Homeಮುಖಪುಟಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೇಳುವುದೇನು?

ಐದು ರಾಜ್ಯಗಳ ಚುನಾವಣಾ ಫಲಿತಾಂಶ ಹೇಳುವುದೇನು?

- Advertisement -
- Advertisement -

ಇತ್ತೀಚಿಗೆ ನಡೆದ ಐದು ರಾಜ್ಯಗಳ ಚುನಾವಣೆಗಳು ಮತ್ತು ಆ ಚುನಾವಣೆಗಳ ಫಲಿತಾಂಶಗಳು ದೇಶಕ್ಕೆ ಹಲವಾರು ಸೂಚ್ಯವಾದ ಸಂದೇಶಗಳನ್ನು ನೀಡಬಯಸುತ್ತಿವೆ.

ಸದ್ಯ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ಸಂದೇಶವೇನೆಂದರೆ- ಐದು ರಾಜ್ಯಗಳಲ್ಲಿ ಬಿಜೆಪಿ ಟಿಕೆಟ್ ಅಡಿಯಲ್ಲಿ ಗೆದ್ದಿರುವ ಶಾಸಕರ ಸಂಖ್ಯೆಯಲ್ಲಿ ಕುಸಿತವಾಗಿದೆ. ಎಲ್ಲಾ ಐದು ರಾಜ್ಯಗಳನ್ನು ಪರಿಗಣಿಸಿದಾಗ, ಈ ವರ್ಷ 356 ಶಾಸಕರು ಬಿಜೆಪಿ ಟಿಕೆಟ್‌ನಲ್ಲಿ ಆಯ್ಕೆಯಾದರೆ 2017ರ ಚುನಾವಣೆಗಳಲ್ಲಿ ಆ ಸಂಖ್ಯೆ 406 ಆಗಿತ್ತು. ಅಂದರೆ ಕಳೆದ ಚುನಾವಣೆಗಿಂತ 50 ಶಾಸಕರು ಈ ಬಾರಿ ಕಡಿಮೆಯಾಗಿದ್ದಾರೆ. ಶುದ್ಧ ಸಂಖ್ಯಾತ್ಮಕ ಪರಿಭಾಷೆಯಲ್ಲಿ ಹೇಳುವುದಾದರೆ ಉತ್ತರ ಪ್ರದೇಶ (312 ರಿಂದ 255), ಉತ್ತರಾ ಖಂಡ (57 ರಿಂದ 47), ಪಂಜಾಬ್ (03 ರಿಂದ 02) ರಾಜ್ಯಗಳಲ್ಲಿ ಬಿಜೆಪಿ ಶಾಸಕರ ಸಂಖ್ಯೆ ಕುಸಿದಿದೆ. ಇದೇ ಸಂದರ್ಭದಲ್ಲಿ ಮಣಿಪುರ (21 ರಿಂದ 32) ಮತ್ತು ಗೋವಾದಲ್ಲಿ (13 ರಿಂದ 20) ಬಿಜೆಪಿ ಶಾಸಕರ ಸಂಖ್ಯೆ ಏರಿಕೆಯಾಗಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಶಾಸಕರ ಸಂಖ್ಯೆ 2017ರಲ್ಲಿ 47 ಇದ್ದಿದ್ದು ಈಗ 111 ಆಗಿದೆ. ಬಿಜೆಪಿಯ ರ್‍ಯಾಲಿಗಳು ಮತ್ತು ಪ್ರಧಾನ ಮಂತ್ರಿಗಳ ಕೋಮು ಧ್ರುವೀಕರಣವು 2014 ಮತ್ತು 2017ರಲ್ಲಿ ಕೆಲಸ ಮಾಡಿದಂತೆ ಇನ್ನು ಮುಂದೆ ಚುನಾವಣಾ ಲಾಭ ತಂದುಕೊಡುವುದಿಲ್ಲ ಎಂಬುದು ಬಿಜೆಪಿಗೆ ಸಂದೇಶವಾಗಿದೆ.

ಹಿಂದೂಯೇತರರು ಪ್ರಧಾನವಾಗಿರುವ ರಾಜ್ಯಗಳಲ್ಲಿ ಹೊಸಬರು ಸಹ ಹಿಂದುತ್ವ ಸಿದ್ಧಾಂತವನ್ನು ಸೋಲಿಸಬಹುದು ಎಂಬುದು ಆಪ್‌ನಂತಹ ಪಕ್ಷಗಳಿಗೆ ಸಂದೇಶವಾಗಿದೆ. ರಾಷ್ಟ್ರೀಯ ಪಕ್ಷವಾಗಬೇಕೆಂಬ ಆಕಾಂಕ್ಷೆಯೊಂದಿಗೆ ಹಾತೊರೆಯುತ್ತಿರುವ ಟಿಎಂಸಿಯಂತಹ ಪಕ್ಷಗಳು ಇನ್ನೂ ಸ್ವಲ್ಪ ಸಮಯದವರೆಗೆ ಕಾಯಬೇಕು ಎಂಬುದು ಆ ಸಂದೇಶವಾಗಿದೆ. ಕಾಂಗ್ರೆಸ್‌ಗೆ ಪಂಜಾಬ್, ಮಣಿಪುರ, ಗೋವಾ ಮತ್ತು ಉತ್ತರಾಖಂಡ ಚುನಾವಣೆಗಳ ಸಂದೇಶವೆಂದರೆ, ಆ ಪಕ್ಷದ ಸಂಪೂರ್ಣ ರೂಪಾಂತರಕ್ಕೆ ನಿರ್ಧರಿಸಿದರೆ ಅದು ಈ ಕ್ಷಣದಿಂದಲೇ ಶುರುವಾಗಬೇಕು ಮತ್ತು ಒಂದು ನಿಮಿಷವನ್ನೂ ವ್ಯರ್ಥ ಮಾಡಬಾರದೆಂಬುದು. ಇದನ್ನು ಮಾಡದೆ ಹೋದರೆ, ಪಕ್ಷದೊಳಗಿನ ಬಂಡಾಯ ಮತ್ತು ಅಲ್ಲಿಂದ ದೂರವಾಗುವ ಪ್ರಕ್ರಿಯೆಗಳು ಹೆಚ್ಚಾಗಲಿವೆ. ಅಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬದ ನಾಯಕತ್ವ ಅತ್ಯಗತ್ಯವಾಗಿರಬಹುದು, ಆದರೆ ಅದನ್ನು ಮತದಾರರು ಬಯಸುತ್ತಿಲ್ಲ ಎಂದು ಈ ಚುನಾವಣೆಗಳು ಸ್ಪಷ್ಟಪಡಿಸಿವೆ. ಕಾಂಗ್ರೆಸ್ ತನ್ನ ಅಸ್ತಿತ್ವ ಮತ್ತು ಕಾರ್ಯನಿರ್ವಹಣೆಯ ಎಲ್ಲಾ ಅಂಶಗಳ ಬಗ್ಗೆ ಹೊಸದಾಗಿ ಯೋಚಿಸಬೇಕಾಗಿದೆ.

ಗೋವಾ, ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸ್ಪರ್ಧೆಯಲ್ಲಿದ್ದ ಹಲವು ಸಣ್ಣ ಮತ್ತು ಪ್ರಾದೇಶಿಕ ಪಕ್ಷಗಳಿಗೆ ಸಂದೇಶವೆಂದರೆ, ಅವರು ಅತಂತ್ರ ವಿಧಾನಸಭೆಯ ಪರಿಸ್ಥಿತಿ ಏರ್ಪಟ್ಟು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರೊಂದಿಗೆ ಮೈತ್ರಿ ಮಾಡಿಕೊಳ್ಳೋಣ ಎಂದು ಕಾಯುವುದಕ್ಕಿಂತ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವುದು ಅವರ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂಬುದಾಗಿದೆ. ದೊಡ್ಡ ಪಕ್ಷಗಳಿಗೆ ಬಿ ಟೀಮ್‌ಗಳಾಗಿ ಕೆಲಸ ಮಾಡುವ ಪಕ್ಷಗಳಿಗೂ ಇದೇ ಅನ್ವಯಿಸುತ್ತದೆ. ತಮ್ಮ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಪ್ರಾಣವನ್ನೇ ಪಣಕ್ಕಿಡುವ ಸಾಹಸಿ ಪಕ್ಷಗಳಂತೆ ಬಿಂಬಿಸಿಕೊಳ್ಳುವುದಕ್ಕಿಂತ ಒಂದು ದೊಡ್ಡ ಪಕ್ಷದ ಜೊತೆ ಬಹಿರಂಗವಾಗಿ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಹೆಚ್ಚಿನ ಬಲ ಪಡೆಯಬಹುದು ಎಂಬ ಸಂದೇಶವಿದೆ.

ಚುನಾವಣಾ ರಾಜಕೀಯದಿಂದ ದೂರ ಇರುವವರು, ಚಳವಳಿಗಳು, ನಾಗರಿಕ ಸಮಾಜ ಮತ್ತು ಎನ್‌ಜಿಒಗಳಿಗೆ ಸಂದೇಶವೆಂದರೆ ಪ್ರತ್ಯೇಕವಾದ ಸಾಮಾಜಿಕ ಅಥವಾ ಆರ್ಥಿಕ ಸಮಸ್ಯೆಗಳಿಂದ ಅಥವಾ ಅಮೂರ್ತ ತತ್ವಗಳ ಪರಿಗಣನೆಯಿಂದ ಮತದಾರರು ಪ್ರಭಾವಿತರಾಗುವುದಿಲ್ಲ ಎಂಬುದಾಗಿದೆ. ಅವರು ನೆನಪಿಡಬೇಕಾದ ಸಂಗತಿಯೆಂದರೆ ಪರೋಕ್ಷ ರಾಜಕೀಯ ಎಂಬುದು ಇಂದು ವೇಗವಾಗಿ ನೆಲೆ ಕಳೆದುಕೊಳ್ಳುತ್ತಿದೆ ಮತ್ತು ಚುನಾವಣೆಗಳಲ್ಲಿ ಪ್ರಭಾವ ಬೀರಲು ಬಯಸುವವರು ಯಾವ ಪಕ್ಷದೊಂದಿಗೆ ಮೈತ್ರಿ ಹೊಂದಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾಗಿ ಹೇಳಬೇಕಾಗುತ್ತದೆ. 2021ರ ರೈತ ಹೋರಾಟ ಮತ್ತು 2020ರ ಸಿಎಎ ವಿರೋಧಿ ಹೋರಾಟವು ಪಂಜಾಬ್ ಮತ್ತು ಉತ್ತರ ಪ್ರದೇಶದ ಚುನಾವಣೆಯ ಫಲಿತಾಂಶವನ್ನು ಪ್ರಭಾವಿಸುತ್ತದೆ ಎಂಬ ದೊಡ್ಡ ಭರವಸೆ ಇತ್ತು. ಆದರೆ ಆ ಭರವಸೆ ಫಲ ಕೊಟ್ಟಿಲ್ಲ.

ಈ ಎಲ್ಲಾ ವಾಸ್ತವ ಅಂಶಗಳನ್ನು ಒಟ್ಟು ಮಾಡಿ ನೋಡಿದರೆ ದೇಶಕ್ಕೆ ಯಾವ ಸಂದೇಶವಿದೆ? 2024ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಈಗಲೇ ನಿರ್ಧರಿತವಾಗಿಲ್ಲ ಎಂಬುದು ಸ್ಪಷ್ಟವಾಗಿದೆ. ಮುಂಚಿತವಾಗಿ ಮತ್ತು ಸೂಕ್ತ ರೀತಿಯಲ್ಲಿ ಮೈತ್ರಿ ಮಾಡಿಕೊಂಡಲ್ಲಿ ಅಂತಹ ಪಕ್ಷಗಳು ಮೈತ್ರಿ ಸಂಸತ್ ಚುನಾವಣೆಯನ್ನು ಎದುರಿಸಬಹುದು ಮತ್ತು ಗೆಲುವು ಸಾಧಿಸಬಹುದಾಗಿದೆ. ನಾಗರಿಕ ಸಮಾಜ ಮತ್ತು ರಾಜಕೀಯ ಕಾರ್ಯಕರ್ತರು ಇದುವರೆಗಿನ ತೆರೆಮರೆಯಲ್ಲಿರುವ ಅಭ್ಯಾಸ ತೊರೆದರೆ ಮತ್ತು ಆಯಾ ರಾಜ್ಯಗಳಲ್ಲಿ ತಮ್ಮ ಆಯ್ಕೆಯ ಪಕ್ಷದ ಹಿಂದೆ ಬಹಿರಂಗವಾಗಿ ನಿಂತರೆ ಬಿಜೆಪಿಯನ್ನು ಸೋಲಿಸಲು ಆಶಿಸಬಹುದು. 2022ರ ಚುನಾವಣೆಯ ಫಲಿತಾಂಶಗಳು
ತೋರಿಸುವುದೇನೆಂದರೆ ದಕ್ಷಿಣ ಭಾರತವು ಹಿಂದುತ್ವ ಸಿದ್ಧಾಂತಕ್ಕೆ ಭೇದಿಸಲಾಗದ ಚಕ್ರವ್ಯೂಹವಾಗಿಯೇ ಉಳಿದಿದೆ. ಇಲ್ಲಿ ಹಿಂದುತ್ವ ತನ್ನ ಹೊಳಪನ್ನು ಕಳೆದುಕೊಂಡಿದೆ.

ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಹೊಸದಾದ, ತರ್ಕಬದ್ದವಾದ (ವೈಚಾರಿಕವಾದ), ಅದೇ ರೀತಿ ಭಾವನಾತ್ಮಕವಾದ ಹೊಸ ನಿರೂಪಣೆಯನ್ನು ಮತದಾರರು ಬಯಸುತ್ತಿದ್ದಾರೆ ಎಂಬುದು ಎಲ್ಲಾ ಪಕ್ಷಗಳಿಗೆ ಈ ಚುನಾವಣೆಯ ಸಂದೇಶವಾಗಿದೆ. ಕಳೆದ ಏಳು ವರ್ಷಗಳಲ್ಲಿ ತೆವಳುವುದನ್ನು ಕಲಿತ ಮಾಧ್ಯಮಗಳು ಹೇಗೆ ನಿಲುವು ತಳೆಯಬೇಕು ಎಂಬುದನ್ನು ಮರೆತಿವೆ, ಹಾಗಾಗಿಯೇ ಚುನಾವಣಾ ಫಲಿತಾಂಶವನ್ನು ಬಿಜೆಪಿಗೆ ಅಭೂತಪೂರ್ವ ಜಯ ಎಂದು ಬಿಂಬಿಸುತ್ತಿವೆ. ಬಿಜೆಪಿ ನಾಯಕರು ಕೂಡ ಈ ಕ್ಷಣವನ್ನು ವಿಜಯೋತ್ಸವದ ಕ್ಷಣವನ್ನಾಗಿ
ಆಚರಿಸಿದರು. ಖಂಡಿತವಾಗಿ 2024 ಕೇಕ್-ವಾಕ್ ಅಲ್ಲ ಎಂದು ಅವರಿಬ್ಬರಿಗೂ ತಿಳಿದಿದೆ. ನಾಗರಿಕ
ಸಮಾಜವು ತಕ್ಷಣವೇ ನಿರುತ್ಸಾಹಗೊಂಡಿದೆ ಮತ್ತು ಪಕ್ಷಪಾತವಿಲ್ಲದ ವಿಶ್ಲೇಷಣೆ ಮತ್ತು ಹೊಸ ಸಂಕಲ್ಪಗಳಿಗೆ ಇದು ಕ್ಷಣವಾಗಿದೆ ಎಂಬುದನ್ನು ಮರೆತಿದೆ. ಹಳೆಯ ತರ್ಕ ಮತ್ತು ಚಿಂತನೆಯ ಅಭ್ಯಾಸದ ಮುಖವಾಡಗಳನ್ನು ಕಿತ್ತೆಸೆಯದ ಹೊರತು ಹಳೆಯ ಘೋಷಣೆಗಳು ಇನ್ನು ಮುಂದೆ ಕೆಲಸ ಮಾಡುವುದಿಲ್ಲ ಎಂಬುದನ್ನು ಅದು ಮರೆತಿದೆ. ನಾವೆಲ್ಲರೂ ನಮ್ಮನ್ನು ಪರಿವರ್ತಿಸಿಕೊಳ್ಳುವ, ಸಂಕುಚಿತ ಉದ್ದೇಶಗಳನ್ನು ಬದಿಗಿಟ್ಟು ಪ್ರಜಾಪ್ರಭುತ್ವವನ್ನು ಬಲಪಡಿಸುವ ಕೆಲಸ ಮಾಡುವ ಕ್ಷಣ ಇದು. ಅದಕ್ಕೆ ಮತದಾರರು ಸ್ಪಷ್ಟ ಕರೆ ನೀಡಿದ್ದಾರೆ. ಅವರ ಮಾತನ್ನು ಕೇಳಲು ನಾವು ಸಿದ್ಧರಿದ್ದೇವೆಯೇ?

ಕನ್ನಡಕ್ಕೆ: ಮುತ್ತುರಾಜ್

ಪ್ರೊ. ಜಿ ಎನ್ ದೇವಿ

ಪ್ರೊ ಜಿ ಎನ್ ದೇವಿ
ಭಾರತದ ಖ್ಯಾತ ಚಿಂತಕರಲ್ಲಿ ಒಬ್ಬರಾದ ದೇವಿ ಅವರು, ಪೀಪಲ್ ಲಿಂಗ್ವಿಸ್ಟಿಕ್ಸ್ ಸರ್ವೆ ಮೂಲಕ ಚಿರಪರಿಚಿತರು. ‘ಆಫ್ಟರ್ ಅಮ್ನೇಶಿಯಾ’ ಪುಸ್ತಕಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ. ಚಳವಳಿಗಳ ಸಂಗಾತಿಯಾಗಿರುವ ದೇವಿ ಸದ್ಯಕ್ಕೆ ದಿ ಸೌತ್ ಫೋರಮ್‌ನ ಸಂಚಾಲಕರು.


ಇದನ್ನೂ ಓದಿ: ಮತೀಯ ಗೂಂಡಾಗಿರಿಯಿಂದ ಮುಸ್ಲಿಮರ ವ್ಯಾಪಾರ ನಿಷೇಧದವರೆಗೆ: ಬೊಮ್ಮಾಯಿ ಸರ್ಕಾರದ ಮತಾಂಧತೆಯ ಹೆಜ್ಜೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...