Homeಮುಖಪುಟಗೃಹ ಸಚಿವಾಲಯ ಏನು ಮಾಡುತ್ತಿದೆ: ನಾಗಾಲ್ಯಾಂಡ್‌ನಲ್ಲಿ ನಾಗರಿಕ ಹತ್ಯೆ ಖಂಡಿಸಿ ರಾಹುಲ್‌ ಟ್ವೀಟ್‌

ಗೃಹ ಸಚಿವಾಲಯ ಏನು ಮಾಡುತ್ತಿದೆ: ನಾಗಾಲ್ಯಾಂಡ್‌ನಲ್ಲಿ ನಾಗರಿಕ ಹತ್ಯೆ ಖಂಡಿಸಿ ರಾಹುಲ್‌ ಟ್ವೀಟ್‌

- Advertisement -
- Advertisement -

ಸೇನಾ ಕಾರ್ಯಾಚರಣೆ ವೇಳೆ ನಾಗಾಲ್ಯಾಂಡ್‌ನಲ್ಲಿ ನಾಗರಿಕರು ಸಾವನ್ನಪ್ಪಿದ ಘಟನೆ ಹೃದಯ ವಿದ್ರಾವಕ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಸರ್ಕಾರ ನಿಜವಾದ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದು, “ನಾಗರಿಕರು ಅಥವಾ ಭದ್ರತಾ ಸಿಬ್ಬಂದಿ ನಮ್ಮ ಸ್ವಂತ ಭೂಮಿಯಲ್ಲಿ ಸುರಕ್ಷಿತವಾಗಿಲ್ಲದಿದ್ದಾಗ ಗೃಹ ಸಚಿವಾಲಯವು ನಿಖರವಾಗಿ ಏನು ಮಾಡುತ್ತಿದೆ?” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯೆಗಳ ಹೊಣೆಗಾರಿಕೆಯನ್ನು ಸೇನೆ ಹೊರುತ್ತಿದೆ ಎಂದು ದಿಮಾಪುರ್ ಮೂಲದ 3 ಕಾರ್ಪ್ಸ್ ಡಿಸೆಂಬರ್ 5ರ ಹೇಳಿಕೆಯಲ್ಲಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಮ್ಯಾನ್ಮಾರ್ ಗಡಿಯಲ್ಲಿರುವ ಮೋನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ದಂಗೆಕೋರರ ವಿರುದ್ಧದ ಕಾರ್ಯಾಚರಣೆಗೆ ಸಜ್ಜಾಗಿದ್ದವು. ದಂಗೆಕೋರರ ಚಲನವಲನದ ಬಗ್ಗೆ ವಿಶ್ವಾಸಾರ್ಹ ಗುಪ್ತಚರ ಆಧಾರದ ಮೇಲೆ ಓಟಿಂಗ್ ಗ್ರಾಮದ ಬಳಿ ದಾಳಿ ನಡೆಸಿದ್ದರು. ಆದರೆ ತಿರು-ಓಟಿಂಗ್ ರಸ್ತೆಯಲ್ಲಿ ಗ್ರಾಮಸ್ಥರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಭದ್ರತಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡಿನ ದಾಳಿಯಿಂದ ಆಕ್ರೋಶಗೊಂಡ ಸ್ಥಳೀಯರು ಭದ್ರತಾ ಪಡೆಗಳನ್ನು ಸುತ್ತುವರೆದರು. ಹೀಗಾಗಿ ಆತ್ಮ ರಕ್ಷಣೆಗಾಗಿ ಗುಂಪಿನ ಮೇಲೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದರು. ಇದರಿಂದ ಕನಿಷ್ಠ ಏಳು ಗ್ರಾಮಸ್ಥರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಭದ್ರತಾ ಪಡೆಗಳ ಮೂರು ವಾಹನಗಳಿಗೂ ಬೆಂಕಿ ಹಚ್ಚಲಾಗಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ನಾಗಾಲ್ಯಾಂಡ್‌ನ ಓಟಿಂಗ್‌ನಲ್ಲಿ ನಡೆದ ದುರದೃಷ್ಟಕರ ಘಟನೆಯಿಂದ ನೋವಾಗಿದೆ. ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಎಸ್‌ಐಟಿ ಈ ಘಟನೆಯನ್ನು ಕೂಲಂಕಷವಾಗಿ ತನಿಖೆ ನಡೆಸಿ ನ್ಯಾಯ ಒದಗಿಸುತ್ತದೆ” ಎಂದಿದ್ದಾರೆ.

ಘಟನೆಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಣೆ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮುಖ್ಯಮಂತ್ರಿ ನೆಫಿಯು ರಿಯೊ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಅಕ್ರಮ ನೇಮಕಾತಿ ವಿರುದ್ಧ ಪ್ರತಿಭಟನೆ- ದಲಿತ, ಒಬಿಸಿ ಯುವಜನರ ಮೇಲೆ ಕ್ರೂರ ಲಾಠೀ ಚಾರ್ಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಗಲ್ಯಾಂಡ್ ನಲ್ಲಿ ರಾಹುಲ್ ವಂಶಸ್ಥರಿಗೆ ದಾಳಿ ಆಗಿರಬೇಕು ಅನಿಸುತ್ತೇ ಅದಕ್ಕೆ ಕಾಳಜಿ ಮಾಡ್ತಿದ್ದಾರೆ.ಕರ್ನಾಟಕ ದಲ್ಲಿ ಹಿಂದೂಗಳ ಮೇಲೆ ದಾಳಿಗಳು ಆದಾಗ ರಾಹುಲ್ ಗೆ ನೆನಪಿಗೆ ಬರಲಿಲ್ಲ ಅನಿಸುತ್ತೇ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...