Homeಮುಖಪುಟಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೇಳುವುದೇನು?

ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೇಳುವುದೇನು?

- Advertisement -
- Advertisement -

ಇತ್ತೀಚಿಗೆ ನಡೆದ ಐದು ರಾಜ್ಯಗಳ ಚುನಾವಣೆಗಳು ಮತ್ತು ಆ ಚುನಾವಣೆಗಳ ಫಲಿತಾಂಶಗಳು ದೇಶಕ್ಕೆ ಹಲವಾರು ಸೂಚ್ಯವಾದ ಸಂದೇಶಗಳನ್ನು ನೀಡಬಯಸುತ್ತಿವೆ.

ಸದ್ಯ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಸಂದೇಶವೇನೆಂದರೆ- ಐದು ರಾಜ್ಯಗಳಲ್ಲಿ ಬಿಜೆಪಿ ಟಿಕೆಟ್ ಅಡಿಯಲ್ಲಿ ಗೆದ್ದಿರುವ ಶಾಸಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಎಲ್ಲಾ ಐದು ರಾಜ್ಯಗಳನ್ನು ಪರಿಗಣಿಸಿದಾಗ, ಈ ವರ್ಷ 356 ಶಾಸಕರು ಬಿಜೆಪಿ ಟಿಕೆಟ್‌ನಲ್ಲಿ ಆಯ್ಕೆಯಾದರೆ 2017ರ ಚುನಾವಣೆಗಳಲ್ಲಿ ಆ ಸಂಖ್ಯೆ 406 ಆಗಿತ್ತು. ಅಂದರೆ ಕಳೆದ ಚುನಾವಣೆಗಿಂತ 50 ಶಾಸಕರು ಈ ಬಾರಿ ಕಡಿಮೆಯಾಗಿದ್ದಾರೆ. ಶುದ್ಧ ಸಂಖ್ಯಾತ್ಮಕ ಪರಿಭಾಷೆಯಲ್ಲಿ ಹೇಳುವುದಾದರೆ ಉತ್ತರ ಪ್ರದೇಶ (312 ರಿಂದ 255), ಉತ್ತರಾ ಖಂಡ (57 ರಿಂದ 47), ಪಂಜಾಬ್ (03 ರಿಂದ 02) ರಾಜ್ಯಗಳಲ್ಲಿ ಬಿಜೆಪಿ ಶಾಸಕರ ಸಂಖ್ಯೆ ಕುಸಿದಿದೆ. ಇದೇ ಸಂದರ್ಭದಲ್ಲಿ ಮಣಿಪುರ (21 ರಿಂದ 32) ಮತ್ತು ಗೋವಾದಲ್ಲಿ (13 ರಿಂದ 20) ಬಿಜೆಪಿ ಶಾಸಕರ ಸಂಖ್ಯೆ ಏರಿಕೆಯಾಗಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಶಾಸಕರ ಸಂಖ್ಯೆ 2017ರಲ್ಲಿ 47 ಇದ್ದಿದ್ದು ಈಗ 111 ಆಗಿದೆ. ಬಿಜೆಪಿಯ ರ್‍ಯಾಲಿಗಳು ಮತ್ತು ಪ್ರಧಾನ ಮಂತ್ರಿಗಳ ಕೋಮು ಧ್ರುವೀಕರಣವು 2014 ಮತ್ತು 2017ರಲ್ಲಿ ಕೆಲಸ ಮಾಡಿದಂತೆ ಇನ್ನು ಮುಂದೆ ಚುನಾವಣಾ ಲಾಭ ತಂದುಕೊಡುವುದಿಲ್ಲ ಎಂಬುದು ಬಿಜೆಪಿಗೆ ಸಂದೇಶವಾಗಿದೆ.

ಹಿಂದೂಯೇತರರು ಪ್ರಧಾನವಾಗಿರುವ ರಾಜ್ಯಗಳಲ್ಲಿ ಹೊಸಬರು ಸಹ ಹಿಂದುತ್ವ ಸಿದ್ಧಾಂತವನ್ನು ಸೋಲಿಸಬಹುದು ಎಂಬುದು ಆಪ್‌ನಂತಹ ಪಕ್ಷಗಳಿಗೆ ಸಂದೇಶವಾಗಿದೆ. ರಾಷ್ಟ್ರೀಯ ಪಕ್ಷವಾಗಬೇಕೆಂಬ ಆಕಾಂಕ್ಷೆಯೊಂದಿಗೆ ಹಾತೊರೆಯುತ್ತಿರುವ ಟಿಎಂಸಿಯಂತಹ ಪಕ್ಷಗಳು ಇನ್ನೂ ಸ್ವಲ್ಪ ಸಮಯದವರೆಗೆ ಕಾಯಬೇಕು ಎಂಬುದು ಆ ಸಂದೇಶವಾಗಿದೆ. ಕಾಂಗ್ರೆಸ್‌ಗೆ ಪಂಜಾಬ್, ಮಣಿಪುರ, ಗೋವಾ ಮತ್ತು ಉತ್ತರಾಖಂಡ ಚುನಾವಣೆಗಳ ಸಂದೇಶವೆಂದರೆ, ಆ ಪಕ್ಷದ ಸಂಪೂರ್ಣ ರೂಪಾಂತರಕ್ಕೆ ನಿರ್ಧರಿಸಿದರೆ ಅದು ಈ ಕ್ಷಣದಿಂದಲೇ ಶುರುವಾಗಬೇಕು ಮತ್ತು ಒಂದು ನಿಮಿಷವನ್ನೂ ವ್ಯರ್ಥ ಮಾಡಬಾರದೆಂಬುದು. ಇದನ್ನು ಮಾಡದೆ ಹೋದರೆ, ಪಕ್ಷದೊಳಗಿನ ಬಂಡಾಯ ಮತ್ತು ಅಲ್ಲಿಂದ ದೂರವಾಗುವ ಪ್ರಕ್ರಿಯೆಗಳು ಹೆಚ್ಚಾಗಲಿವೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬದ ನಾಯಕತ್ವ ಅತ್ಯಗತ್ಯವಾಗಿರಬಹುದು, ಆದರೆ ಅದನ್ನು ಮತದಾರರು ಬಯಸುತ್ತಿಲ್ಲ ಎಂದು ಈ ಚುನಾವಣೆಗಳು ಸ್ಪಷ್ಟಪಡಿಸಿವೆ. ಕಾಂಗ್ರೆಸ್ ತನ್ನ ಅಸ್ತಿತ್ವ ಮತ್ತು ಕಾರ್ಯನಿರ್ವಹಣೆಯ ಎಲ್ಲಾ ಅಂಶಗಳ ಬಗ್ಗೆ ಹೊಸದಾಗಿ ಯೋಚಿಸಬೇಕಾಗಿದೆ.

ಗೋವಾ, ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸ್ಪರ್ಧೆಯಲ್ಲಿದ್ದ ಹಲವು ಸಣ್ಣ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಸಂದೇಶವೆಂದರೆ, ಅವರು ಅತಂತ್ರ ವಿಧಾನಸಭೆಯ ಪರಿಸ್ಥಿತಿ ಏರ್ಪಟ್ಟು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರೊಂದಿಗೆ ಮೈತ್ರಿ ಮಾಡಿಕೊಳ್ಳೋಣ ಎಂದು ಕಾಯುವುದಕ್ಕಿಂತ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದು ಅವರ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂಬುದಾಗಿದೆ. ದೊಡ್ಡ ಪಕ್ಷಗಳಿಗೆ ಬಿ ಟೀಮ್‌ಗಳಾಗಿ ಕೆಲಸ ಮಾಡುವ ಪಕ್ಷಗಳಿಗೂ ಇದೇ ಅನ್ವಯಿಸುತ್ತದೆ. ತಮ್ಮ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಪ್ರಾಣವನ್ನೇ ಪಣಕ್ಕಿಡುವ ಸಾಹಸಿ ಪಕ್ಷಗಳಂತೆ ಬಿಂಬಿಸಿಕೊಳ್ಳುವುದಕ್ಕಿಂತ ಒಂದು ದೊಡ್ಡ ಪಕ್ಷದ ಜೊತೆ ಬಹಿರಂಗವಾಗಿ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಹೆಚ್ಚಿನ ಬಲ ಪಡೆಯಬಹುದು ಎಂಬ ಸಂದೇಶವಿದೆ.

ಚುನಾವಣಾ ರಾಜಕೀಯದಿಂದ ದೂರ ಇರುವವರು, ಚಳವಳಿಗಳು, ನಾಗರಿಕ ಸಮಾಜ ಮತ್ತು ಎನ್‌ಜಿಒಗಳಿಗೆ ಸಂದೇಶವೆಂದರೆ ಪ್ರತ್ಯೇಕವಾದ ಸಾಮಾಜಿಕ ಅಥವಾ ಆರ್ಥಿಕ ಸಮಸ್ಯೆಗಳಿಂದ ಅಥವಾ ಅಮೂರ್ತ ತತ್ವಗಳ ಪರಿಗಣನೆಯಿಂದ ಮತದಾರರು ಪ್ರಭಾವಿತರಾಗುವುದಿಲ್ಲ ಎಂಬುದಾಗಿದೆ. ಅವರು ನೆನಪಿಡಬೇಕಾದ ಸಂಗತಿಯೆಂದರೆ ಪರೋಕ್ಷ ರಾಜಕೀಯ ಎಂಬುದು ಇಂದು ವೇಗವಾಗಿ ನೆಲೆ ಕಳೆದುಕೊಳ್ಳುತ್ತಿದೆ ಮತ್ತು ಚುನಾವಣೆಗಳಲ್ಲಿ ಪ್ರಭಾವ ಬೀರಲು ಬಯಸುವವರು ಯಾವ ಪಕ್ಷದೊಂದಿಗೆ ಮೈತ್ರಿ ಹೊಂದಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾಗಿ ಹೇಳಬೇಕಾಗುತ್ತದೆ. 2021ರ ರೈತ ಹೋರಾಟ ಮತ್ತು 2020ರ ಸಿಎಎ ವಿರೋಧಿ ಹೋರಾಟವು ಪಂಜಾಬ್ ಮತ್ತು ಉತ್ತರ ಪ್ರದೇಶದ ಚುನಾವಣೆಯ ಫಲಿತಾಂಶವನ್ನು ಪ್ರಭಾವಿಸುತ್ತದೆ ಎಂಬ ದೊಡ್ಡ ಭರವಸೆ ಇತ್ತು. ಆದರೆ ಆ ಭರವಸೆ ಫಲ ಕೊಟ್ಟಿಲ್ಲ.

ಈ ಎಲ್ಲಾ ವಾಸ್ತವ ಅಂಶಗಳನ್ನು ಒಟ್ಟು ಮಾಡಿ ನೋಡಿದರೆ ದೇಶಕ್ಕೆ ಯಾವ ಸಂದೇಶವಿದೆ? 2024ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಈಗಲೇ ನಿರ್ಧರಿತವಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಮುಂಚಿತವಾಗಿ ಮತ್ತು ಸೂಕ್ತ ರೀತಿಯಲ್ಲಿ ಮೈತ್ರಿ ಮಾಡಿಕೊಂಡಲ್ಲಿ ಅಂತಹ ಪಕ್ಷಗಳು ಮೈತ್ರಿ ಸಂಸತ್ ಚುನಾವಣೆಯನ್ನು ಎದುರಿಸಬಹುದು ಮತ್ತು ಗೆಲುವು ಸಾಧಿಸಬಹುದಾಗಿದೆ. ನಾಗರಿಕ ಸಮಾಜ ಮತ್ತು ರಾಜಕೀಯ ಕಾರ್ಯಕರ್ತರು ಇದುವರೆಗಿನ ತೆರೆಮರೆಯಲ್ಲಿರುವ ಅಭ್ಯಾಸ ತೊರೆದರೆ ಮತ್ತು ಆಯಾ ರಾಜ್ಯಗಳಲ್ಲಿ ತಮ್ಮ ಆಯ್ಕೆಯ ಪಕ್ಷದ ಹಿಂದೆ ಬಹಿರಂಗವಾಗಿ ನಿಂತರೆ ಬಿಜೆಪಿಯನ್ನು ಸೋಲಿಸಲು ಆಶಿಸಬಹುದು. 2022ರ ಚುನಾವಣೆಯ ಫಲಿತಾಂಶಗಳು
ತೋರಿಸುವುದೇನೆಂದರೆ ದಕ್ಷಿಣ ಭಾರತವು ಹಿಂದುತ್ವ ಸಿದ್ಧಾಂತಕ್ಕೆ ಭೇದಿಸಲಾಗದ ಚಕ್ರವ್ಯೂಹವಾಗಿಯೇ ಉಳಿದಿದೆ. ಇಲ್ಲಿ ಹಿಂದುತ್ವ ತನ್ನ ಹೊಳಪನ್ನು ಕಳೆದುಕೊಂಡಿದೆ.

ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಹೊಸದಾದ, ತರ್ಕಬದ್ದವಾದ (ವೈಚಾರಿಕವಾದ), ಅದೇ ರೀತಿ ಭಾವನಾತ್ಮಕವಾದ ಹೊಸ ನಿರೂಪಣೆಯನ್ನು ಮತದಾರರು ಬಯಸುತ್ತಿದ್ದಾರೆ ಎಂಬುದು ಎಲ್ಲಾ ಪಕ್ಷಗಳಿಗೆ ಈ ಚುನಾವಣೆಯ ಸಂದೇಶವಾಗಿದೆ. ಕಳೆದ ಏಳು ವರ್ಷಗಳಲ್ಲಿ ತೆವಳುವುದನ್ನು ಕಲಿತ ಮಾಧ್ಯಮಗಳು ಹೇಗೆ ನಿಲುವು ತಳೆಯಬೇಕು ಎಂಬುದನ್ನು ಮರೆತಿವೆ, ಹಾಗಾಗಿಯೇ ಚುನಾವಣಾ ಫಲಿತಾಂಶವನ್ನು ಬಿಜೆಪಿಗೆ ಅಭೂತಪೂರ್ವ ಜಯ ಎಂದು ಬಿಂಬಿಸುತ್ತಿವೆ. ಬಿಜೆಪಿ ನಾಯಕರು ಕೂಡ ಈ ಕ್ಷಣವನ್ನು ವಿಜಯೋತ್ಸವದ ಕ್ಷಣವನ್ನಾಗಿ
ಆಚರಿಸಿದರು. ಖಂಡಿತವಾಗಿ 2024 ಕೇಕ್-ವಾಕ್ ಅಲ್ಲ ಎಂದು ಅವರಿಬ್ಬರಿಗೂ ತಿಳಿದಿದೆ. ನಾಗರಿಕ
ಸಮಾಜವು ತಕ್ಷಣವೇ ನಿರುತ್ಸಾಹಗೊಂಡಿದೆ ಮತ್ತು ಪಕ್ಷಪಾತವಿಲ್ಲದ ವಿಶ್ಲೇಷಣೆ ಮತ್ತು ಹೊಸ ಸಂಕಲ್ಪಗಳಿಗೆ ಇದು ಕ್ಷಣವಾಗಿದೆ ಎಂಬುದನ್ನು ಮರೆತಿದೆ. ಹಳೆಯ ತರ್ಕ ಮತ್ತು ಚಿಂತನೆಯ ಅಭ್ಯಾಸದ ಮುಖವಾಡಗಳನ್ನು ಕಿತ್ತೆಸೆಯದ ಹೊರತು ಹಳೆಯ ಘೋಷಣೆಗಳು ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂಬುದನ್ನು ಅದು ಮರೆತಿದೆ. ನಾವೆಲ್ಲರೂ ನಮ್ಮನ್ನು ಪರಿವರ್ತಿಸಿಕೊಳ್ಳುವ, ಸಂಕುಚಿತ ಉದ್ದೇಶಗಳನ್ನು ಬದಿಗಿಟ್ಟು ಪ್ರಜಾಪ್ರಭುತ್ವವನ್ನು ಬಲಪಡಿಸುವ ಕೆಲಸ ಮಾಡುವ ಕ್ಷಣ ಇದು. ಅದಕ್ಕೆ ಮತದಾರರು ಸ್ಪಷ್ಟ ಕರೆ ನೀಡಿದ್ದಾರೆ. ಅವರ ಮಾತನ್ನು ಕೇಳಲು ನಾವು ಸಿದ್ಧರಿದ್ದೇವೆಯೇ?

ಕನ್ನಡಕ್ಕೆ: ಮುತ್ತುರಾಜ್

ಪ್ರೊ. ಜಿ ಎನ್ ದೇವಿ

ಪ್ರೊ ಜಿ ಎನ್ ದೇವಿ
ಭಾರತದ ಖ್ಯಾತ ಚಿಂತಕರಲ್ಲಿ ಒಬ್ಬರಾದ ದೇವಿ ಅವರು, ಪೀಪಲ್ ಲಿಂಗ್ವಿಸ್ಟಿಕ್ಸ್ ಸರ್ವೆ ಮೂಲಕ ಚಿರಪರಿಚಿತರು. ‘ಆಫ್ಟರ್ ಅಮ್ನೇಶಿಯಾ’ ಪುಸ್ತಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಚಳವಳಿಗಳ ಸಂಗಾತಿಯಾಗಿರುವ ದೇವಿ ಸದ್ಯಕ್ಕೆ ದಿ ಸೌತ್ ಫೋರಮ್‌ನ ಸಂಚಾಲಕರು.


ಇದನ್ನೂ ಓದಿ: ಮತೀಯ ಗೂಂಡಾಗಿರಿಯಿಂದ ಮುಸ್ಲಿಮರ ವ್ಯಾಪಾರ ನಿಷೇಧದವರೆಗೆ: ಬೊಮ್ಮಾಯಿ ಸರ್ಕಾರದ ಮತಾಂಧತೆಯ ಹೆಜ್ಜೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...