Homeಮುಖಪುಟಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

ಜನ ಏನ್‌ ಮಾಡ್ಬೇಕು ಅಂತ ಹೇಳ್ತಿರೋ ಸರ್ಕಾರ ತಾನೇನು ಮಾಡಿದೀನಿ ಅಂತನೇ ಹೇಳ್ತಿಲ್ಲ?

- Advertisement -
- Advertisement -

ಒಂದಾನೊಂದು ಕಾಲದಾಗ ಜಾನ್ ಕೆನಡಿ ಅಂತ ಒಬ್ಬರು ಇದ್ದರು. ಅವರು ಅಮೆರಿಕದ ಅಧ್ಯಕ್ಷರಾಗಿದ್ದರು. ಅವರು ತಮ್ಮ ಸಣ್ಣ ಜೀವನ ಕಾಲದಾಗ ಅನೇಕ ಒಳ್ಳೆ ಕೆಲಸ ಮಾಡಿದರು.

ಅವರು 1960ರೊಳಗ ತಮ್ಮ 43ನೇ ವಯಸ್ಸಿಗೆ ಅಧ್ಯಕ್ಷೀಯ ಚುನಾವಣೆ ಗೆದ್ದು ಅತಿಕಮ್ಮಿ ವಯಸ್ಸಿನ ಅಧ್ಯಕ್ಷ ಅಂತ ಅಮೆರಿಕದ ಇತಿಹಾಸದಾಗ ದಾಖಲು ಮಾಡಿದರು. ಆರ್ಥಿಕ ಹಿಂಜರಿಕೆಯಿಂದ ಹೊಡೆತ ತಿಂದಿದ್ದ ಅಮೆರಿಕಾವನ್ನು ಬೆಳವಣಿಗೆಯ ದಾರಿಯೊಳಗ ದೂಡಿದರು. ವಿಶ್ವಾದ್ಯಂತ ಶಾಂತಿ ಹಾಗೂ ಅಭಿವೃದ್ಧಿ ಸ್ಥಾಪಿಸಲಿಕ್ಕೆ ಪೀಸ್‍ಕೋರ್ ಅನ್ನೋ ಸಂಸ್ಥೆ ಸುರು ಮಾಡಿದರು. ರಷಿಯಾ ಒಕ್ಕೂಟದ ಅಧ್ಯಕ್ಷ ಕ್ರುಷೇವ ಅವರ ಜೊತೆಗೆ ಶಾಂತಿ ಒಪ್ಪಂದ ಸಹಿ ಮಾಡಿ ಪರಮಾಣು ಯುದ್ಧ ತಪ್ಪಿಸಿದರು. ನಿರುದ್ಯೋಗಿಗಳಿಗೆ ಭತ್ಯೆ, ಕೌಶಲ್ಯ ತರಬೇತಿ ಮುಂತಾದ ಯೋಜನೆಗಳನ್ನು ಆರಂಭ ಮಾಡಿದರು. ಕರಿಯರು ಹೆಚ್ಚಾಗಿ ಇದ್ದ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು, ಕರಿಯರ ಶಿಕ್ಷಣದ ಸಲುವಾಗಿ ತೆರೆಯಲಾದ ವಿಶೇಷ ಕಾಲೇಜುಗಳನ್ನು ಬೆಳೆಸಲು ಅನುದಾನ ನೀಡಿದರು. ಮಹಿಳಾ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀತಿಯ ಅನುವಾಗಿ ಹೆಚ್ಚಿನ ಕೂಲಿ ಸಿಗುವಂತೆ ಕಾನೂನು ಮಾಡಿದರು, ಇತ್ಯಾದಿ.

ಜಾನ್ ಕೆನಡಿ

ತಮ್ಮ ಚುನಾವಣೆಯ ಗೆಲುವನ್ನು ಅವರು ಇದು `ಒಂದು ಪಕ್ಷದ ಗೆಲುವು ಅಲ್ಲ. ಸ್ವಾತಂತ್ರ್ಯದ ಉತ್ಸವ’ ಅಂತ ಬಣ್ಣಿಸಿದರು. ಇದು ಮನುಷ್ಯರೆಲ್ಲರ ಉತ್ಥಾನದ ಅವಕಾಶದ ದಾರಿ. ಎಲ್ಲ ರೀತಿಯ ಬಡತನವನ್ನೂ, ಗುಲಾಮಗಿರಿಯನ್ನು ತೊಡೆದುಹಾಕುವ ಅವಕಾಶ ಈಗ ನಮ್ಮ ಮುಂದೆ ಇದೆ ಎಂದವರು. ಆದರ ಅವರ ಒಂದು ಮಾತು ಭಾಳ ಫೇಮಸ್ಸು. ಅದು ನಮಗೆಲ್ಲರಿಗೂ ಗೊತ್ತು. ನಿಮಗಾಗಿ ಈ ದೇಶ ಏನು ಮಾಡುತ್ತದೆ ಎಂದು ಕೇಳಬೇಡಿ. ನೀವು ನಿಮ್ಮ ದೇಶಕ್ಕಾಗಿ ಏನು ನೀಡಬಲ್ಲಿರಿ ಎನ್ನುವುದನ್ನು ಕೇಳಿಕೊಳ್ಳಿರಿ.

ಅವರ ವಿಚಾರಗಳನ್ನು, ಸಿದ್ಧಾಂತಗಳನ್ನು ಮನಸೋ ಇಚ್ಛೆ ಪಾಲಿಸುವವರಿಗೆ ಕೆನಡಿಯನ್ ಅಂತ ಕರೀತಾರ. ಹಂಗಂದರ ಕೆನಡಾದಿಂದ ಬಂದವರು ಅಂತ ಅಲ್ಲ. ಜಾನ್ ಕೆನಡಿಯವರ ವಿಚಾರಗಳನ್ನ, ಕಾರ್ಯಕ್ರಮ- ಯೋಜನೆಗಳನ್ನು ಒಪ್ಪಿಕೊಂಡು ನಡೆಯುವವರು ಅಂತ. ಈಗಿನ ನಮ್ಮ ನಾಯಕರನ್ನು ಕೆನೆಡಿಯನ್ ಅಂತ ಕರೀಬಹುದು ಅಂತೀರೇನು?

ಒಂದು ರೀತಿಯಿಂದ ಅನಬಹುದೋ ಏನೋ. ಅದು ಏನಪಾ ಅಂದರ `ನೀವು ದೇಶಕ್ಕೆ ಏನು ಮಾಡಬಲ್ಲಿರಿ’ ಅನ್ನೋ ಮಾತು. ಇಡೀ ಜಗತ್ತಿನ 177 ದೇಶಗಳಲ್ಲಿ ಈ ಕೊರೊನಾ ವ್ಯಾಧಿ ಹೊಡಕೊಂಡದ. ದೊಡ್ಡ ಸಾಹುಕಾರ ಟ್ರಂಪಣ್ಣನವರಿಂದಾ ಹಿಡಕೊಂಡು ಸಣ್ಣಂಗಡಿ ಶೆಟ್ಟರಾದ ಉಗಾಂಡಾದ ಯಾವೋರಿ ಮುಸೇವಿನಿ ಅವರ ತನಕಾ ಎಲ್ಲಾರೂ ಜನರಿಗೆ `ಹಿಂಗ ಮಾಡರಿ, ಹಂಗ ಮಾಡರಿ, ಹಂಗಂತ ಹಂಗ ಮಾಡಬ್ಯಾಡ್ರಿ’ ಅಂತ ಹೇಳಲಿಕ್ಕೆ ಹತ್ಯಾರ. ಯಾರೂ ನಿಮ್ಮ ಸಲುವಾಗಿ ನಾವು ಏನು ಮಾಡತೇವಿ ಅನ್ನೋದನ್ನ ಹೇಳಲಿಕ್ಕೆ ಒಲ್ಲರು. ಊರು ಮುಂದಿನ ಹಣಮಂತನದೇವರ ಗುಡಿ ಸ್ವಾಮಿ ವಾರಕ್ಕೊಮ್ಮೆ ನೀತಿಪಾಠ ಹೇಳಿದಂಗ ಅವರು ಹೇಳಲಿಕ್ಕೆ ಹತ್ಯಾರ.

ಅವರು ಹೇಳಿದ್ದನ್ನ ನಾವು ಜೀ ಹುಜೂರ್ ಅಂತ ಕೇಳಲಿಕ್ಕೆ ಹತ್ತೇವಿ. ತಿರುಗಿ ಮಾತನಾಡಲಿಕ್ಕೆ ಹತ್ತಿಲ್ಲ. ಪ್ರಶ್ನೆ ಕೇಳಲಿಕ್ಕೆ ನಮಗ ಬರಂಗಿಲ್ಲ.

ಉದಾಹರಣೆಗೆ ಮಹಾಮಹಿಮ ಪ್ರಧಾನಿಗಳು ನೀವು ಕಫ್ರ್ಯೂ ಪಾಲಿಸಿರಿ, 14 ತಾಸು ಹೊರಗ ಬರಬ್ಯಾಡ್ರಿ, ಗಾಡಿ ಓಡಸಬ್ಯಾಡ್ರಿ, ಏನೂ ಖರೀದಿ ಮಾಡಬ್ಯಾಡ್ರಿ, ಒಬ್ಬರಿಗೊಬ್ಬರು ಮಾತು ಆಡಬ್ಯಾಡ್ರಿ, ಇತ್ಯಾದಿ ಇತ್ಯಾದಿ ಅಂತ ಫರಮಾನು ಹೊರಡಿಸಿದಾಗ, ನಾವು ಸುಮ್ಮನೇ ಇದ್ದಿವಿ. ಬೆಂದಕಾಳೂರಿನ ದಂಡಾಧಿಕಾರಿಗಳು ಹೊರಗ ಬಂದರ ಕೇಸು ಹಾಕತೇವಿ ಅಂದರು. ಅವಾಗನೂ ಸುಮ್ಮನೇ ಇದ್ದೆವಿ. ಸಂಜೀಕೆ ಐದಕ್ಕ ಮನೀ ಬಾಲ್ಕನಿಯೊಳಗ ಹೋಗಿ ಚಪ್ಪಾಳೆ ಹೊಡಿಯಿರಿ ಅಂದರ ನಾವು ಶಂಖ, ಜಾಗಟೆ, ತಾಳ, ಡಮರು, ತಾಟು, ತಂಬಿಗಿ ಎಲ್ಲಾನೂ ಬಾರಿಸಿದಿವಿ. ಗುಂಪು ಕಟಿಗೋಬ್ಯಾಡ್ರಿ ಅಂತ ಅವರು ಹೇಳಿದರ ನಾವು ಚಪ್ಪಾಳೆ ಹೊಡೆಯೋ ಪವಿತ್ರ ಕಾರ್ಯಕ್ಕಾಗಿ ಗುಂಪು ಕಟ್ಟಿಕೊಂಡು ಬಿಟ್ಟಿವಿ. ಅದು ಬ್ಯಾರೆ ಮಾತು.

ನಮ್ಮ ಪಂತ ಪ್ರಧಾನರು ನೀವು ಹಿಂಗ ಮಾಡ್ರಿ ಅಂದರು ಆದರ ನಾವು ಏನು ಮಾಡತೇವಿ ಅಂತ ಹೇಳಲಿಲ್ಲ. ಒಂದು ತಾಸು ಭಾಷಣ ಮಾಡಿದರೂ ಸಹಿತ ಕೊರೊನಾ ವಿರುದ್ಧ ಸರಕಾರದ ಯೋಜನೆಗಳು ಏನು ಅನ್ನೋದು ಬಾಯಿ ಬಿಡಲಿಲ್ಲ.

ಹಂಗಾರ ಅವರು ಏನು ಹೇಳಬಹುದಿತ್ತು?-
ಈ ವಿಪತ್ತನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಅದರ ಪರಿಹಾರಕ್ಕ ಏನೇನು ಮಾಡಬಹುದು ಅಂತ ತಿಳಿಸಬಹುದಿತ್ತು. ಆದರ ಅವರು ಅದನ್ನು ಹೇಳಲಿಲ್ಲ. ಚುನಾವಣೆ ರಣತಂತ್ರಜ್ಞ ಪ್ರಶಾಂತ ಕಿಶೋರ ಅವರು ಮೋದಿ ಅವರು ಯಾವ ಕೆಟ್ಟ ಸುದ್ದಿಯನ್ನೂ ಕೊಡಬಾರದು. ಅವರು ಯಾವಾಗಲೂ ಬರೇ ಒಳ್ಳೆ ಸುದ್ದಿ ಕೊಡಬೇಕು ಅಂತ ಹೇಳಿಕೊಟ್ಟಿದ್ದರಂತ. ಇವರು ಅದನ್ನು ಚುನಾವಣೆ ಮುಗದ ಮ್ಯಾಲನೂ ಪಾಲಸಲಿಕ್ಕೆ ಹತ್ಯಾರ.

ಇದಕ್ಕ ಎಷ್ಟು ರೊಕ್ಕ ಇಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಗಿಂತ ಮುಂಚೆ ಹಣಕಾಸಿನ ಮಾತು ಹಗಲೆಲ್ಲಾ ಆಡಿದ ಮೋದಿ ಅವರು ಈಗ ಮಾತಾಡವಲ್ಲರು.

ಅದಕ್ಕೊಂದು ವಿಶೇಷ ತಂಡ ಕಟ್ಟೇವಿ ಅಂತ ಹೇಳಬಹುದಿತ್ತು. ಚುನಾವಣೆ ಕಾರ್ಯಕ್ಕೆ, ಪಕ್ಕದ ಕೆಲಸಕ್ಕೆ ತಂಡ ಕಟ್ಟೋರು ವಿಪತ್ತಿನ ನಿರ್ವಹಣೆಗೆ ಕಟ್ಟತಾರೋ ಇಲ್ಲವೋ, ಗೊತ್ತಿಲ್ಲ.

ಅದರ ಸಲುವಾಗಿ ಒಂದು ಆಸ್ಪತ್ರೆ, ಸಂಶೋಧನಾ ಕೇಂದ್ರ, ಪ್ರಯೋಗಾಲಯ ಇತ್ಯಾದಿ ಮೀಸಲು ಇಡತೇವಿ, ಹೊಸದಾಗಿ ಆರಂಭ ಮಾಡತೇವಿ ಅಂತ ಅನ್ನಬಹುದಿತ್ತು. ಅದನ್ನು ಅನ್ನಲಿಲ್ಲ. ರವಾಂಡಾ, ಸಿಯಾರಾ ಲಿಯೋನ್ ಮುಂತಾದ ಸಣ್ಣಸಣ್ಣ ದೇಶಗಳು ಮಾಡಲಿಕ್ಕೆ ಹತ್ಯಾವು.

ಚೀನಾದವರು ಹತ್ತು ದಿನದಾಗ ಹೊಸಾ ಆಸ್ಪತ್ರೆ ಕಟ್ಟಿದ್ದು ನಾವೆಲ್ಲಾ ನೋಡಿ ಚಪ್ಪಾಳೆ ತಟ್ಟೇವಿ. ಆದರ ಈಗ ನಾಯಕರು ಹೇಳಿದರು ಅಂತ ಚಪ್ಪಾಳೆ ತಟ್ಟಿದಿವಿ. ಅದಕ್ಕೂ ಇದಕ್ಕೂ ನಮಗ ವ್ಯತ್ಯಾಸ ಗೊತ್ತಿಲ್ಲ.

ಚೀನಾದ ಕೊರೊನಾ ಆಸ್ಪತ್ರೆ

ಈಗ ನಮ್ಮ ಮುಂದ ಇರೋದು ಏನು-ಯುದ್ಧನೋ? ಸರ್ಜಿಕಲ್ ಸ್ಟ್ರೈಕೋ? ಹೋರಾಟನೋ? ಅಥವಾ ವಿಪತ್ತೋ? ಕೊರೊನಾ ರೋಗದ ಜೊತೆ ಹೊಡೆದಾಟ ಅಂದರ ಜನರ ಹತ್ತರ ಮುಚ್ಚಿ-ಮುಚ್ಚಿ ಇಡುವಂಥಾ ಸೀಕ್ರೆಟ್ ಏನರ ಅದ ಏನು? ಇದನ್ನ ತಿಳಕೋಬೇಕಾರ ನೀವು ಏನು ಸೈನ್ಯದ ಅಧಿಕಾರಿ ಆಗಿರಬೇಕಿಲ್ಲ. ನಿಮಗ ಕನಿಷ್ಠ ಸಾಮಾನ್ಯ ಜ್ಞಾನ ಇದ್ದರ ಸಾಕು. ಆದರ ಈಗಿನ ಕಾಲ ಹೆಂಗಂದ ಅಂದರ ಬ್ಯಾರೆ ಬೇಕಾದ್ದು ಸಿಗತದ, ಸಾಮಾನ್ಯ ಜ್ಞಾನ ಸಿಗಂಗಿಲ್ಲ. ಅದು ಎಷ್ಟು ಅಪರೂಪ ಅಂದರ ರೊಕ್ಕ ಅಲ್ಲಾ, ಜೀವಾ ಕೊಟ್ಟರೂ ಸಿಗಂಗಿಲ್ಲ. ಇದನ್ನು ಸರಿಮಾಡುವುದು ಘಟಾನುಘಟಿ ನಾಯಕರ ಕಡೆನೂ ಸಾಧ್ಯ ಇಲ್ಲ, ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...