನು ರಚಿಸುವ ಬಗ್ಗೆ ಮಾತನಾಡುತ್ತಿದ್ದಾರೆ, ಅದು ಖಂಡಿತವಾಗಿಯೂ ತಲುಪುವ ಮೈಲಿಗಲ್ಲು. ಸ್ವಾವಲಂಬಿಯಾಗುವ (ಆತ್ಮನಿರ್ಭರ್) ಪ್ರಯಾಣದಲ್ಲಿ ರಾಷ್ಟ್ರವು ವಿಶ್ವಾಸ ಹೊಂದಿದೆ. 2014ರ ಹಿಂದಿನ ದಶಕದಲ್ಲಿ ಆ ಕಾಲದ ಸರ್ಕಾರದ ಭ್ರಷ್ಟಾಚಾರ, ದುರಾಡಳಿತದಿಂದಾಗಿ ರಾಷ್ಟ್ರವು ಅನುಭವಿಸಿದ ಹತಾಶೆ ಮತ್ತು ಹತಾಶೆಯ ವಾತಾವರಣದಿಂದ ಇದು ದೊಡ್ಡ ಬದಲಾವಣೆಯಾಗಿದೆ ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಮೋದಿ ಅವರ ಭಾಷಣಗಳು ಮತ್ತು ಬಿಜೆಪಿ ಪ್ರಣಾಳಿಕೆಯಲ್ಲಿ ಎರಡು ಪದಗಳು ಕಾಣೆಯಾಗಿವೆ. ಅದು ಹಣದುಬ್ಬರ ಮತ್ತು ನಿರುದ್ಯೋಗವಾಗಿದೆ. ಅವರು ಜನರ ಜೀವನಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ಬಯಸುವುದಿಲ್ಲ. ಇಂಡಿಯ ಮೈತ್ರಿಕೂಟದ ಯೋಜನೆ ಸ್ಪಷ್ಟವಾಗಿದೆ. 30 ಲಕ್ಷ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ಪ್ರತಿ ವಿದ್ಯಾವಂತ ಯುವಕರು ಒಂದು ಲಕ್ಷ ರೂಪಾಯಿಗಳೊಂದಿಗೆ ಶಿಷ್ಯವೃತ್ತಿಯನ್ನು ಪಡೆಯಲಿದ್ದಾರೆ. ಯುವಕರು ಈ ಬಾರಿ ಮೋದಿಯವರ ವಂಚಕ ತಂತ್ರಗಳಿಗೆ ಬಲಿಯಾಗುವುದಿಲ್ಲ ಮತ್ತು ಕಾಂಗ್ರೆಸ್ ಕೈಯನ್ನು ಬಲಪಡಿಸುವ ಮೂಲಕ ಉದ್ಯೋಗ ಕ್ರಾಂತಿಯನ್ನು ತರುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ದೂರದೃಷ್ಟಿ ಮತ್ತು ಕ್ರಿಯಾ ಯೋಜನೆಯನ್ನು ಸ್ಪಷ್ಟಪಡಿಸದೆ ಅಸ್ಪಷ್ಟ ಭರವಸೆಯನ್ನು ತೆಗೆದುಕೊಂಡಿದೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಿಜೆಪಿಯು ತನ್ನ ಪ್ರಣಾಳಿಕೆಯನ್ನು ರಚಿಸಿದ ವಿಧಾನವು ಚುನಾವಣಾ ಪೂರ್ವ ದಾಖಲೆಯ ಬಗ್ಗೆ ಅವರು ಸ್ವಲ್ಪ ಕಾಳಜಿ ವಹಿಸುವುದಿಲ್ಲ ಎಂಬುವುದನ್ನು ಬಹಿರಂಗಪಡಿಸುತ್ತದೆ. ಕಾಂಗ್ರೆಸ್ ತನ್ನ ಪ್ರಣಾಳಿಕೆ ಸಮಿತಿಯನ್ನು 2023ರ ಡಿಸೆಂಬರ್‌ನಲ್ಲಿ ರಚಿಸಿದೆ ಮತ್ತು ಜನರೊಂದಿಗೆ ವಿಸ್ತೃತ ಸಮಾಲೋಚನೆಯ ನಂತರ ದಾಖಲೆಯನ್ನು ಸಿದ್ಧಪಡಿಸಿದರೆ, ಬಿಜೆಪಿ ಮಾರ್ಚ್ 30ರಂದು ಪ್ರಣಾಳಿಕೆಗೆ ಸಮಿತಿಯನ್ನು ರಚಿಸಿತು ಮತ್ತು ಎರಡು ವಾರಗಳಿಗಿಂತ ಕಡಿಮೆ ಅವಧಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

2014ರಲ್ಲಿ ಮಾಡಿದಂತೆ ಕಪ್ಪು ಹಣ ವಾಪಸು ತರುವುದು, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುವುದು, 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವುದು ಮುಂತಾದ ಭರವಸೆಗಳಂತೆಯೇ ಈ ಬಾರಿ ಭರವಸೆಯನ್ನು ನೀಡಲಾಗಿದೆ. ಆದರೆ ಕಾಂಗ್ರೆಸ್‌ನ ಆಕರ್ಷಣೀಯ ಭರವಸೆಗಳನ್ನು ಹೋಲುವಂತೆ ಬಿಜೆಪಿ  ಯಾವುದೇ ಭರವಸೆಯನ್ನು ನೀಡಲ್ಲ ಎನ್ನುವುದು ಪ್ರಣಾಳಿಕೆಯಲ್ಲಿ ಕಂಡು ಬರುತ್ತದೆ.

‘ಅಚ್ಛೇ ದಿನ್’ ಸಮಾಧಿ ಮಾಡಲಾಗಿದೆ. 2020 ರಿಂದ 80 ಕೋಟಿ ನಾಗರಿಕರು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ, 50 ಕೋಟಿ ನಾಗರಿಕರು ಬ್ಯಾಂಕಿಂಗ್ ವ್ಯವಸ್ಥೆಗೆ ಸೇರಿದ್ದಾರೆ, ನೇರವಾಗಿ 34 ಲಕ್ಷ ಕೋಟಿ ರೂ. ಜನರ ಖಾತೆಗಳಿಗೆ ವರ್ಗಾಯಿಸಲಾಗಿದೆ, ಆಯುಷ್ಮಾನ್ ಭಾರತ್ ಅಡಿಯಲ್ಲಿ 34 ಕೋಟಿ ನಾಗರಿಕರು ಉಚಿತ ಆರೋಗ್ಯ ವಿಮೆಯನ್ನು ಪಡೆಯುತ್ತಿದ್ದಾರೆ, 4 ಕೋಟಿ ಕುಟುಂಬಗಳು ಈಗ ಪಕ್ಕಾ ಮನೆಗಳನ್ನು ಹೊಂದಿವೆ ಎಂದು ಹೇಳಲಾಗಿದೆ.

ಮೋದಿ ಆಡಳಿತದಲ್ಲಿ ಈ ಹಿಂದೆ 450 ರೂ.ಗೆ ದುಬಾರಿ ಎಂದು ಹೇಳುತ್ತಿದ್ದ ಗ್ಯಾಸ್ ಸಿಲಿಂಡರ್‌ಗಳ ಬೆಲೆ 1,150 ರೂ.ಗೆ ತಲುಪಿದೆ. ಪೆಟ್ರೋಲ್-ಡೀಸೆಲ್ ಬೆಲೆಯನ್ನು 100 ರೂ.ಗೆ ತಲುಪಿದೆ. ಬೇಳೆಕಾಳುಗಳು ಮತ್ತು ಖಾದ್ಯ ತೈಲ ರೂ.200ಕ್ಕೆ ದಾಟಿದೆ. ಡಾಲರ್ ಎದುರು ರೂಪಾಯಿ 70 ತಲುಪಿದಾಗ ಅವರು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಧಿಕ್ಕಾರ ಕೂಗಿದ್ದರು. ಈಗ 84ಕ್ಕೆ ತಲುಪಿದಾಗ ಮೌನವಾಗಿದ್ದಾರೆ. 2047ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಕನಸುಗಳನ್ನು ಬಿತ್ತಿದ ಬಿಜೆಪಿ ಪ್ರಣಾಳಿಕೆ ಬಗ್ಗೆ ಕಾಂಗ್ರೆಸ್‌ ಟೀಕಿಸಿದೆ. ಬಿಜೆಪಿ 5 ವರ್ಷಗಳಲ್ಲಿ ಏನು ಮಾಡುತ್ತದೆ ಎಂಬವುದನ್ನು ಹೇಳಬೇಕು ಹೊರತು ಜನರನ್ನು ಮೂರ್ಖರನ್ನಾಗಿಸುವುದಲ್ಲ ಎಂದು ಹೇಳಿದ್ದಾರೆ.

ಕನಿಷ್ಠ ಬೆಂಬಲ ಬೆಲೆ ಕಾನೂನಿನ ಬಗ್ಗೆ ಕಾಂಗ್ರೆಸ್ ಭರವಸೆ ನೀಡಿದ್ದರೆ, ಬಿಜೆಪಿ ಪ್ರಣಾಳಿಕೆಯಲ್ಲಿ 11 ಕೋಟಿ ರೈತರಿಗೆ ವಾರ್ಷಿಕ 6,000 ರೂಪಾಯಿ ಸಿಗುತ್ತಿದೆ ಎಂದು ಹೇಳುತ್ತದೆ. ಬಡ ಮಹಿಳೆಯರಿಗೆ ಪ್ರತಿ ವರ್ಷ 1 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದರೆ, ಬಿಜೆಪಿ ಪ್ರಣಾಳಿಕೆಯು ಉಜ್ವಲ ಯೋಜನೆ, ತ್ರಿವಳಿ ತಲಾಖ್ ಮತ್ತು ಶೌಚಾಲಯಗಳನ್ನು ಮಹಿಳೆಯರ ಸಬಲೀಕರಣದ ಅಂಶವಾಗಿ ಪ್ರಸ್ತುತ ಪಡಿಸಿದೆ.

ಪ್ರಣಾಳಿಕೆಯಲ್ಲಿ ಉದ್ಯೋಗ ಸೃಷ್ಟಿಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ. ಪಕ್ಷವು 10 ವರ್ಷಗಳ ಅಧಿಕಾರದ ನಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆ ನೀಡಿರುವುದು ದೊಡ್ಡ ತಮಾಸೆಯಂತೆ ಭಾಸವಾಗುತ್ತಿದೆ. 2014ರಿಂದ ಯಾವುದೇ ನಗರದಲ್ಲಿ ಯಾವುದೇ ಪ್ರಮುಖ ಭಯೋತ್ಪಾದಕ ದಾಳಿಗಳು ನಡೆದಿಲ್ಲ ಎಂದು ಬಿಜೆಪಿ ಹೇಳುತ್ತದೆ, ಆದರೆ ಪುಲ್ವಮಾ ದಾಳಿ ಮತ್ತು 40 ಸಿಆರ್‌ಪಿಎಫ್ ಯೋಧರ ಹುತಾತ್ಮತೆ, ಪಠಾಣ್‌ಕೋಟ್‌ನ ವಾಯುಸೇನೆಯ ನೆಲೆಯ ಮೇಲೆ ದಾಳಿ,  ಉರಿಯ ಸೇನಾ ಪ್ರಧಾನ ಕಚೇರಿ ಮೇಲಿನ ದಾಳಿಯನ್ನು ನಾವು ನೆನಪಿಸಿಕೊಳ್ಳಬಹುದಾಗಿದೆ. ಇದಲ್ಲದೆ ಮಣಿಪುರ ಹಿಂಸಾಚಾರ, ಚೀನಾದಿಂದ ಭಾರತದ ಭೂಭಾಗದ ಆಕ್ರಮಣ ಸೇರಿದಂತೆ ಪ್ರಮುಖ ವಿಷಯಗಳಿಗೆ ಪರಿಹಾರದ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಮಾಜದ ಎಲ್ಲಾ ವರ್ಗಗಳಿಗೆ ಅನುಕೂಲವಾಗುವ ಯಾವುದೇ ಕೆಲಸವನ್ನು ಅವರು ಮಾಡುತ್ತಿಲ್ಲ. ಬಿಜೆಪಿಯ ಪ್ರಣಾಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ನರೇಂದ್ರ ಮೋದಿ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿದ್ದರು, ಅವರು ಎಂಎಸ್‌ಪಿ ಹೆಚ್ಚಿಸುವುದಾಗಿ ಮತ್ತು ಕಾನೂನುಬದ್ಧ ಗ್ಯಾರಂಟಿ ನೀಡುವುದಾಗಿ ಹೇಳಿದ್ದರು. ಅವರು ತಮ್ಮ ಅಧಿಕಾರಾದಲ್ಲಿದ್ದರೂ ಅಂತಹ ಯಾವುದೇ ದೊಡ್ಡ ಕೆಲಸವನ್ನು ಮಾಡಲಿಲ್ಲ ಎಂದು ಹೇಳಿದ್ದರು. ಒಟ್ಟಿನಲ್ಲಿ ಬಿಜೆಪಿ ಪ್ರಣಾಳಿಕೆಯಲ್ಲಿ ಮೋದಿ ವೈಭವೀಕರಣ ಬಿಟ್ಟು, 5 ವರ್ಷಗಳ ಅವಧಿಯ ಸ್ಪಷ್ಟ ಅಭಿವೃದ್ಧಿಯ ಬಗೆಗಿನ ಗ್ಯಾರೆಂಟಿಗಳನ್ನು ಇದರಲ್ಲಿ ಉಲ್ಲೇಖಿಸಿಲ್ಲ ಎಂದು ಟೀಕೆ ವ್ಯಕ್ತವಾಗಿದೆ.

ಇದನ್ನು ಓದಿ: ನಿರುದ್ಯೋಗ, ಹಣದುಬ್ಬರದ ಬಗ್ಗೆ ಉಲ್ಲೇಖವಿಲ್ಲ: ಬಿಜೆಪಿ ಪ್ರಣಾಳಿಕೆ ಬಗ್ಗೆ ವಿಪಕ್ಷಗಳ ನಾಯಕರು ಏನೇನು ಹೇಳಿದ್ರು?

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...